ಕುಮಾರಸ್ವಾಮಿ Vs ಸುಮಲತಾ ನಡುವಿನ ಸಂಘರ್ಷ: ವೈ.ಎಸ್.ವಿ ದತ್ತ ಮನಮಿಡಿಯುವ ಪೋಸ್ಟ್
ಬೆಂಗಳೂರು, ಜುಲೈ 9: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಸಂಸದೆ ಸುಮಲತಾ ನಡುವಿನ ಸಂಘರ್ಷ ಬೇರೆ ಬೇರೆ ಆಯಾಮ ಪಡೆಯುತ್ತಿರುವ ಹೊತ್ತಿನಲ್ಲಿ ಜೆಡಿಎಸ್ ಮುಖಂಡರಾದ ವೈ.ಎಸ್.ವಿ ದತ್ತ, ಪಕ್ಷದ ಕಾರ್ಯಕರ್ತರಲ್ಲಿ ಪತ್ರ ಮುಖೇನ ಮನವಿ ಮಾಡಿಕೊಂಡಿದ್ದಾರೆ. ಅದು ಹೀಗಿದೆ:
"ಈಗ ಕೆಲವು ದಿನಗಳಿಂದ ನಡೆಯುತ್ತಿರುವ ಶ್ರೀ ಕುಮಾರಸ್ವಾಮಿ ಮತ್ತು ಶ್ರೀಮತಿ ಸುಮಲತಾರವರ ನಡುವಿನ ಸಂಘರ್ಷ ಕಾರ್ಯಕರ್ತರಾದ ನಿಮಗೆ ಸಹಜವಾಗಿ ನೋವು ಮತ್ತು ಬೇಸರ ತರಿಸಿದೆ ಎಂಬುದನ್ನು ನಾನು ಬಲ್ಲೆ".
"ಪಕ್ಷದ ವರಿಷ್ಠ ನಾಯಕರೊಬ್ಬರ ಬಗ್ಗೆ ಪ್ರತಿಕ್ರಿಯೆಗಳು ಪ್ರಕಟವಾದಾಗ ನೀವು ಸಹಜವಾಗಿ ತಕ್ಷಣದ ಆವೇಶಕ್ಕೆ ಒಳಗಾಗುತ್ತೀರಿ. ಇದು ಸಹಜ ವೆಂದು ಭಾವಿಸಿದರೂ ಪಕ್ಷದ ಮುಂದಿನ ದೃಷ್ಟಿಯಿಂದಲೂ ನಾವು ತಣ್ಣಗೆ ಚಿಂತಿಸಬೇಕಾಗುತ್ತದೆ".
"ಜನ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಬಿಜೆಪಿ ನೇತೃತ್ವದ ಆಡಳಿತದ ವೈಫಲ್ಯಗಳ ಸರಮಾಲೆ , ಜನವಿರೋಧಿ ನಿರ್ಧಾರಗಳು ,ಅಸಹನೀಯ ಬೆಲೆಯೇರಿಕೆ ಇವುಗಳಿಂದ ತತ್ತರಿಸಿ ಹೋಗಿದ್ದಾರೆ.ಮನಸ್ಸಿನಲ್ಲಿಯೇ ಹಿಡಿಶಾಪ ಹಾಕುತ್ತಿದ್ದಾರೆ".

ಪಕ್ಷದ ವತಿಯಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕಾಲ ಪಕ್ವವಾಗಿದೆ
"ಇಂತಹ ನೂರಾರು ಸಂಗತಿಗಳು ನಮ್ಮ ಮುಂದಿದ್ದು ಜನಪರವಾಗಿ ಪಕ್ಷದ ವತಿಯಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕಾಲ ಪಕ್ವವಾಗಿದೆ. ಇದುವರೆಗೂ ಕೊರೊನಾ ಲಾಕ್ ಡೌನ್ ಇತ್ತು. ಕೊರೊನಾ ವಿಷಯದಲ್ಲಿ ನಾವು ಸಾಮಾಜಿಕವಾಗಿ ನಮ್ಮ ಕರ್ತವ್ಯ ನಿರ್ವಹಿಸುವ ಅವಶ್ಯಕತೆಯೂ ಇತ್ತು" ಎಂದು ದತ್ತ, ಪತ್ರದಲ್ಲಿ ಬರೆದಿದ್ದಾರೆ.

