ಸಾಕುಪ್ರಾಣಿಗಳನ್ನು ಅನಧಿಕೃತವಾಗಿ ಮಾರಿದರೆ ಕಠಿಣ ಕ್ರಮ: ಸಚಿವ ಚವ್ಹಾಣ್
ಬೆಂಗಳೂರು, ಜನವರಿ 13: ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊಳ್ಳದೆ ಸಾಕು ಪ್ರಾಣಿಗಳ ಮಾರಾಟ ಅಂಗಡಿಗಳನ್ನು ತೆರೆದರೆ ಅಂತಹ ಮಾರಾಟಗಾರರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಕರ್ನಾಟಕ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಶುಕ್ರವಾರ ಹೇಳಿದ್ದಾರೆ.
ತಪಾಸಣೆ ಸಂದರ್ಭದಲ್ಲಿ ದೇಶಿ ಹಾಗೂ ವಿದೇಶಿ ಪಕ್ಷಿ, ಪ್ರಾಣಿಗಳ ಅನಧಿಕೃತ ಮಾರಾಟ ಕಂಡು ಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು. ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ (ಪಿಸಿಎ) ಕಾಯಿದೆ, 1960, ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ, ನಾಯಿ ತಳಿ ಮಾರುಕಟ್ಟೆ ನಿಯಮಗಳು, 2017 ಮತ್ತು ಪೆಟ್ ಶಾಪ್ ನಿಯಮಗಳು, 2018 ರ ಅಡಿಯಲ್ಲಿ ರೂಪಿಸಲಾದ ವಿವಿಧ ನಿಯಮಗಳು ಪಕ್ಷಿಗಳು ಮತ್ತು ಪ್ರಾಣಿಗಳನ್ನು ಮಾರಾಟ ಮಾಡುವ ಅಂಗಡಿಗಳಿಗೆ ಸ್ಪಷ್ಟವಾಗಿ ಅನ್ವಯಿಸುತ್ತವೆ ಎಂದು ಅವರು ಹೇಳಿದರು.
ಸಣ್ಣ ನಾಯಿ ಮರಿಗಳು, ಪಕ್ಷಿಗಳು ಆಹಾರ ಮತ್ತು ನೀರಿಲ್ಲದೆ ಸಾಯುತ್ತಿರುವ ಬಗ್ಗೆ ಅನೇಕ ದೂರುಗಳು ಬಂದವು. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ದಾಳಿ ನಡೆಸಿ ರಕ್ಷಿಸಿದ ಎಲ್ಲಾ ಪ್ರಾಣಿಗಳನ್ನು ಕಾನೂನಿನ ಪ್ರಕಾರ ಮಾನ್ಯತೆ ಪಡೆದ ಪ್ರಾಣಿ ರಕ್ಷಣಾ ಗೃಹದಲ್ಲಿ ಇರಿಸಲಾಗಿದೆ. ದಾಳಿ ವೇಳೆ ಹೆಚ್ಚಿನ ಅಂಗಡಿಗಳಲ್ಲಿ ಒಂದೇ ಪಂಜರದಲ್ಲಿ ಅನೇಕ ಪಕ್ಷಿಗಳನ್ನು ಇಡಲಾಗಿತ್ತು. ಪಕ್ಷಿಗಳು ಮತ್ತು ಪ್ರಾಣಿಗಳು ಸ್ಥಳಾವಕಾಶ ಮತ್ತು ಶುದ್ಧ ಗಾಳಿಗಾಗಿ ಹೆಣಗಾಡುತ್ತಿದ್ದವು. ನೀರು ಅಥವಾ ಆಹಾರ ಪೂರೈಕೆಯ ಕೊರತೆ ಮತ್ತು ಸ್ವಚ್ಛತೆಯ ಕೊರತೆಯೂ ಸಹ ಇತ್ತು ಎಂದು ಸಚಿವರು ಹೇಳಿದರು.

ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಅಕ್ರಮವಾಗಿ ಪ್ರಾಣಿ- ಪಕ್ಷಿಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ದೂರಿನ ಕುರಿತು ಪ್ರತಿಕ್ರಿಯಿಸಿದ ಸಚಿವರು, ಈ ಹಿಂದೆ ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ಹಾಗೂ ಕರ್ನಾಟಕ ಪಶು ಕಲ್ಯಾಣ ಮಂಡಳಿ, ಪಶುಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಈ ಹಿಂದೆಯೇ ಬುಧವಾರ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಎಲ್ಲಾ ಪ್ರಾಣಿ-ಪಕ್ಷಿಗಳ ಮಾರಾಟದ ಅಂಗಡಿಗಳು ಮತ್ತು ಸಾಕುಪ್ರಾಣಿಗಳ ಅಂಗಡಿಗಳನ್ನು ಮುಂದಿನ ದಿನಗಳಲ್ಲಿ ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪಾರಿವಾಳ, ಮೊಲ, ಬಾತುಕೋಳಿ, ನಾಯಿ, ಬೆಕ್ಕು ಸೇರಿದಂತೆ ವಿವಿಧ ಜಾತಿಯ ಪ್ರಾಣಿ ಮತ್ತು ಪಕ್ಷಿಗಳನ್ನು ಮಾರಾಟ ಮಾಡುವ ಪೆಟ್ ಶಾಪ್ ಮಾಲೀಕರು ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಮತ್ತು ಪರವಾನಗಿ ಪಡೆಯಬೇಕು ಮತ್ತು ಸಾಕುಪ್ರಾಣಿಗಳನ್ನು ಖರೀದಿಸಲು ನಿಯಮಗಳನ್ನು ಅನುಸರಿಸಬೇಕು ಎಂದು ಚವ್ಹಾಣ್ ಸಲಹೆ ನೀಡಿದರು.
ಪ್ರಾಣಿ, ಪಕ್ಷಿಗಳನ್ನು ಮಾರಾಟ ಮಾಡುವ ಅಂಗಡಿಗಳ ಮಾಲೀಕರು ಸೂಕ್ತ ಆರೈಕೆ, ಪೋಷಣೆ, ರಕ್ಷಣೆ ಹಾಗೂ ಚಿಕಿತ್ಸೆ ನೀಡದೆ ಸ್ವಚ್ಛತೆ ಕಾಪಾಡದಿರುವುದು ಕಂಡು ಬಂದಲ್ಲಿ ಸಾರ್ವಜನಿಕರು ತಕ್ಷಣ ಸಹಾಯವಾಣಿ ಸಂಖ್ಯೆ 82771 00200ಗೆ ಕರೆ ಮಾಡಬಹುದು. ಸಾರ್ವಜನಿಕರು ಅಂಗಡಿಗಳಿಗೆ ಭೇಟಿ ನೀಡಿದಾಗ ಸಾಕುಪ್ರಾಣಿ ಮಾರಾಟಗಾರರ ಪರವಾನಗಿಯನ್ನು ಪರಿಶೀಲಿಸಬೇಕು. ಸಾರ್ವಜನಿಕರು ಸಾಕುಪ್ರಾಣಿಗಳ ಖರೀದಿಯ ನಿಯಮಗಳನ್ನು ಪಾಲಿಸಬೇಕು ಮತ್ತು ನೋಂದಾಯಿತ ತಳಿಗಾರರು ಮತ್ತು ಪೆಟ್ ಶಾಪ್ಗಳಿಂದ ಮಾತ್ರ ಖರೀದಿಸಬೇಕು ಎಂದು ಚವ್ಹಾಣ ಮನವಿ ಮಾಡಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications