Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ
ಬೇಸಿಗೆಯ ತಾಪಮಾನ ದಿನದಿಂದ ದಿನಕ್ಕೆ ಗರಿಷ್ಠ ಮಟ್ಟಕ್ಕೆ ತಲುಪುತ್ತಿದ್ದಂತೆ, ದೇಹದಲ್ಲಿ ನೀರಿನ ಕೊರತೆ (ಡಿಹೈಡ್ರೇಶನ್) ಸಮಸ್ಯೆ ಹೆಚ್ಚಾಗುತ್ತಿದೆ. ಈ ಸಮಯದಲ್ಲಿ ತಂಪು ಪಾನೀಯಗಳ ಮಹತ್ವವೂ ಹೆಚ್ಚಾಗುತ್ತದೆ. ವಿಶೇಷವಾಗಿ ಎಳನೀರು ಮತ್ತು ಮಜ್ಜಿಗೆ ಈ ಎರಡು ಪಾನೀಯಗಳಲ್ಲಿ ಯಾವುದು ಆರೋಗ್ಯಕ್ಕೆ ಉತ್ತಮ ಎಂಬದು ಪ್ರಶ್ನೆ ಹಲವರಲ್ಲಿದೆ.
ತಜ್ಞರ ಪ್ರಕಾರ ಈ ಎರಡೂ ಪಾನೀಯಗಳು ದೇಹಕ್ಕೆ ಅಗತ್ಯವಾದ ಹೈಡ್ರೇಶನ್ ನೀಡುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಆದರೆ ಅವುಗಳ ಪ್ರಯೋಜನಗಳು ವಿಭಿನ್ನವಾಗಿವೆ.

ಎಳನೀರಿನ ಪ್ರಮುಖ ಪಾತ್ರ
ಎಳನೀರು ಕಡಿಮೆ ಕ್ಯಾಲೊರಿಗಳನ್ನು ಹೊಂದಿದ್ದು, ಪೊಟ್ಯಾಸಿಯಮ್ ಸೇರಿದಂತೆ ಹಲವು ಎಲೆಕ್ಟ್ರೋಲೈಟ್ಗಳ ಸಮೃದ್ಧವಾಗಿದೆ. ಇದನ್ನು ಖಾಲಿ ಹೊಟ್ಟೆಯಲ್ಲಿ ಅಥವಾ ಹೊರಗಿನಿಂದ ಮನೆಗೆ ಬಂದ ನಂತರ ಸೇವಿಸಿದರೆ ದೇಹವನ್ನು ತಕ್ಷಣಕ್ಕೆ ಹೈಡ್ರೇಟ್ ಮಾಡುತ್ತದೆ. ವ್ಯಾಯಾಮದ ನಂತರವೂ ಎಳನೀರು ಕುಡಿಯುವುದು ಉತ್ತಮ ಆಯ್ಕೆಯಾಗಿದೆ.
ವಿಶೇಷವಾಗಿ ಬೇಸಿಗೆಯಲ್ಲಿ ಹೆಚ್ಚು ಬೆವರು ರೂಪದ ಮೂಲಕ ನಮ್ಮ ದೇಹದಲ್ಲಿರುವ ನೀರಿನ ಅಂಶವು ಮತ್ತು ಖನಿಜಾಂಶ ಕಡಿಮೆಯಾಗುತ್ತದೆ. ಇಂತಹ ಸಂದರ್ಭದಲ್ಲಿ ಎಳನೀರು ಸೇವಿಸುವುದು ದೇಹಕ್ಕೆ ತಕ್ಷಣ ಶಕ್ತಿ ನೀಡುವುದರ ಜೊತೆಗೆ ನೀರಿನ ಮಟ್ಟವನ್ನು ಸರಿಹೊಂದಿಸುತ್ತದೆ.
ಇದಲ್ಲದೆ ಎಳನೀರಿನಲ್ಲಿ ನೈಸರ್ಗಿಕ ಆಂಟಿಆಕ್ಸಿಡೆಂಟ್ಗಳು ಇರುವುದರಿಂದ ದೇಹದ ಒಳಗಿನ ಭಾಗಗಳು ರಕ್ಷಿಸಲು ಸಹಕಾರಿಯಾಗುತ್ತದೆ. ಇದು ಚರ್ಮದ ಆರೈಕೆಯಲ್ಲೂ ಸಹಾಯ ಮಾಡುತ್ತದೆ. ಜೀರ್ಣಕ್ರಿಯೆಯಿಗೂ ಎಳನೀರು ಸಹಕಾರಿ ಆಗಿದೆ ಮತ್ತು ಹೊಟ್ಟೆ ಉರಿಯೂತ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹ ಸಹಾಯ ಮಾಡುತ್ತದೆ.
ಜ್ವರ, ದೇಹದ ದೌರ್ಬಲ್ಯ ಅಥವಾ ಅಸ್ವಸ್ಥತೆಯ ಸಮಯದಲ್ಲೂ ವೈದ್ಯರು ಎಳನೀರು ಸೇವಿಸಲು ಸಲಹೆ ನೀಡುತ್ತಾರೆ, ಏಕೆಂದರೆ ಇದು ದೇಹಕ್ಕೆ ಅಗತ್ಯವಾದ ದ್ರವ ಮತ್ತು ಖನಿಜಾಂಶಗಳನ್ನು ಒದಗಿಸುತ್ತದೆ. ಎಳನೀರು ಬೇಸಿಗೆಯಲ್ಲಿ ಕೇವಲ ದಾಹ ನೀಗಿಸುವ ಪಾನೀಯವಲ್ಲ, ದೇಹವನ್ನು ತಂಪಾಗಿಡುವ, ಶಕ್ತಿಯನ್ನು ಹೆಚ್ಚಿಸುವ ಮತ್ತು ಆರೋಗ್ಯವನ್ನು ಕಾಪಾಡುವ ಅತ್ಯುತ್ತಮ ನೈಸರ್ಗಿಕ ಪಾನೀಯವಾಗಿದೆ.

