ನೇಕಾರ ಸಮುದಾಯಕ್ಕೆ ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ
ಬೆಂಗಳೂರು, ಮಾರ್ಚ್ 14: ನೇಕಾರರಿಗೆ ಉದ್ಯೋಗ ನೀಡಲು ರಾಜ್ಯ ಸರ್ಕಾರ ಹಲವು ಉಪಕ್ರಮಗಳನ್ನು ಕೈಗೊಂಡಿದ್ದು, ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ಗಳು, ಆರೋಗ್ಯ ಕೇಂದ್ರಗಳಿಗೆ ಬೆಡ್ಶೀಟ್ ಮತ್ತು ಟವೆಲ್ಗಳನ್ನು ಪೂರೈಕೆ ಮಾಡಲು ಬೇಡಿಕೆ ಪಡೆಯಲಾಗುತ್ತಿದೆ. ನೇಕಾರರಿಗೆ ಉದ್ಯೋಗ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ ಅವರು ವಿಧಾನಸಭೆಗೆ ತಿಳಿಸಿದ್ದಾರೆ.
ಸಿದ್ದು ಸವದಿ ಅವರ ಗಮನ ಸೆಳೆಯುವ ಸೂಚನೆ ನಿಯಮ 73ರ ವಿಷಯಕ್ಕೆ ಉತ್ತರಿಸಿದ ಸಚಿವರು, ನೇಕಾರರಿಗೆ ನೆರವಾಗಲು ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. 2025-26ನೇ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಣ ಇಲಾಖೆಯ ಸಮವಸ್ತ್ರಕ್ಕೆ ಅಗತ್ಯವಾದ 21.15 ಲಕ್ಷ ಮೀಟರ್ ಬಟ್ಟೆಯನ್ನು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ 3,567 ನೋಂದಾಯಿತ ನೇಕಾರರಿಂದ ತಯಾರಿಸಿ ಪೂರೈಕೆ ಮಾಡಲಾಗುವುದು ಎಂದು ತಿಳಿಸಿದರು.

ವಿದ್ಯಾವಿಕಾಸ ಸಮವಸ್ತ್ರ ಸರಬರಾಜಿಗೆ ಅಗತ್ಯ ಒಟ್ಟು ಬಟ್ಟೆಯ ಪ್ರಮಾಣಕ್ಕೆ ಅನುಗುಣವಾಗಿ ಅಲ್ಲಿನ ಉಪಕೇಂದ್ರಗಳಲ್ಲಿ ಎಲ್ಲ ನೇಕಾರರಿಗೆ ನಿರಂತರ ನೂಲು ಸರಬರಾಜು ಮಾಡುತ್ತಿದ್ದು, ನೇಕಾರರು ನೇಯುವ ಬಟ್ಟೆಗೆ ನಿಗದಿತ ಪರಿವರ್ತನಾ ಶುಲ್ಕ ಪಾವತಿ ಮಾಡಲಾಗುವುದು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮವು ಬಾಗಲಕೋಟ ಜಿಲ್ಲೆಯ ತೇರದಾಳ ವ್ಯಾಪ್ತಿಯ ರಬಕವಿ, ಬನಹಟ್ಟಿ, ತೇರದಾಳ, ಚಿಮ್ಮಡ, ಕೆಂಗೇರಿಮಡಿ, ಮಹಾಲಿಂಗಪುರ, ಹೊಸೂರು ಮತ್ತು ನಾವಲಗಿಯಲ್ಲಿ ಉಪಕೇಂದ್ರಗಳನ್ನು ಹೊಂದಿದ್ದು, ಈ ಕೇಂದ್ರಗಳಲ್ಲಿ ವಿದ್ಯಾ ವಿಕಾಸ ಯೋಜನೆಯ ಸಮವಸ್ತ್ರ ಬಟ್ಟೆ ತಯಾರಿಸಲಾಗುತ್ತಿದೆ. 2024-25ನೇ ಸಾಲಿನಲ್ಲಿ 21 ಸಹಕಾರ ಸಂಘ ಹಾಗೂ ಸಹಕಾರ ಬ್ಯಾಂಕುಗಳ ಮೂಲಕ 752 ನೇಕಾರರಿಗೆ ಒಟ್ಟು 59.31 ಲಕ್ಷ ರೂ. ಬಡ್ಡಿ ಸಹಾಯಧನ ಬಿಡುಗಡೆ ಮಾಡಲಾಗಿದೆ.
