ಬಿಸಿಯೂಟ ಸರಿಯಿಲ್ಲವೆಂದು ಶಾಲೆಗೆ ಬೀಗ ಹಾಕಿದ ಮಕ್ಕಳು!
ಗದಗ, ನವೆಂಬರ್ 8: ಮಧ್ಯಾಹ್ನದ ವೇಳೆ ಶಾಲೆಯಲ್ಲಿ ನೀಡುವ ಬಿಸಿಯೂಟ ಸರಿಯಿಲ್ಲ ಎಂದು ಆರೋಪಿಸಿದ ವಿದ್ಯಾರ್ಥಿಗಳು ಶಾಲೆಗೆ ಬೀಗ ಹಾಕಿದ ಘಟನೆ ನಡೆದಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
ಗದಗ ಜಿಲ್ಲೆಯ ಲಕ್ಕಲಕಟ್ಟಿ ಗ್ರಾಮದ ಸರ್ಕಾರಿ ಶಾಲೆಗೆ ಮಧ್ಯಾಹ್ನದ ಊಟದ ಯೋಜನೆಯಡಿ ಉತ್ತಮ ಆಹಾರ ನೀಡದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮಂಗಳವಾರ ಶಾಲೆಗೆ ಬೀಗ ಜಡಿದಿದ್ದಾರೆ.

ಶಾಲೆಯಲ್ಲಿ 441 ವಿದ್ಯಾರ್ಥಿಗಳಿದ್ದು, ಹೆಚ್ಚಿನವರು ಬಡ ಕುಟುಂಬದವರು. ಶಾಲಾ ಅಧಿಕಾರಿಗಳು ಬೇಯಿಸಿದ ಬೇಳೆಕಾಳು ಮತ್ತು ಮೊಟ್ಟೆ ನೀಡುವುದನ್ನು ನಿಲ್ಲಿಸಿದ್ದಾರೆ ಎಂದು ಆರೋಪಿಸಿದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಜತೆಗೆ ಶೌಚಾಲಯಗಳ ನಿರ್ವಹಣೆಯೂ ಸರಿಯಾಗಿ ಆಗುತ್ತಿಲ್ಲ. ಶಾಲಾ ಮಕ್ಕಳಿಗೆ ನೀಡುವ ಆಹಾರದ ಗುಣಮಟ್ಟ ಕಳಪೆಯಾಗಿದ್ದು, ನಿತ್ಯ 4 ಕೆಜಿ ತರಕಾರಿ ಮಾತ್ರ ಸಾಂಬಾರ್ ಮಾಡಲು ಬಳಸಲಾಗುತ್ತಿದೆ ಎಂದು ಆರೋಪಿಸಲಾಗಿದೆ.
ಇದೇ ವೇಳೆ ಶಿಕ್ಷಕರು, ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ತಿಳಿದಿಲ್ಲ ಎಂದು ಉತ್ತರಿಸಿದರು. ಸಮಸ್ಯೆಗಳಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಆದಷ್ಟು ಬೇಗ ಪರಿಹರಿಸಲಾಗುವುದು. ಆದರೆ ಶಿಕ್ಷಕರು ತಮ್ಮ ದೂರುಗಳನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಹೇಳಿದರು.
ಶಾಲಾ ಆಡಳಿತ ಮಂಡಳಿ ವಿರುದ್ಧ ಘೋಷಣೆ ಕೂಗಿ, ಉತ್ತಮ ಆಹಾರ ನೀಡಲು ಕ್ರಮ ಕೈಗೊಳ್ಳದಿದ್ದಲ್ಲಿ ತರಗತಿ ಬಹಿಷ್ಕರಿಸುವುದಾಗಿ ಹೇಳಿದರು. ತಮ್ಮ ಶಾಲೆ ದೂರದಲ್ಲಿರುವ ಕಾರಣ ಚುನಾಯಿತ ಪ್ರತಿನಿಧಿಗಳು ಭೇಟಿ ನೀಡುತ್ತಿಲ್ಲ. ನಮ್ಮ ಮುಖ್ಯೋಪಾಧ್ಯಾಯರಾದ ಎಎಸ್ ರಾಥೋಡ್ ಅವರನ್ನು ಇಲ್ಲಿಂದ ವರ್ಗಾವಣೆ ಮಾಡುವಂತೆ ನಾವು ಅಧಿಕಾರಿಗಳಿಗೆ ಮನವಿ ಮಾಡುತ್ತೇವೆ. ಅಧಿಕಾರಿಗಳು ಕೂಡಲೇ ಶಾಲೆಗೆ ಭೇಟಿ ನೀಡಿ ನಮ್ಮ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಕೆಲವು ವಿದ್ಯಾರ್ಥಿಗಳು ಹೇಳಿದರು.
ಇಲ್ಲಿನ ನಿವಾಸಿ ಪ್ರದೀಪ ಲಮಾಣಿ ಮಾತನಾಡಿ, ನನ್ನ ಮಗ 6ನೇ ತರಗತಿಯಲ್ಲಿ ಓದುತ್ತಿದ್ದು, ಮಕ್ಕಳಿಗೆ ಕೆಟ್ಟ ಆಹಾರ ನೀಡುತ್ತಿರುವ ವಿಷಯ ತಿಳಿದು ಕೆಲ ದಿನಗಳ ಹಿಂದೆ ಶಾಲೆಗೆ ತೆರಳಿ ತರಗತಿ ಶಿಕ್ಷಕರೊಂದಿಗೆ ಮಾತನಾಡಿದೆವು. ಹಿರಿಯ ಅಧಿಕಾರಿಗಳ ಗಮನಕ್ಕೆ ತರುವುದಾಗಿ ಶಿಕ್ಷಕಿ ತಿಳಿಸಿದರು. ಆದರೆ ಇಲ್ಲಿಯವರೆಗೆ ಏನೂ ಮಾಡಿಲ್ಲ ಎಂದು ತಿಳಿಸಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications