ನಾಮಪತ್ರ ಸಲ್ಲಿಕೆಗೆ ನೀವೂ ಬನ್ನಿ: ಸುಮಲತಾ ಅಂಬರೀಷ್ ಆಹ್ವಾನ
Recommended Video
ಬೆಂಗಳೂರು, ಮಾರ್ಚ್ 19: ತಾವು ನಾಮಪತ್ರ ಸಲ್ಲಿಸುವ ವೇಳೆ ತನ್ನೊಂದಿಗೆ ನೀವೂ ಬನ್ನಿ ಎಂದು ಸುಮಲತಾ ಅಂಬರೀಷ್ ಜನರಿಗೆ ಆಹ್ವಾನ ನೀಡಿದ್ದಾರೆ.
ಮಂಡ್ಯದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ: ಸುಮಲತಾ ಘೋಷಣೆ
ಮಂಡ್ಯ ಲೋಕಸಭೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಸೋಮವಾರ ಘೋಷಣೆ ಮಾಡಿರುವ ಸುಮಲತಾ ಅಂಬರೀಷ್, ಬುಧವಾರ (ಮಾರ್ಚ್ 20) ಬೆಳಿಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಕೆ ಮಾಡುವುದಾಗಿ ತಿಳಿಸಿದ್ದರು. ಈ ಸಂದರ್ಭದಲ್ಲಿ ನೀವೆಲ್ಲರೂ ಇರಬೇಕು ಎಂದು ಅವರು ಫೇಸ್ಬುಕ್ ಪುಟದಲ್ಲಿ ಮನವಿ ಮಾಡಿದ್ದಾರೆ.
ನಾವು ಸುಮಲತಾ ಅಂಬರೀಷ್ ಮನೆಮಕ್ಕಳು: ಯಶ್, ದರ್ಶನ್ ಹೇಳಿಕೆ
ತಮ್ಮ ಚುನಾವಣಾ ಸ್ಪರ್ಧೆಯನ್ನು ಅವರು 'ನನ್ನ ಜನರಿಗಾಗಿ ನನ್ನ ಹೆಜ್ಜೆ' ಎಂದು ಹೇಳಿಕೊಂಡಿದ್ದಾರೆ.
'ನನ್ನ ಪ್ರೀತಿಯ ಮಂಡ್ಯದ ಜನತೆಯ ನಿರ್ಧಾರದಂತೆ ಮಂಡ್ಯ ಲೋಕಸಭೆ ಚುನಾವಣೆಗೆ ನಾನು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತಿದ್ದೇನೆ. ನನಗೆ ಇನ್ನಷ್ಟು ಧೈರ್ಯ ತುಂಬಲು ನೀವೆಲ್ಲಾ ಆ ದಿನ ಆಗಮಿಸಬೇಕೆಂದು ನನ್ನ ಪ್ರೀತಿಯ ಮನವಿ' ಎಂದು ಅವರು ಬರೆದುಕೊಂಡಿದ್ದಾರೆ.
ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಪ್ರಕಟಿಸಿರುವ ಸುಮಲತಾ, ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.
ಸುಮಲತಾ ವರ್ಸಸ್ ನಿಖಿಲ್ ಕುಮಾರಸ್ವಾಮಿ; ಯಾರಿಗುಂಟು ಗ್ರಹ ಬಲ?
ವಿಶ್ವೇಶ್ವರಯ್ಯ ಪ್ರತಿಮೆ ಮಂಡ್ಯ ನಗರ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿಂದ ಮೆರವಣಿಗೆ ಹೊರಡಲಿದೆ. ಸಿಲ್ವರಿ ಜ್ಯುಬಿಲಿ ಪಾರ್ಕ್ ಮುಂಭಾಗ ಸಮಾವೇಶ ನಡೆಯಲಿದೆ ಎಂದು ಸುಮಲತಾ ಮಾಹಿತಿ ನೀಡಿದ್ದಾರೆ.