ಮಂಡ್ಯದ ಅಯ್ಯಪ್ಪ ಸ್ವಾಮಿ ಭಕ್ತರ ಬಸ್ಸಿಗೆ ಕಲ್ಲೆಸೆತ
ಕಾಸರಗೋಡು, ಡಿಸೆಂಬರ್ 7: ಶಬರಿಮಲೆಗೆ ತೆರಳುತ್ತಿದ್ದ ಅಯ್ಯಪ್ಪ ಭಕ್ತರ ಬಸ್ಸಿಗೆ ದುಷ್ಕರ್ಮಿಗಳು ಕಲ್ಲೆಸೆದಿರುವ ಘಟನೆ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ.
ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಈ ನಡುವೆ ಮಂಡ್ಯದಿಂದ ಶಬರಿಮಲೆಗೆ ತೆರಳುತ್ತಿದ್ದ ಅಯ್ಯಪ್ಪ ಭಕ್ತರ ಬಸ್ಸಿಗೂ ದುಷ್ಕರ್ಮಿಗಳು ಕಲ್ಲೆಸೆದಿದ್ದಾರೆ.

ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಬಸ್ಸಿನ ಮುಂದುಗಡೆಯ ಗಾಜು ಸಂಪೂರ್ಣವಾಗಿ ಪುಡಿಪುಡಿಯಾಗಿದೆ. ಮಂಗಳೂರಿನಿಂದ ಕಾಸರೋಡಿಗೆ ಸಂಚರಿಸುತ್ತಿದ್ದ ಕೆಎಎಸ್ ಆರ್ಟಿಸಿ ಬಸ್ಸು,ಲಾರಿ, ಖಾಸಗಿ ಬಸ್ ಮೇಲೆಯೂ ಕಲ್ಲೆಸೆತ ನಡೆದಿದೆ.












Click it and Unblock the Notifications