ಬಡಜನರ ಸಂಕಷ್ಟ ದೂರ ಮಾಡಿದ 'ಅನ್ನಭಾಗ್ಯ' ಯೋಜನೆ
ಬೆಂಗಳೂರು, ಮೇ 18 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕರ್ನಾಟಕ ಸರ್ಕಾರ ಮೂರು ವರ್ಷಗಳನ್ನು ಪೂರೈಸಿ ನಾಲ್ಕನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ಯೋಜನೆಗಳ ಜನಾಭಿಪ್ರಾಯ ಸಂಗ್ರಹಿಸಲು ಸರ್ಕಾರದಿಂದ "ಜನ-ಮನ" ಎಂಬ ಜನಾಭಿಪ್ರಾಯ ಕಾರ್ಯಕ್ರಮ ನಡೆಯಿತು.
ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ 'ಜನಮನ' ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾಜ್ಯದ ಎಲ್ಲ ಜಿಲ್ಲೆಗಳಿಂದ ವಿವಿಧ ಯೋಜನೆಗಳ ಫಲಾನುಭವಿಗಳು ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಮುಖ್ಯಮಂತ್ರಿಗಳ ಜೊತೆ ನೇರವಾಗಿ ಮಾತನಾಡಿ, ಯೋಜನೆಗಳ ಬಗ್ಗೆ ಅನುಭವ, ಅಭಿಪ್ರಾಯ ಹಂಚಿಕೊಂಡರು.

ಅನ್ನಭಾಗ್ಯ ಯೋಜನೆ : ಬಡಜನರು ಯಾರ ಬಳಿಯೂ ಅನ್ನಕ್ಕಾಗಿ ಕೈ ಚಾಚದೆ ಸ್ವಾಭಿಮಾನದ ಬದುಕನ್ನು ಸಾಗಿಸಬೇಕು ಎನ್ನುವುದು ಸರ್ಕಾರದ ಆಶಯ. ಇಂತಹ ಯೋಜನೆಯಿಂದ ಬಡ ಜನರ ಪೌಷ್ಠಿಕತೆ ಕೂಡ ಉತ್ತಮಗೊಳ್ಳಲಿದೆ. ಅಲ್ಲದೆ ಕಡು ಬಡವರು ಆಹಾರ ಧಾನ್ಯ ಖರೀದಿಯಲ್ಲಿ ಉಳಿಸುವ ಹಣ ಅವರ ಇತರ ಅಗತ್ಯಗಳಿಗೆ ನೆರವಾಗುತ್ತದೆ. [ಅನ್ನಭಾಗ್ಯ ಯೋಜನೆ : ಭೈರಪ್ಪ ಮಾತಿಗೆ ಯಾರು, ಏನು ಹೇಳಿದರು?]
* ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಗ್ರಾಮದ ಬಸವರಾಜ ಮಲ್ಲನಾಯಕ ಅವರು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳು. 'ಈ ಹಿಂದೆ ಅಂಗಡಿಗಳಲ್ಲಿ ದವಸ ಧಾನ್ಯಕೊಳ್ಳಲು ದುಡ್ಡಿನ ಕೊರತೆಯಿಂದ ಸಂಕಷ್ಟದಲ್ಲಿದ್ದೆವು. ಈ ಸರ್ಕಾರ ಬಂದು ನಮಗೆ ನಿಜಕ್ಕೂ ಅನ್ನಭಾಗ್ಯ ನೀಡಿದೆ. ಎರಡು ಹೊತ್ತು ಹಸಿದ ಹೊಟ್ಟೆ ತುಂಬಿಸಿಕೊಳ್ಳುವ ಅವಕಾಶ ಮಾಡಿಕೊಟ್ಟಿದೆ' ಎಂದು ಹೇಳಿದರು.

* ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲ್ಲೂಕಿನ ಮುಗಳಿ ಗ್ರಾಮದ ಶ್ರೀಮತಿ ಸುಮಂಗಲ ಎಸ್. ಬೆಟಗೇರಿ ಅವರು, 'ರಾಜ್ಯ ಸರ್ಕಾರ ಉಚಿತ ಅಕ್ಕಿ, ಗೋಧಿಯ ಜೊತೆ, ಉಪ್ಪು, ಅಡಿಗೆ ಎಣ್ಣೆ ನೀಡುತ್ತಿದೆ. ಮಾರುಕಟ್ಟೆಯಲ್ಲಿ 11 ರೂಪಾಯಿಗಳಿಗೆ ದೊರಕುವ ಉಪ್ಪು ನಮಗೆ 2 ರೂ.ಗೆ, 50 ರೂ. ಎಣ್ಣೆ 25 ರೂ.ಗೆ, ಮಾರುಕಟ್ಟೆಯಲ್ಲಿ 40 ರೂ.ಗೆ ಸಿಗುವ ಸಕ್ಕರೆಯನ್ನು ಸರ್ಕಾರ 13.50 ರೂ.ಗಳಿಗೆ ನೀಡುತ್ತಿದೆ. ಇದರಿಂದ ನಮ್ಮ ಬದುಕು ಹಸನಾಗಿದೆ' ಎನ್ನುತ್ತಾರೆ. ['ಅನ್ನಭಾಗ್ಯ ಯೋಜನೆ ಯಡಿಯೂರಪ್ಪ ತಂದಿದ್ದು']
* ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಕಡಕೇರಿ ಗ್ರಾಮದ ದೇವರಾಜ ನಾರಾಯಣ ನಾಯಕ ಅವರು, 'ಸಂಕಷ್ಟದಲ್ಲಿದ್ದ ಬಡವರ ಬದುಕು ಸರ್ಕಾರದ ಅನ್ನಭಾಗ್ಯ ಯೋಜನೆಯನ್ನು ಇಂದು ಸಹನೀಯವಾಗಿಸಿದೆ' ಎಂದು ಅಭಿಪ್ರಾಯ ಹಂಚಿಕೊಂಡರು.
-
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು












Click it and Unblock the Notifications