ನೇಕಾರ ಸಮ್ಮಾನ್ ಯೋಜನೆಯಡಿ ಕೈಮಗ್ಗ ಹಾಗೂ ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷೀಕ ಐದು ಸಾವಿರ ರೂ.ಗಳನ್ನು ಡಿಬಿಟಿ ಮೂಲಕ ಪಾವತಿಸಲಾಗುತ್ತಿದೆ. ಕೈಮಗ್ಗ ವಿಕಾಸ ಯೋಜನೆಯಡಿ ಕೈಮಗ್ಗ ಮತ್ತು ಅಗತ್ಯ ಸಲಕರಣೆಗಳನ್ನು ಖರೀದಿಸಲು ಘಟಕ ವೆಚ್ಚದ ಪ್ರತಿಶತ 50ರಷ್ಟು ಸಹಾಯಧನ ಒದಗಿಸಲಾಗುತ್ತಿದೆ.
ಕಚ್ಚಾಮಾಲ ಖರೀದಿ ಮೇಲೆ ಕೈಮಗ್ಗ ಸಹಕಾರ ಸಂಘಗಳಿಗೆ ಪ್ರತಿ ಕೆಜಿಗೆ ರೂ 15 ಸಹಾಯಧನ ನೀಡಲಾಗುವುದು. ನೇಕಾರಿಕೆಗೆ ಸಹಕಾರ ಸಂಘ ಮತ್ತು ಸಹಕಾರ ಬ್ಯಾಂಕುಗಳಿಂದ ಪಡೆಯುವ ಸಾಲಕ್ಕೆ ಶೂನ್ಯ ಹಾಗೂ ಪ್ರತಿಶತ ಒಂದರ ಬಡ್ಡಿ ದರದಲ್ಲಿ ರೂ 2 ಲಕ್ಷ ಹಾಗೂ ಪ್ರತಿಶತ 3ರ ಬಡ್ಡಿ ದರದಲ್ಲಿ ರೂ 2 ರಿಂದ 5 ಲಕ್ಷದವರೆಗೆ ಸಾಲ ನೀಡಲಾಗುವುದು ಎಂದು ಸಚಿವ ಶಿವಾನಂದ ಪಾಟೀಲ ತಿಳಿಸಿದರು.
ಕೈಮಗ್ಗ ಉತ್ಪನ್ನಗಳ ಮಾರಾಟಕ್ಕಾಗಿ ರಾಷ್ಟ್ರೀಯ ಹಾಗೂ ರಾಜ್ಯ ಕೈಮಗ್ಗ ಮೇಳ ಆಯೋಜಿಸಲಾಗುತ್ತಿದೆ. ಇಲಕಲ್ ಸೀರೆ, ಗುಳೇದಗುಡ್ಡ ಖಣ, ಮೊಳಕಾಲ್ಮುರು ರೇಷ್ಮೆ ಸೀರೆ ಮತ್ತು ಉಡುಪಿಯ ಕಾಟನ್ ಸೀರೆಗಳನ್ನು ಜಿಯಾಗ್ರಫಿಕಲ್ ಇಂಡಿಕೇಷನ್ ಕಾಯ್ದೆ ಅಡಿಯಲ್ಲಿ ನೋಂದಾಯಿಸಲಾಗಿದೆ ಎಂದು ತಿಳಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications