ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನಸೌಧದಲ್ಲಿ ಆತ್ಮಹತ್ಯೆ ಯತ್ನ : ರೇವಣ್ಣ ಕುಮಾರ್ ಡೆತ್ ನೋಟ್

|
Google Oneindia Kannada News

ಬೆಂಗಳೂರು, ಜೂನ್ 24 : 'ನನ್ನ ಸಾವು ಆತ್ಮಹತ್ಯೆ ಅಲ್ಲ. ಸರ್ಕಾರಕ್ಕೆ ನೀಡುತ್ತಿರುವ ಬಲಿದಾನ. ಮಾನ್ಯ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಅವರು ಅನ್ಯತಾ ಭಾವಿಸಬಾರದು' ಎಂದು ರೇವಣ್ಣ ಕುಮಾರ್ ಡೆತ್ ಬರೆದಿಟ್ಟಿದ್ದಾರೆ.

ಸೋಮವಾರ ಮಧ್ಯಾಹ್ನ ವಿಧಾನಸೌಧದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಚಿಕ್ಕಬಳ್ಳಾಪುರ ಮೂಲದ ರೇವಣ್ಣ ಕುಮಾರ್ (45) ಡೆತ್ ನೋಟ್ ಪತ್ತೆಯಾಗಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ರೇವಣ್ಣ ಅವರು ಚೇತರಿಸಿಕೊಳ್ಳುತ್ತಿದ್ದಾರೆ.

ವಿಧಾನಸೌಧದಲ್ಲಿ ಕತ್ತು ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆ ಯತ್ನವಿಧಾನಸೌಧದಲ್ಲಿ ಕತ್ತು ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆ ಯತ್ನ

ರೇವಣ್ಣ ಕುಮಾರ್ ಚಿಂತಾಮಣಿ ತಾಲೂಕಿನ ಅನೂರು ಗ್ರಾಮ ಪಂಚಾಯತ್‌ನಲ್ಲಿ ತಾತ್ಕಾಲಿಕ ಸಹಾಯಕ ಗ್ರಂಥಪಾಲಕರಾಗಿ ಕೆಲಸ ಮಾಡುತ್ತಿದ್ದರು. ಆದರೆ, ಅವರ ಉದ್ಯೋಗ ಖಾಯಂ ಆಗದ ಕಾರಣ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ವಿಧಾನಸೌಧದಲ್ಲಿ ಹಣ ಪತ್ತೆ ಕೇಸ್ : ಜಾಮೀನು ಅರ್ಜಿ ವಿಚಾರಣೆ ಪೂರ್ಣವಿಧಾನಸೌಧದಲ್ಲಿ ಹಣ ಪತ್ತೆ ಕೇಸ್ : ಜಾಮೀನು ಅರ್ಜಿ ವಿಚಾರಣೆ ಪೂರ್ಣ

Suicide attempt

ಮಾಧ್ಯಮಗಳ ಜೊತೆ ಮಾತನಾಡಿದ ಡಿಪಿಸಿ ದೇವರಾಜು ಅವರು, 'ರೇವಣ್ಣ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆಯಿಂದ ಕೈ ಕುತ್ತಿಗೆ ಮೇಲೆ ಗಾಯವಾಗಿದ್ದು, ಯಾವುದೇ ಪ್ರಾಣಾಪಾಯವಿಲ್ಲ' ಎಂದು ಹೇಳಿದರು.

ಶಕ್ತಿ ಕೇಂದ್ರದ ಬಳಿ ಸಿಕ್ಕ ಲಕ್ಷಗಟ್ಟಲೆ ಹಣ ಪ್ರಕರಣ: ಎಸಿಬಿಗೆ ವರ್ಗಾವಣೆಶಕ್ತಿ ಕೇಂದ್ರದ ಬಳಿ ಸಿಕ್ಕ ಲಕ್ಷಗಟ್ಟಲೆ ಹಣ ಪ್ರಕರಣ: ಎಸಿಬಿಗೆ ವರ್ಗಾವಣೆ

ಡೆತ್ ನೋಟ್‌ನಲ್ಲಿ ಏನಿದೆ? : ದಯವಿಟ್ಟು ನನ್ನ ಬಗ್ಗೆ ತಪ್ಪು ತಿಳಿಯಬೇಡಿ. 6 ಸಾವಿರ ನೌಕರರ ಪ್ರತೀಕವಾಗಿ ಈ ನಿರ್ಧಾರಕ್ಕೆ ಬಂದಿದ್ದೇನೆ. ನನ್ನ ಸಾವು ಆತ್ಮಹತ್ಯೆ ಅಲ್ಲ. ಸರ್ಕಾರಕ್ಕೆ ನೀಡುತ್ತಿರುವ ಬಲಿದಾನ. ಮಾನ್ಯ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಅವರು ಅನ್ಯತಾ ಭಾವಿಸಬಾರದು. ನಾವು ಎಷ್ಟೇ ಹೋರಾಟ ಮಾಡಿದರೂ ನಮಗೆ ನ್ಯಾಯ ಸಿಗುತ್ತಿಲ್ಲ. ನೀವಾದರೂ ನ್ಯಾಯ ಕೊಡಿಸಿ. ಇದು ಸಾವಲ್ಲ ಬಲಿದಾನ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ.

English summary
Chikkaballapur based man Revanna Kumar (45) made suicide attempt at vidhana soudh, Bengaluru on June 24, 2019. Now he is recovering in hospital, Here are the death note.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X