ಸಚಿವ ಆಂಜನೇಯ ಪತ್ನಿಯಿಂದಲೇ ಅಕ್ಕಿ ಕಮಿಷನ್ ಡೀಲ್?
ಬೆಂಗಳೂರು, ನವೆಂಬರ್. 05: ರಾಜ್ಯ ಸಚಿವ ಸಂಪುಟಕ್ಕೆ ಭ್ರಷ್ಟಾಚಾರದ ಕಳಂಕ ಅಂಟಿಕೊಂಡಿದೆ. ಖಾಸಗಿ ಟಿವಿ ವಾಹಿನಿ ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಸಮಾಜ ಕಲ್ಯಾಣ ಸಚಿವ ಆಂಜನೇಯ ನಿವಾಸದಲ್ಲಿಯೇ ಕಮಿಷನ್ ವ್ಯವಹಾರ ನಡೆಯುತ್ತಿರುವುದು ಬಯಲಾಗಿದೆ.
ಸಚಿವ ಆಂಜನೇಯ ಅವರ ಅಧಿಕೃತ ನಿವಾಸದಲ್ಲೇ ಅವರ ಪತ್ನಿ ವಿಜಯಾ ಕಮೀಷನ್ ಪಡೆಯುತ್ತಿರುವ ದೃಶ್ಯಾವಳಿಗಳು ವಾಹಿನಿಗಳಲ್ಲಿ ಬಿತ್ತರವಾಗುತ್ತಿದ್ದು ಚರ್ಚೆ ಹುಟ್ಟುಹಾಕಿದೆ. ಎಸ್ ಸಿ, ಎಸ್ ಎಸ್ ಟಿ ವಿದ್ಯಾರ್ಥಿಗಳ ಊಟದ ಟೆಂಡರ್ ಗೆ ಸಂಬಂಧಿಸಿದಂತೆ ಸಚಿವರ ಪತ್ನಿ 7 ಲಕ್ಷ ರೂಪಾಯಿ ಕಮಿಷನ್ ಪಡೆಯುತ್ತಿರುವ ದೃಶ್ಯ ರಹಸ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. [ಹಿಂದುಳಿದ ವರ್ಗಕ್ಕೆ ಆಂಜನೇಯ ಏನು ಮಾಡಿದ್ದಾರೆ?]
ಆದರೆ ಇದನ್ನು ತಳ್ಳಿಹಾಕಿರುವ ಸಚಿವ ಆಂಜನೇಯ, ಪ್ರಕರಣದ ಹಿಂದೆ ಷಡ್ಯಂತ್ರವಿದ್ದು, ಕಾಣದ ಕೈಗಳ ಕೈವಾಡವಿದೆ ಎಂದು ಹೇಳಿಕೆ ನೀಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪ್ರಭಾಕರ್ ಅವರನ್ನು ರಜೆ ಮೇಲೆ ತೆರಳಲು ಸಿಎಂ ಸಿದ್ದರಾಮಯ್ಯು ಸೂಚನೆ ನೀಡಿದ್ದಾರೆ.

ಎಸ್ ಸಿ ಎಸ್ ಟಿ ಅಕ್ಕಿ ಡೀಲ್?
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮತ್ತು ಒಬಿಸಿ ವಿದ್ಯಾರ್ಥಿ ನಿಲಯಗಳಿಗೆ ಆಹಾರ ವಿತರಿಸಲು 2 ತಿಂಗಳ ಹಿಂದೆ 30 ಜಿಲ್ಲೆಗಳಿಗೂ ಟೆಂಡರ್ ಕರೆಯಲಾಗಿತ್ತು. ಈ ಟೆಂಡರ್ ಪ್ರಕ್ರಿಯೆಯಲ್ಲಿ ಬಹಳಷ್ಟು ಸಂಖ್ಯೆಯ ಆಹಾರ ಸರಬರಾಜುದಾರರು ಭಾಗವಹಿಸಿದ್ದರು. ಈ ಟೆಂಡರ್ ಬಗ್ಗೆ ನಡೆದ ಮಾತುಕತೆ ವಿವರ ವಿಡಿಯೋದಲ್ಲಿದೆ.

ಏನಿದು ಪ್ರಕರಣ?
ಸಚಿವ ಆಂಜನೇಯ ಅವರ ಬೆಂಗಳೂರಿನ ಜಯಮಹಲ್ ನಿವಾಸದಲ್ಲೇ ಆಂಜನೇಯ ಪತ್ನಿ ವಿಜಯಾ ಜೊತೆ ಸಮಾಜ ಕಲ್ಯಾಣ ಉಪ ನಿರ್ದೇಶಕ ಪ್ರಭಾಕರ್ ಡೀಲಿಂಗ್ ನಡೆಸಿದ್ದಾರೆ. 7 ಲಕ್ಷ ರೂಪಾಯಿಗೆ ಬೇಡಿಕೆ ಇಡುವುದು ಹಾಗೂ 7 ಲಕ್ಷ ರೂಪಾಯಿಯನ್ನು ಸಚಿವರ ಪತ್ನಿಗೆ ನೀಡುವುದು ಕುಟುಕು ಕಾರ್ಯಾಚರಣೆಯಲ್ಲಿ ಸೆರೆಸಿಕ್ಕಿದೆ.

ವಿಚಾರದ ಬಗ್ಗೆ ಗೊತ್ತಿಲ್ಲ ಎಂದ ಸಿಎಂ
ಮಾಧ್ಯಮದವರ ಪ್ರಶ್ನೆಗೆ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ, ಡೀಲ್ ದಂಧೆ ಬಗ್ಗೆ ನನಗೆ ಗೊತ್ತಿಲ್ಲ, ಮಾಹಿತಿ ಕಲೆಹಾಕುತ್ತೇನೆ ಎಂದು ಹೇಳಿದರು.

ನನ್ನ ಪತ್ನಿ ಅಮಾಯಕಿ: ಆಂಜನೇಯ
ಟೆಂಟರ್ ಕಮಿಷನ್ ಹಣ 7 ಲಕ್ಷ ರು. ಬಗ್ಗೆ ನನ್ನ ಪತ್ನಿ ಬೇಡಿಕೆಯಿಟ್ಟಿಲ್ಲ. ಇದರ ಹಿಂದೆ ಯಾರದ್ದೋ ಕೈವಾಡವಿದ್ದು ನಮ್ಮ ಯಾವುದೇ ತಪ್ಪಿಲ್ಲ ಎಂದು ಆಂಜನೇಯ ಹೇಳಿಕೆ ನೀಡಿದ್ದಾರೆ.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ












Click it and Unblock the Notifications