ಜನವರಿ 1ರಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ ಲಭ್ಯ
ನವದೆಹಲಿ, ಡಿಸೆಂಬರ್ 22: ರಾಜ್ಯದಾದ್ಯಂತ ಜನವರಿ 1ರಿಂದ ಶಾಲೆಗಳನ್ನು ಪುನರಾರಂಭಿಸಲು ಸರ್ಕಾರ ನಿರ್ಧರಿಸಿದೆ. ಅಂದಿನಿಂದಲೇ ವಿದ್ಯಾರ್ಥಿಗಳು ತಮ್ಮ ಸಮವಸ್ತ್ರ ಮತ್ತು ಶೂಗಳನ್ನು ಪಡೆದುಕೊಳ್ಳಲಿದ್ದಾರೆ. ಆದರೆ ಎಂಟನೇ ತರಗತಿ ಮಕ್ಕಳಿಗೆ ಪ್ರತಿ ವರ್ಷದಂತೆ ನೀಡುವ ಬೈಸಿಕಲ್ಗಳನ್ನು ಈ ವರ್ಷ ವಿತರಿಸುತ್ತಿಲ್ಲ. ಅನುದಾನದ ಕೊರತೆಯಿಂದ ಈ ಬಾರಿ ವಿದ್ಯಾರ್ಥಿಗಳಿಗೆ ಸೈಕಲ್ ನೀಡುವ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ.
ಈಗಾಗಲೇ ಅಗತ್ಯ ಪ್ರಮಾಣದಲ್ಲಿ ಸಮವಸ್ತ್ರ, ಶೂ ಮತ್ತು ಸಾಕ್ಸ್ಗಳನ್ನು ಖರೀದಿಸಿದ್ದು, ಅವುಗಳನ್ನು ವಿತರಿಸಲು ಶಾಲೆಯ ಆವರಣಕ್ಕೆ ಮಕ್ಕಳು ಆಗಮಿಸುವ ಸಂದರ್ಭಕ್ಕಾಗಿ ಕಾದಿರುವುದಾಗಿ ಶಿಕ್ಷಣ ಇಲಾಖೆ ತಿಳಿಸಿದೆ. ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗಳಲ್ಲಿ ಸಮವಸ್ತ್ರಗಳನ್ನು ಇರಿಸಲಾಗಿದೆ. ಜ. 1ರಿಂದ ಹತ್ತನೇ ತರಗತಿಗಳು ಆರಂಭವಾಗಲಿದೆ. ಜ. 15ರ ವೇಳೆಗೆ 1 ರಿಂದ 9ನೇ ತರಗತಿವರೆಗೆ ವಿದ್ಯಾಗಮ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ಜನವರಿ ಮೊದಲ ವಾರದಿಂದ ಪೋಷಕರು ಶಾಲೆಗೆ ಕರೆಯಿಸಿ ಸಮವಸ್ತ್ರ,ಸ ಶೂಗಳನ್ನು ವಿತರಿಸಲಾಗುತ್ತದೆ.
'ವಿದ್ಯಾರ್ಥಿಗಳು ಶಾಲೆಯಿಂದ ಸಮವಸ್ತ್ರ ಮತ್ತು ಶೂಗಳನ್ನು ಪಡೆದು ಮನೆಗೆ ಕೊಂಡೊಯ್ಯಬಹುದು. ಶಾಲೆಗಳು ಆರಂಭವಾದ ಬಳಿಕ ಅವುಗಳನ್ನು ಧರಿಸಬಹುದಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ವಿ. ಅನ್ಬುಕುಮಾರ್ ತಿಳಿಸಿದ್ದಾರೆ.

2008ರಲ್ಲಿ ಯಡಿಯೂರಪ್ಪ ಅವರು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಬೈಸಿಕಲ್ ಒದಗಿಸುವ ಯೋಜನೆ ಜಾರಿಗೆ ತಂದಿದ್ದರು. ಈ 12 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಬೈಸಿಕಲ್ ವಿತರಣೆ ನಡೆಯುತ್ತಿಲ್ಲ. ಪ್ರಸಕ್ತ ಸಾಲಿನಲ್ಲಿ ಸುಮಾರು ಐದು ಲಕ್ಷ ಮಕ್ಕಳಿಗೆ ಸೈಕಲ್ ವಿತರಿಸಬೇಕಿತ್ತು.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications