ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ಕೆಎಸ್ಆರ್ಟಿಸಿ
ಬೆಂಗಳೂರು, ಸೆಪ್ಟೆಂಬರ್ 01: ಕಳೆದ ವರ್ಷದ ಶೈಕ್ಷಣಿಕ ಪಾಸು ತೋರಿಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬಸ್ನಲ್ಲಿ ಸಂಚಾರ ನಡೆಸಬಹುದು ಎಂದು ಕೆಎಸ್ಆರ್ಟಿಸಿ ಹೇಳಿದೆ. ಇದರಿಂದಾಗಿ ವಿದ್ಯಾರ್ಥಿಗಳಲ್ಲಿ ಇದ್ದ ಗೊಂದಲ ಬಗೆಹರಿದಿದೆ.
Recommended Video
ಪದವಿ, ವೃತ್ತಿಪರ, ಸ್ನಾತಕೋತ್ತರ ಪದವಿ ಪರೀಕ್ಷೆಗಳು ಈ ತಿಂಗಳಿನಲ್ಲಿ ನಡೆಯಲಿವೆ. ಈ ಸಮಯದಲ್ಲಿ ಕಳೆದ ವರ್ಷದ ಶೈಕ್ಷಣಿಕ ಪಾಸುಗಳನ್ನು ತೋರಿಸಿ ವಿದ್ಯಾರ್ಥಿಗಳು ಬಸ್ನಲ್ಲಿ ಉಚಿತವಾಗಿ ಸಂಚಾರ ನಡೆಸಬಹುದು.
ಕೆಎಸ್ಆರ್ಟಿಸಿ ನೌಕರರ ಬಗ್ಗೆ ಕಾಳಜಿ; ಸಿಎಂಗೆ ಸಿದ್ದರಾಮಯ್ಯ ಪತ್ರ
ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ನಾಯಕ ಜಿ. ಸಿ. ಚಂದ್ರಶೇಖರ್ ಸಾರಿಗೆ ಸಚಿವರಿಗೆ ಪತ್ರ ಬರೆದಿದ್ದರು. ಸೆಪ್ಟೆಂಬರ್ನಲ್ಲಿ ವಿವಿಧ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳಿಗೆ ಈ ವರ್ಷದ ಪಾಸು ವಿತರಣೆ ಮಾಡಿಲ್ಲ. ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣ ಮಾಡಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದರು.
ಆ.25ರಿಂದ ಕೇರಳ-ಕರ್ನಾಟಕ ನಡುವೆ ಬಸ್ ಸೇವೆ
ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಈ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಕೆಎಸ್ಆರ್ಟಿಸಿ ವಿದ್ಯಾರ್ಥಿಗಳು ಕಳೆದ ವರ್ಷದ ಪಾಸುಗಳನ್ನು ತೋರಿಸಿ ಸಂಚಾರ ನಡೆಸಬಹುದು ಎಂದು ಮಂಗಳವಾರ ಆದೇಶ ಹೊರಡಿಸಿದೆ.
ಕೇರಳ-ಕರ್ನಾಟಕ ನಡುವೆ ಬಸ್ ಸಂಚಾರ; ಪ್ರಯಾಣಿಕರಿಗೆ ಸೂಚನೆ
ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಕೋವಿಡ್ ಕಾರಣಕ್ಕೆ ಪರೀಕ್ಷೆ ನಡೆಸುತ್ತಿಲ್ಲ. ಆದರೆ, ಪದವಿ, ಸ್ನಾತಕೋತ್ತರ ಪದವಿ, ವೃತ್ತಪರ ಕೋರ್ಸ್ಗಳ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ನಡೆಸಲಾಗುತ್ತಿದೆ.