BPL Card: ಏಕಾಏಕಿ 14 ಲಕ್ಷ ಬಡವರ ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವ ಘೋರ ಅಪರಾಧ: ಸಿ ಟಿ ರವಿ
ಬೆಂಗಳೂರು, ನವೆಂಬರ್ 19: ಬಡವರ 14 ಲಕ್ಷ ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವ ಘೋರ ಅಪರಾಧವನ್ನು ರಾಜ್ಯ ಸರಕಾರ ಮಾಡಿದೆ. ಅದರಲ್ಲೂ ನಮಗೆ ಮತ ಹಾಕಿದ್ದಾರಾ ಎಂದು ಜಾತಿ, ಕೋಮು ಹುಡುಕಿ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿರುವ ದೂರುಗಳಿವೆ ಎಂದು ವಿಧಾನಪರಿಷತ್ ಸದಸ್ಯ ಮತ್ತು ಬಿಜೆಪಿ ನಿಕಟಪೂರ್ವ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಆಕ್ಷೇಪಿಸಿದರು.
ಈ ಕುರಿತು ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು(ಮಂಗಳವಾರ) ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಡವರ ಅನ್ನಕ್ಕೂ ಕನ್ನ ಹಾಕುವ ಪರಮ ಅನ್ಯಾಯ ಇದಾಗಿದೆ ಎಂದು ಟೀಕಿಸಿದರು. ಜಾತಿ ಹುಡುಕಿ ಕಾರ್ಡ್ ರದ್ದು ಮಾಡಿದ್ದನ್ನು ಸೋಷಿಯಲ್ ಮೀಡಿಯದಲ್ಲಿ ನೋಡಿದ್ದೇನೆ. ಬಡವರ ಅನ್ನಕ್ಕೂ ಕನ್ನ ಹಾಕುವ ಸರಕಾರ ಇದೆಂದು ಆರೋಪಿಸಿದರು.

ಎಐಸಿಸಿ ಅಧ್ಯಕ್ಷ ಖರ್ಗೆಯವರು ನಿನ್ನೆ ಆರೆಸ್ಸೆಸ್, ಬಿಜೆಪಿಯನ್ನು ವಿಷ ಸರ್ಪಕ್ಕೆ ಹೋಲಿಸಿದ್ದಾರೆ. ಅನುಭವ ಪಕ್ವತೆಯನ್ನು ಪಡೆದುಕೊಳ್ಳಬೇಕು. ಹಿರಿತನಕ್ಕೆ ತಕ್ಕ ಮಾತು ಅದಲ್ಲ; ಅವರ ಮಾತುಗಳು ಹುಚ್ಚುನಾಯಿ ಕಡಿತಕ್ಕೆ ಒಳಗಾದವರು ಆಡುವ ಥರ ಮಾತಿನಂತಿತ್ತು. ಮಲ್ಲಿಕಾರ್ಜುನ ಖರ್ಗೆಯವರು ಆ ಮಾತನಾಡಿದ್ದಾರೋ ಅಥವಾ ಕಾಂಗ್ರೆಸ್ಸಿನ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಖರ್ಗೆಯವರ ಮೂಲಕ ಈ ಮಾತನ್ನಾಡಿಸಿದ್ದಾರೋ ಗೊತ್ತಿಲ್ಲ ಎಂದ ಅವರು, ನಿಮ್ಮ ಮಾತು ಸಂವಿಧಾನದ ಮೇಲೆ ನಂಬಿಕೆ ಇಟ್ಟವರ ಮಾತಲ್ಲ. ಹೊಡಿ, ಬಡಿ ಕೊಲ್ಲು ಎಂಬ ತಾಲಿಬಾನಿಗಳ ಮಾತಿಗೆ ವಿಷಾದ ವ್ಯಕ್ತಪಡಿಸಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.
ಸಂವಿಧಾನ ಗೌರವ ದಿವಸ ಆಚರಿಸಲು ಪ್ರಧಾನಿ ಮೋದಿಜೀ ಅವರು ಕ್ರಮ ಕೈಗೊಂಡಿದ್ದಾರೆ. ಡಾ.ಅಂಬೇಡ್ಕರರು ಸತ್ತಾಗಲೂ ಕಾಂಗ್ರೆಸ್ ಸರಕಾರ ಅವಮಾನ ಮಾಡಿದ್ದನ್ನು, ಅವರು ಚುನಾವಣೆಗೆ ನಿಂತಾಗ ಸೋಲಿಸಿದ್ದನ್ನು ಹಾಗೂ ಕಾಂಗ್ರೆಸ್ ಪಕ್ಷವು ಅವರ ಹೆಸರನ್ನು ಭಾರತರತ್ನಕ್ಕೆ ಪರಿಗಣಿಸದೆ ಇದ್ದುದನ್ನು ಜನರಿಗೆ ತಿಳಿಸುತ್ತೇವೆ. ಸಂವಿಧಾನ ಸಂರಕ್ಷಣೆ, ಸಂವಿಧಾನದ ಸಮ್ಮಾನದ ಅಭಿಯಾನ ಕೈಗೆತ್ತಿಕೊಂಡಿದ್ದು, ಈ ಎಲ್ಲ ಸಂಗತಿಗಳನ್ನು ಜನರ ಮುಂದಿಡಲಿದ್ದೇವೆ ಎಂದು ವಿವರಿಸಿದರು. ತುರ್ತು ಪರಿಸ್ಥಿತಿ ಮೂಲಕ ಕಾಂಗ್ರೆಸ್ಸಿನ ಅನ್ಯಾಯವನ್ನು ತಿಳಿಸಲಿದ್ದೇವೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷಕ್ಕೆ ಸಂವಿಧಾನದ ಕುರಿತು ನಿಜವಾದ ಪ್ರೀತಿ ಇಲ್ಲ; ನಾಟಕ ಮಾಡುತ್ತ ಬಂದಿದೆ. ಆಡಳಿತದಲ್ಲಿ ಇದ್ದಾಗ ಕೂಡ ಅದು ಸಂವಿಧಾನಕ್ಕೆ ಮತ್ತು ಅಂಬೇಡ್ಕರರಿಗೆ ಗೌರವ ಕೊಟ್ಟಿಲ್ಲ ಎಂದು ಟೀಕಿಸಿದರು.
ನಕ್ಸಲಿಸಂ ಎಂದರೆ ಹಿಂಸೆಯನ್ನು ಪ್ರಚೋದಿಸುವುದು ಮತ್ತು ಅದು ಪ್ರಜಾಪ್ರಭುತ್ವ ವಿರೋಧಿ. ನಕ್ಸಲರ ಬಗ್ಗೆ ಪ್ರಜಾಪ್ರಭುತ್ವ ಮತ್ತು ಸಂವಿಧಾನ ವಿರೋಧಿಗಳು ಮಾತ್ರ ಕರುಣೆ ತೋರಲು ಸಾಧ್ಯ; ನಕ್ಸಲರು ನಕ್ಸಲರೇ; ಅವರ ಬಗ್ಗೆ ಯಾವ ಸಿಂಪಥಿಯೂ ಇಲ್ಲ ಎಂದು ಪ್ರಶ್ನೆಗೆ ಉತ್ತರ ನೀಡಿದರು. ನಕ್ಸಲರು ಎಡಪಂಥೀಯ ಭಯೋತ್ಪಾದಕರಷ್ಟೇ ಎಂದರು.
ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ. ಅಭಿವೃದ್ಧಿಗೆ ಅನುದಾನ ಕೇಳಿದರೆ, ಮುಖ್ಯಮಂತ್ರಿಗಳು ಎಲ್ಲಿಂದ ದುಡ್ಡು ತರೋದು; ಸ್ವಲ್ಪ ತಡ್ಕೊಳ್ಳಿ ಎನ್ನುತ್ತಾರೆ. ಹಾಗಾಗಿ ಇದು ಹೊಸದೇನಲ್ಲ; ಅದಕ್ಕಾಗಿ ಬಡವರ ಅನ್ನವನ್ನೂ ಬಿಪಿಎಲ್ ಕಾರ್ಡ್ ರದ್ದು ಮೂಲಕ ಕಿತ್ತುಕೊಳ್ಳಲು ಹೊರಟಿದ್ದಾರೆ ಎಂದು ದೂರಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications