ಜನವರಿ 1ರಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ ಲಭ್ಯ
ನವದೆಹಲಿ, ಡಿಸೆಂಬರ್ 22: ರಾಜ್ಯದಾದ್ಯಂತ ಜನವರಿ 1ರಿಂದ ಶಾಲೆಗಳನ್ನು ಪುನರಾರಂಭಿಸಲು ಸರ್ಕಾರ ನಿರ್ಧರಿಸಿದೆ. ಅಂದಿನಿಂದಲೇ ವಿದ್ಯಾರ್ಥಿಗಳು ತಮ್ಮ ಸಮವಸ್ತ್ರ ಮತ್ತು ಶೂಗಳನ್ನು ಪಡೆದುಕೊಳ್ಳಲಿದ್ದಾರೆ. ಆದರೆ ಎಂಟನೇ ತರಗತಿ ಮಕ್ಕಳಿಗೆ ಪ್ರತಿ ವರ್ಷದಂತೆ ನೀಡುವ ಬೈಸಿಕಲ್ಗಳನ್ನು ಈ ವರ್ಷ ವಿತರಿಸುತ್ತಿಲ್ಲ. ಅನುದಾನದ ಕೊರತೆಯಿಂದ ಈ ಬಾರಿ ವಿದ್ಯಾರ್ಥಿಗಳಿಗೆ ಸೈಕಲ್ ನೀಡುವ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ.
ಈಗಾಗಲೇ ಅಗತ್ಯ ಪ್ರಮಾಣದಲ್ಲಿ ಸಮವಸ್ತ್ರ, ಶೂ ಮತ್ತು ಸಾಕ್ಸ್ಗಳನ್ನು ಖರೀದಿಸಿದ್ದು, ಅವುಗಳನ್ನು ವಿತರಿಸಲು ಶಾಲೆಯ ಆವರಣಕ್ಕೆ ಮಕ್ಕಳು ಆಗಮಿಸುವ ಸಂದರ್ಭಕ್ಕಾಗಿ ಕಾದಿರುವುದಾಗಿ ಶಿಕ್ಷಣ ಇಲಾಖೆ ತಿಳಿಸಿದೆ. ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗಳಲ್ಲಿ ಸಮವಸ್ತ್ರಗಳನ್ನು ಇರಿಸಲಾಗಿದೆ. ಜ. 1ರಿಂದ ಹತ್ತನೇ ತರಗತಿಗಳು ಆರಂಭವಾಗಲಿದೆ. ಜ. 15ರ ವೇಳೆಗೆ 1 ರಿಂದ 9ನೇ ತರಗತಿವರೆಗೆ ವಿದ್ಯಾಗಮ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ಜನವರಿ ಮೊದಲ ವಾರದಿಂದ ಪೋಷಕರು ಶಾಲೆಗೆ ಕರೆಯಿಸಿ ಸಮವಸ್ತ್ರ,ಸ ಶೂಗಳನ್ನು ವಿತರಿಸಲಾಗುತ್ತದೆ.
'ವಿದ್ಯಾರ್ಥಿಗಳು ಶಾಲೆಯಿಂದ ಸಮವಸ್ತ್ರ ಮತ್ತು ಶೂಗಳನ್ನು ಪಡೆದು ಮನೆಗೆ ಕೊಂಡೊಯ್ಯಬಹುದು. ಶಾಲೆಗಳು ಆರಂಭವಾದ ಬಳಿಕ ಅವುಗಳನ್ನು ಧರಿಸಬಹುದಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ವಿ. ಅನ್ಬುಕುಮಾರ್ ತಿಳಿಸಿದ್ದಾರೆ.

2008ರಲ್ಲಿ ಯಡಿಯೂರಪ್ಪ ಅವರು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಬೈಸಿಕಲ್ ಒದಗಿಸುವ ಯೋಜನೆ ಜಾರಿಗೆ ತಂದಿದ್ದರು. ಈ 12 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಬೈಸಿಕಲ್ ವಿತರಣೆ ನಡೆಯುತ್ತಿಲ್ಲ. ಪ್ರಸಕ್ತ ಸಾಲಿನಲ್ಲಿ ಸುಮಾರು ಐದು ಲಕ್ಷ ಮಕ್ಕಳಿಗೆ ಸೈಕಲ್ ವಿತರಿಸಬೇಕಿತ್ತು.
-
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
School Property: ಸರ್ಕಾರಿ ಶಾಲೆ 12 ವರ್ಷಗಳಿಂದ ಒಂದೇ ಭೂಮಿಯಲ್ಲಿದ್ದರೆ ಅದು ರಾಜ್ಯ ಸರ್ಕಾರದ ಆಸ್ತಿ: ಏನಿದು ಹೊಸ ಕಾನೂನು? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್











Click it and Unblock the Notifications