ವೈ.ಎಸ್.ವಿ ದತ್ತ ಮನಮಿಡಿಯುವ ಪೋಸ್ಟ್
"ಆದುದರಿಂದ ಆಡಳಿತ ಪಕ್ಷದ ಜನವಿರೋಧಿ ನೀತಿ ನಿರ್ಧಾರಗಳ ವಿರುದ್ಧ ಜನಾಭಿಪ್ರಾಯ ಮೂಡಿಸುವ ಕಾರ್ಯಕ್ರಮಗಳಿಗೆ ನಾವು ಮುಂದಾಗುವುದು ಸಾಧ್ಯವಾಗಲಿಲ್ಲ. ಆದುದರಿಂದ ನನ್ನ ವಿನಂತಿ ಇಷ್ಟು.
ದಯವಿಟ್ಟು ನಮ್ಮ ಪಕ್ಷದ ಕಾರ್ಯಕರ್ತರು ಪಕ್ಷದ ವರ್ಚಸ್ಸು, ಬೆಳವಣಿಗೆ ಹಾಗೂ ಭವಿಷ್ಯದ ಚುನಾವಣೆ , ಇವುಗಳನ್ನು ಮೊದಲ ಆದ್ಯತೆ ಎಂದು ಭಾವಿಸಿ ಈ ನಿಟ್ಟಿನಲ್ಲಿ ಚಿಂತಿಸಬೇಕು" - ವೈ.ಎಸ್.ವಿ ದತ್ತ.
ಸ್ವಯಂ ಸಹನೆ ಹಾಗೂ ಸಂಯಮವನ್ನು ತೋರಿಸುವುದು ಈ ಗಳಿಗೆಯ ನಮ್ಮೆಲ್ಲರ ಕರ್ತವ್ಯ
"ಜೊತೆಗೆ ಕಾರ್ಯಪ್ರವೃತ್ತರಾಗಬೇಕಿದೆ. ಅನಗತ್ಯವಾಗಿ ನಮ್ಮನ್ನು ಪ್ರಚೋದಿಸಿ ಕೆರಳಿಸಿ, ನಮ್ಮಿಂದಲೇ ನಮ್ಮ ಪಕ್ಷದ ವರ್ಚಸ್ಸು ಕಡಿಮೆಯಾಗುವಂತಹ ನಮ್ಮ ಎದುರಾಳಿಗಳ ತಂತ್ರಕ್ಕೆ ನಾವು ಬಲಿಯಾಗದಂತೆ ಸ್ವಯಂ ಸಹನೆ ಹಾಗೂ ಸಂಯಮವನ್ನು ತೋರಿಸುವುದು ಈ ಗಳಿಗೆಯ ನಮ್ಮೆಲ್ಲರ ಕರ್ತವ್ಯವಾಗಿದೆ" ಎಂದು ವೈ.ಎಸ್.ವಿ ದತ್ತ ಮನವಿ ಮಾಡಿಕೊಂಡಿದ್ದಾರೆ.

ದೃಶ್ಯಗಳ ದುರ್ಬಳಕೆ ಮಾಡಿಕೊಳ್ಳಲು ಯತ್ನ: ರಾಕ್ಲೈನ್ ವೆಂಕಟೇಶ್
ನಾನು ಮತ್ತು ಸುಮಲತಾ ಹೋಟೆಲ್ಗೆ ತೆರಳುತ್ತಿದ್ದ ದೃಶ್ಯಗಳನ್ನು ಹೋಟೆಲ್ನ ಸಿಸಿ ಕ್ಯಾಮರಾದಿಂದ ಪಡೆದು ಆ ದೃಶ್ಯಗಳ ದುರ್ಬಳಕೆ ಮಾಡಿಕೊಳ್ಳಲು ಯತ್ನಿಸಿದ್ದರು ಎಂದು ಚಿತ್ರ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅವರು ಎಚ್ಡಿಕೆ ವಿರುದ್ದ ಆರೋಪ ಮಾಡಿದ್ದರು.ಇದರಿಂದ ಕುಪಿತರಾದ ಕುಮಾರಸ್ವಾಮಿ ಅಭಿಮಾನಿಗಳು ರಾಕ್ಲೈನ್ ನಿವಾಸಕ್ಕೆ ಮುತ್ತಿಗೆ ಹಾಕಿ, ಕ್ಷಮೆ ಕೇಳುವಂತೆ ಬಿಗಿಪಟ್ಟು ಹಿಡಿದಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications