Cauvery Water Dispute: ತಮಿಳುನಾಡಿಗೆ ನೀರು ಬಿಡುಗಡೆಯನ್ನು ನಿಲ್ಲಿಸಿ : ಅಶ್ವತ್ಥ ನಾರಾಯಣ್ ಆಗ್ರಹ
ಬೆಂಗಳೂರು, ಆಗಸ್ಟ್ 22: ತಮಿಳುನಾಡಿಗೆ ನೀರು ಬಿಡುಗಡೆಯನ್ನು ನಿಲ್ಲಿಸಿ. ರಾಜ್ಯದ ಕಾಂಗ್ರೆಸ್ ಸರಕಾರವು ಪೂರ್ವಾಪರ ವಿವೇಚನೆ ಇಲ್ಲದೆ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದೆ. ಇದು ಖಂಡನಾರ್ಹ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್ ಅವರು ಆಕ್ಷೇಪ ವ್ಯಕ್ತಪಡಿಸಿದರು.
ಈ ಕುರಿತು ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮಂಡ್ಯ ಭಾಗದ ರೈತರಿಗೆ ಅನ್ಯಾಯ ಮಾಡಲಾಗಿದೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ತಿಳಿಸಿದರು. ರಾಜ್ಯದ ನೀರಾವರಿ ಸಚಿವರು ಮತ್ತು ಕೃಷಿ ಸಚಿವರಿಗೆ ರಾಜ್ಯದ ರೈತರ ಕುರಿತು ಕಾಳಜಿ ಇಲ್ಲ. ತಮಿಳುನಾಡು ಸರಕಾರವು ರಿಟ್ ಅರ್ಜಿ ದಾಖಲಿಸಿದ ತಕ್ಷಣವೇ ಯಥೇಚ್ಛವಾಗಿ ನೀರು ಬಿಟ್ಟಿದ್ದಾರೆ. ಸುಮಾರು 12-13 ಟಿಎಂಸಿ ನೀರನ್ನು ಬಿಡಲಾಗಿದೆ ಎಂದು ಟೀಕಿಸಿದರು.

ತಮಿಳುನಾಡಿಗೆ ಕುರುವೈ ಬೆಳೆಗೆ 32 ಟಿಎಂಸಿ ಮಾತ್ರ ನೀರನ್ನು ಕೊಡಬೇಕಿದೆ. 1.8 ಲಕ್ಷ ಹೆಕ್ಟೇರ್ನಲ್ಲಿ ಮಾತ್ರ ಬೆಳೆ ಬೆಳೆಯಬೇಕೆಂದು ಸೂಚಿಸಿದೆ. ಆದರೆ, ಅರ್ಜಿ ಹಾಕುವುದಕ್ಕೆ ಮೊದಲು 7.4 ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆ ಬೆಳೆದು ತಮಿಳುನಾಡಿನ ಡ್ಯಾಂನಲ್ಲಿದ್ದ 30-32 ಟಿಎಂಸಿ ನೀರನ್ನು ಖಾಲಿ ಮಾಡಿ, ಸುಪ್ರೀಂ ಕೋರ್ಟಿಗೆ ನೀರಿಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಆರೋಪಿಸಿದರು.
ಎಂ.ಬಿ.ಪಾಟೀಲ್, ಬಸವರಾಜ ಬೊಮ್ಮಾಯಿಯವರು ನೀರಾವರಿ ಸಚಿವರಾಗಿದ್ದಾಗ ಇದೇ ರೀತಿ ಸಂಕಷ್ಟ ಬಂದಿತ್ತು. ಬಸವರಾಜ ಬೊಮ್ಮಾಯಿಯವರು ನೀರಾವರಿ ಸಚಿವರಾಗಿದ್ದಾಗ ಸಮಸ್ಯೆ ಬಂದಿತ್ತು. ಆಗ ತಮಿಳುನಾಡಿದ ಬೆಳೆ ಪ್ರಮಾಣದ ವಿವರವನ್ನು ಪಡೆದು ಸುಪ್ರೀಂ ಕೋರ್ಟಿಗೆ ಸಲ್ಲಿಸಿ ಸ್ಟೇ ಪಡೆಯಲಾಗಿತ್ತು ಎಂದು ತಿಳಿಸಿದರು.
ಇವತ್ತಿನ ನೀರಾವರಿ ಸಚಿವರಿಗೆ ಜವಾಬ್ದಾರಿಯೇ ಇಲ್ಲ. ತಮಿಳುನಾಡು ಅರ್ಜಿ ಹಾಕಿದಾಕ್ಷಣ ನೀರು ಬಿಡುಗಡೆ ಮಾಡಿ, ರೈತರು ಬೇಕಿದ್ದರೆ ಸುಪ್ರೀಂ ಕೋರ್ಟಿಗೆ ಹೋಗಿ ಎಂದು ಬೇಜವಾಬ್ದಾರಿ ಹೇಳಿಕೆ ಕೊಟ್ಟಿದ್ದಾರೆ ಎಂದು ಟೀಕಿಸಿದರು. ಕೇಂದ್ರ ಸರಕಾರದ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಇನ್ನೊಂದೆಡೆ ಕೃಷಿ ಸಚಿವರು ನೀರು ಬಿಡುಗಡೆ ಸಾಧ್ಯವಿಲ್ಲ ಎನ್ನುತ್ತಾರೆ. ತಮಿಳುನಾಡಿಗೆ ನೀರು ಬಿಡುಗಡೆಯನ್ನು ನಿಲ್ಲಿಸಿ ಎಂದು ಆಗ್ರಹಿಸಿದರು.
ಕಾಲುವೆಯ ಕೊನೆಭಾಗಕ್ಕೆ ತಲುಪುವಂತೆ ಸಾಕಷ್ಟು ನೀರು ಕೊಡಬೇಕೆಂದು ಅವರು ಒತ್ತಾಯಿಸಿದರು. ನೀರು ಸ್ಟಾಕ್ ಮಾಡಿ ಇಟ್ಟುಕೊಳ್ಳಿ ಎಂದು ಕೋರಿದರು. ಸ್ಟಾಲಿನ್ ಜೊತೆ ಒಳ ಒಪ್ಪಂದ ಮಾಡಿಕೊಂಡು ನಮ್ಮ ರೈತರಿಗೆ ದ್ರೋಹ ಬಗೆಯದಿರಿ ಎಂದು ತಿಳಿಸಿದರು. ಡಿ.ಕೆ.ಶಿವಕುಮಾರ್ ಅವರು ಬ್ರ್ಯಾಂಡ್ ಬೆಂಗಳೂರು ಎಂದು ಹೇಳಿಕೊಂಡು ನೀರಾವರಿ ಇಲಾಖೆಯನ್ನು ಮರೆಯಬಾರದು ಎಂದೂ ಆಗ್ರಹಿಸಿದರು.
ಇನ್ನೂ ಈ ವೇಳೆ ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ಸಿರೋಯಾ, ರಾಜ್ಯದ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಬಿ ನಾರಾಯಣಗೌಡ ಅವರು ಉಪಸ್ಥಿತರಿದ್ದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications