ಸರದಿಯ ಆಧಾರದ ಮೇಲೆ ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿ ತೆರೆಯಲು ಆದೇಶ
ಬೆಂಗಳೂರು, ಮಾರ್ಚ್ 15: ಬೆಂಗಳೂರು ಸೇರಿ ಮಹಾನಗರ ಪಾಲಿಕೆ ವ್ಯಾಪ್ತಿಯ ನೋಂದಣಿ ಕಚೇರಿಗಳನ್ನು ಭಾನುವಾರವೂ ಸಹಿತ ಕಾರ್ಯನಿರ್ವಹಿಸುವಂತೆ ಆದೇಶ ಮಾಡಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಮಾರ್ಚ್ 13 ರಂದು ಮಾಹಿತಿ ನೀಡಿದ್ದರು. ಇದರ ಬೆನ್ನಲ್ಲೇ ಸರ್ಕಾರ ಈ ಬಗ್ಗೆ ಆದೇಶ ಹೊರಡಿಸಿದೆ.
ಸಾರ್ವಜನಿಕರ ಅನುಕೂಲಕ್ಕಾಗಿ ಉತ್ತಮ ಸೇವೆಯನ್ನು ನೀಡುವ ಹಾಗೂ ಆಡಳಿತ ಸುಧಾರಣೆ ಮತ್ತು ಜನಸ್ನೇಹಿ ಆಡಳಿತಕ್ಕಾಗಿ ಪ್ರಾಯೋಗಿಕವಾಗಿ ಮೊದಲನೇ ಹಂತದಲ್ಲಿ ಮಾರ್ಚ್ 2024 ರಿಂದ ಪ್ರಾರಂಭಿಸುತ್ತಾ ಬೆಂಗಳೂರು ನಗರ ಜಿಲ್ಲೆಯ 5 ನೋಂದಣಿ ಜಿಲ್ಲೆಗಳಲ್ಲಿ ಪ್ರತಿ ಒಂದು ನೋಂದಣಿ ಜಿಲ್ಲೆಯಲ್ಲಿ ಒಂದು ಉಪ ನೋಂದಣಿ ಕಚೇರಿಯು ಪಾರದರ್ಶಕ ವಾರದ ಸರದಿಯ ಆಧಾರದ ಮೇಲೆ ತೆರಯಲು ನಿರ್ಧರಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ನೋಂದಣಿ ಜಿಲ್ಲೆಯ ವ್ಯಾಪ್ತಿಯಲ್ಲಿನ ಉಪ ನೋಂದಣಿ ಕಚೇರಿಗಳ ಪೈಕಿ ಯಾವುದಾದರೂ ಒಂದು ಉಪ ನೋಂದಣಿ ಕಚೇರಿ ಪಾರದರ್ಶಕವಾದ ವಾರದ ಸರದಿಯ ಆಧಾರದ ಮೇಲೆ ಪ್ರತಿ ಭಾನುವಾರ ಕಾರ್ಯನಿರ್ವಹಿಸುವಂತೆ ಆದೇಶಿಸಲಾಗಿದೆ. ಇದಕ್ಕೆ ಬದಲಾಗಿ ಆ ವಾರದ ಮಂಗಳವಾರದ ದಿನದಂದು ಸದರಿ ಕಚೇರಿಗೆ ಪರಿಹಾರವಾಗಿ ರಜೆಯನ್ನು ನೀಡಲು ಆದೇಶಿಸಿದೆ.
ಇದೇ ರೀತಿ ಪ್ರಾಯೋಗಿಕವಾಗಿ ಏಪ್ರಿಲ್ ಮಾಹೆಯಿಂದ ರಾಜ್ಯದ ಬೆಂಗಳೂರು ನಗರ ನೋಂದಣಿ ಜಿಲ್ಲೆಗಳು ಮತ್ತು ಬೆಂಗಳೂರು ಗ್ರಾಮಾಂತರ ನೋಂದಣಿ ಜಿಲ್ಲೆಯು ಸೇರಿದಂತೆ ರಾಜ್ಯದ ಇತರೆ ಎಲ್ಲಾ ನೋಂದಣಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಉಪ ನೋಂದಣಿ ಕಚೇರಿಗಳಲ್ಲಿ ಒಂದು ಉಪ ನೋಂದಣಿ ಕಚೇರಿಯನ್ನು ಪಾರದರ್ಶಕವಾದ ವಾರದ ಸರದಿಯ ಆಧಾರದ ಮೇಲೆ ಪ್ರತಿ ಭಾನುವಾರ ಕಾರ್ಯನಿರ್ವಹಿಸುವಂತೆ ಹಾಗೂ ಇದಕ್ಕೆ ಬದಲಾಗಿ ಸದರಿ ಕಛೇರಿಗಳಿಗೆ ಆ ವಾರದ ಮಂಗಳವಾರ ದಿನದಂದು ಪರಿಹಾರವಾಗಿ ರಜೆಯನ್ನು ನೀಡಲು ಆದೇಶಿಸಿದೆ.
ನೋಂದಣಿ ಜಿಲ್ಲೆಯ ಉಪ ನೋಂದಣಿ ಕಚೇರಿಗಳ ಪೈಕಿ ಭಾನುವಾರದಂದು ಪಾರದರ್ಶಕ ವಾರದ ಸರದಿಯ ಆಧಾರದ ಮೇಲೆ ಕಾರ್ಯನಿರ್ವಹಿಸುವ ಉಪ ನೋಂದಣಿ ಕಚೇರಿಯ ವಿವರಗಳನ್ನು ಈ ಕೂಡಲೇ ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರು ಸಾರ್ವಜನಿಕರ ಮಾಹಿತಿಗಾಗಿ ಅವರ ಕಚೇರಿಯ ಅಧಿಕೃತ ಜಾಲತಾಣದಲ್ಲಿ ಹಾಗೂ ಕಾವೇರಿ-2 ಜಾಲತಾಣದಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಿಸುವುದು.

ಭಾನುವಾರದಂದು ಕಾರ್ಯನಿರ್ವಹಿಸುವ ಉಪ ನೋಂದಣಿ ಕಚೇರಿಗಳಲ್ಲಿ ದಸ್ತಾವೇಜುಗಳನ್ನು ನೋಂದಾಯಿಸಿಕೊಳ್ಳಲು ಸಾರ್ವಜನಿಕರು ಅನುಕೂಲಕರ ಸಮಯವನ್ನು ನಿಗದಿಪಡಿಸಿಕೊಳ್ಳಲು ಕಾವೇರಿ-2 ತಂತ್ರಾಂಶದಲ್ಲಿ ಸೂಕ್ತ ಪಾರದರ್ಶಕ ಅವಕಾಶಗಳನ್ನು ಕಲ್ಪಿಸಲು ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರು ಅವಶ್ಯಕ ಕ್ರಮ ಕೈಗೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
-
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ












Click it and Unblock the Notifications