ಕೆಎಸ್ಆರ್ಟಿಸಿ ಬಸ್ಗಳಲ್ಲಿ ತಂಬಾಕು ಜಾಹೀರಾತುಗಳಿಗೆ ತಡೆ
ಬೆಂಗಳೂರು, ಮೇ 06; ಕೆ.ಎಸ್.ಆರ್.ಟಿ.ಸಿ ಸಾರಿಗೆ ಬಸ್ಗಳಲ್ಲಿ ತಂಬಾಕು ಹಾಗೂ ಪಾನ್ ಸೇವನೆಗೆ ಪ್ರಚೋದಿಸುವ ಜಾಹೀರಾತು ನೀಡದಂತೆ ಕೋರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯ ಪತ್ರವನ್ನು ಬರೆದಿದೆ. ವಿಶ್ವ ಆರೋಗ್ಯ ಸಂಸ್ಥೆಯ ನಿಯಮಾವಳಿಗಳ ಅನ್ವಯ ಈ ಪತ್ರವನ್ನು ಬರೆದು ಮನವಿ ಮಾಡಲಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಈ ಕುರಿತು ಪತ್ರವನ್ನು ಬರೆಯಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮವನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸುತ್ತಿದ್ದು, ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆಯಾದ ಕೋಟ್ಟಾ -2003 (COTPA-2003) ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಸದರಿ ಕಾರ್ಯಕ್ರಮದ ಪ್ರಮುಖವಾದ ಉದ್ದೇಶವಾಗಿರುತ್ತದೆ ಎಂದು ಹೇಳಿದೆ.

2016-17 Global Adult Tobacco Survey (GATS-2)ರಂತೆ ರಾಜ್ಯದಲ್ಲಿ ಶೇ 22.8ರಷ್ಟು ವಯಸ್ಕರು ಯಾವುದಾದರೂ ಒಂದು ರೀತಿಯ ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿದ್ದು, ಶೇ 23.9 ವಯಸ್ಕರು ಸಾರ್ವಜನಿಕ ಸ್ಥಳಗಳಲ್ಲಿ ಪರೋಕ್ಷ ಧೂಮಪಾನಕ್ಕೆ ಒಳಗಾಗುತ್ತಿದ್ದಾರೆ. ಅಲ್ಲದೆ ಸುಮಾರು 19.8 ವಯಸ್ಸಿಗೆ ರಾಜ್ಯದಲ್ಲಿ ಯುವಕರು ತಂಬಾಕು ಸೇವನೆಯನ್ನು ಪ್ರಾರಂಭಿಸುತ್ತಾರೆ ಎನ್ನುವ ಆಘಾತಕಾರಿ ವಿಷಯದ ವರದಿಯನ್ನು ಉಲ್ಲೇಖಿಸಿರುತ್ತಾರೆ ಎಂದು ತಿಳಿಸಿದೆ.
ಬಸ್ಸುಗಳಲ್ಲಿ ತಂಬಾಕು ಜಾಹೀರಾತು; ಇತ್ತೀಚೆಗೆ ಕೆ.ಎಸ್.ಆರ್.ಟಿ.ಸಿ ಬಸ್ಸುಗಳಲ್ಲಿ ತಂಬಾಕು ಉತ್ಪನ್ನಗಳು ಹಾಗೂ ಪಾನ್ ಮಸಾಲ ಉತ್ಪನ್ನಗಳ ಪ್ರಮುಖ ಬ್ರಾಂಡ್ಗಳಾದ ವಿಮಲ್, ಕೂಲ್ ಲಿಪ್, ಆರ್. ಎಮ್. ಡಿಗಳನ್ನು ಬಸ್ಸು ಬ್ರಾಂಡ್ಗಳ ಮೂಲಕ ಜಾಹೀರಾತು ಮಾಡುತ್ತಿರುವುದು ಕಂಡುಬಂದಿರುತ್ತದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ತಂಬಾಕು ಉತ್ಪನ್ನಗಳ ನೇರ ಮತ್ತು ಪರೋಕ್ಷ ಜಾಹೀರಾತು ನೀಡುವುದು ಕೋಟಾ ಕಾಯ್ದೆ-2003ರ ಸೆಕ್ಷನ್ 5 WHO FCTC 5.3 Article ರಾಜ್ಯ ನಿಯಮಾವಳಿಯ ಉಲ್ಲಂಘನೆಯಾಗಿರುತ್ತದೆ. ಪಾನ್ ಮಸಾಲ ಉತ್ಪನ್ನಗಳ ಜಾಹೀರಾತು ನೀಡುವುದರ ಅದೇ ತರಹದ ಪ್ಯಾಕೇಜುಗಳ ತಂಬಾಕು ಉತ್ಪನ್ನಗಳ ಪರೋಕ್ಷ ಜಾಹೀರಾತು ಬಸ್ ಬ್ರಾಂಡ್ಗಳ ಮೂಲಕ ನಡೆಯುತ್ತಿರುವುದು ಕಂಡುಬಂದಿರುತ್ತದೆ ಎಂದು ಹೇಳಿದೆ.
ಸಾಮಾನ್ಯವಾಗಿ ಯುವಕರು ಜಾಹೀರಾತುಗಳಿಂದ ಉತ್ತೇಜನಗೊಂಡು ಆರೋಗ್ಯಕ್ಕೆ ಹಾನಿಕಾರವೆಂದು ಸ್ವತಃ ಕಂಪೆನಿಯವರೆ ಘೋಷಣೆ ಮಾಡಿರುವ ಈ ಮಾದರಿ ಉತ್ಪನ್ನಗಳನ್ನು ಸೇವನೆ ಮಾಡಿ ತಮ್ಮ ಅಮೂಲ್ಯವಾದ ಜೀವನವನ್ನು ಕಳೆದುಕೊಳ್ಳುತ್ತಾರೆ ಎಂದು ತಿಳಿಸಿದೆ.
ತಂಬಾಕು ನಿಯಂತ್ರಣ ಕಾರ್ಯಕ್ರಮದ ಪ್ರಮುಖ ಭಾಗಿದಾರರಾದ ಸಾರಿಗೆ ಇಲಾಖೆ ಈ ಬಗ್ಗೆ ಅಗತ್ಯ ಕ್ರಮ ತೆಗೆದುಕೊಂಡು, ತಂಬಾಕು ಹಾಗೂ ಪಾನ್ ಮಸಾಲಾ ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವ ಪರೋಕ್ಷವಾದ ಯಾವುದೇ ಜಾಹೀರಾತುಗಳನ್ನು ನೀಡಬಾರದೆಂದು ಈ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ಮನವಿ ಮಾಡಿದ್ದಾರೆ.
ಬಸ್ಗಳಲ್ಲಿ ವಿಮಲ್ ಸೇರಿದಂತೆ ಹಲವು ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಹಾಕಲಾಗಿದೆ. ಈ ಜಾಹೀರಾತುಗಳಿಂದಲೂ ಕೆಎಸ್ಆರ್ಟಿಸಿಗೆ ಆದಾಯ ಬರುತ್ತದೆ. ಈ ಜಾಹೀರಾತುಗಳ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ತಂಬಾಕು ಉತ್ಪನ್ನಗಳ ಜಾಹೀರಾತು ಹಾಕದಂತೆ ಪತ್ರದಲ್ಲಿ ಮನವಿ ಮಾಡಿದೆ. ಕೆಎಸ್ಆರ್ಟಿಸಿ ಯಾವ ಮಾದರಿ ಜಾಹೀರಾತು ಇರಬೇಕು ಎಂಬ ಬಗ್ಗೆ ನಿಯಮ ರೂಪಿಸಿ, ಈ ತಂಬಾಕು ಉತ್ಪನ್ನಗಳ ಜಾಹೀರಾತು ತೆರವು ಮಾಡಲಿದೆಯೇ? ಎಂದು ಕಾದು ನೋಡಬೇಕಿದೆ.
-
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಶ್ರೀಶೈಲ ಮಲ್ಲಿಕಾರ್ಜುನನ ದರ್ಶನಕ್ಕೆ NWKRTC ವೇಗದೂತ ಬಸ್ಗಳ ವ್ಯವಸ್ಥೆ: ಟಿಕೆಟ್ ದರ, ಮಾರ್ಗ-ವೇಳಾಪಟ್ಟಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
BMTC: 3 ನಿಲ್ದಾಣಗಳಿಂದ ಮೆಟ್ರೋ ಫೀಡರ್ ಬಸ್ ಸೇವೆ ಆರಂಭ: ಸಂಚಾರ ಮಾರ್ಗ, ಸಮಯ -
NWKRTC ನೇಮಕಾತಿ: ಏಪ್ರಿಲ್ನಲ್ಲಿ ವಿವಿಧ ಹುದ್ದೆಗಳ ಪರೀಕ್ಷೆ, ವೇಳಾಪಟ್ಟಿ ಪ್ರಕಟಿಸಿದ ಕೆಇಎ, ಪ್ರವೇಶ ಪತ್ರದ ಅಪ್ಡೇಟ್ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ











Click it and Unblock the Notifications