ಮಜ್ಜಿಗೆ ಪ್ರಮುಖ ಪಾತ್ರ
ಇನ್ನೊಂದೆಡೆ, ಮಜ್ಜಿಗೆ ನಮ್ಮ ಜೀರ್ಣಕ್ರಿಯೆಗೆ ಅತ್ಯಂತ ಉಪಯುಕ್ತವಾದ ಪಾನೀಯಗಳಲ್ಲಿ ಒಂದಾಗಿದೆ. ಇದರಲ್ಲಿ ಇರುವ ಲ್ಯಾಕ್ಟಿಕ್ ಆಮ್ಲವು ಪ್ರೋಬಯಾಟಿಕ್ ಗುಣಗಳನ್ನು ಹೊಂದಿದ್ದು, ಹೊಟ್ಟೆಯ ಒಳಗಿನ ಉತ್ತಮ ಬ್ಯಾಕ್ಟೀರಿಯಾಗಳ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಇದರಿಂದ ಆಹಾರ ಸರಿಯಾಗಿ ಜೀರ್ಣವಾಗುವುದರ ಜೊತೆಗೆ, ಗ್ಯಾಸ್ಟ್ರಿಕ್ ಮತ್ತು ಅಜೀರ್ಣ ಸಮಸ್ಯೆಗಳು ಕಡಿಮೆಯಾಗುತ್ತವೆ.
ಮಜ್ಜಿಗೆಯನ್ನು ಜೀರಿಗೆ, ಉಪ್ಪು ಮತ್ತು ಪುದೀನಾದಂತಹ ನೈಸರ್ಗಿಕ ಪದಾರ್ಥಗಳೊಂದಿಗೆ ತಯಾರಿಸಿ ಸೇವಿಸಿದರೆ ಅದರ ಆರೋಗ್ಯ ಮತ್ತಷ್ಟು ಸುಧಾರಿಸುತ್ತದೆ. ಜೀರಿಗೆ ಜೀರ್ಣಕ್ರಿಯೆಗೆ ಸಹಾಯ ಮಾಡಿದರೆ, ಪುದೀನಾ ದೇಹಕ್ಕೆ ತಂಪಿನ ಅನುಭವ ನೀಡುತ್ತದೆ ಮತ್ತು ಹೊಟ್ಟೆಯ ಉರಿಯನ್ನು ಶಮನಗೊಳಿಸುತ್ತದೆ. ಸ್ವಲ್ಪ ಉಪ್ಪು ಸೇರಿಸುವುದರಿಂದ ದೇಹದಲ್ಲಿ ಕಳೆದುಹೋಗುವ ಲವಣಾಂಶವನ್ನು ಪೂರೈಸಲು ಸಹಾಯವಾಗುತ್ತದೆ.
ಬೇಸಿಗೆಯಲ್ಲಿ ಊಟದ ನಂತರ ಮಜ್ಜಿಗೆ ಕುಡಿಯುವುದು ದೇಹಕ್ಕೆ ಒಳ್ಳೆಯದು. ಇದು ಹೊಟ್ಟೆಗೆ ತಂಪು ನೀಡುವುದರ ಜೊತೆಗೆ ತಿಂದ ಆಹಾರವನ್ನು ಸುಲಭವಾಗಿ ಜೀರ್ಣವಾಗಲು ಸಹಾಯ ಮಾಡುತ್ತದೆ. ಜೊತೆಗೆ ಮಜ್ಜಿಗೆಯು ದೇಹದ ತಾಪಮಾನವನ್ನು ಸಮತೋಲನದಲ್ಲಿಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ, ಬಿಸಿಲಿನ ತಾಪಮಾನದ ಪರಿಣಾಮದಿಂದ ಉಂಟಾಗುವ ದೌರ್ಬಲ್ಯ ಮತ್ತು ದೇಹದ ಬಿಸಿ ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಇದಲ್ಲದೆ ಮಜ್ಜಿಗೆ ದೇಹವನ್ನು ಒಳಗಿನಿಂದ ತಂಪಾಗಿಡುವುದರಿಂದ ಹೀಟ್ ಸ್ಟ್ರೋಕ್ ಅಪಾಯವನ್ನು ತಡೆಯಲು ಸಹ ಸಹಕಾರಿ.ತಜ್ಞರು ಹೇಳುವಂತೆ ಈ ಎರಡು ಪಾನೀಯಗಳನ್ನು ಪರ್ಯಾಯವಾಗಿ ಸೇವಿಸುವುದು ದೇಹದ ಆರೋಗ್ಯಕ್ಕೆ ಹೆಚ್ಚು ಉಪಯುಕ್ತ. ತೆಂಗಿನ ನೀರು ತಕ್ಷಣದ ಹೈಡ್ರೇಶನ್ ನೀಡಿದರೆ, ಮಜ್ಜಿಗೆ ದೀರ್ಘಕಾಲದ ಜೀರ್ಣಕ್ರಿಯೆ ಸುಧಾರಣೆಗೆ ಸಹಾಯ ಮಾಡುತ್ತದೆ.
ಬೇಸಿಗೆಯಲ್ಲಿ ಒಂದನ್ನೇ ಆಯ್ಕೆ ಮಾಡುವುದಕ್ಕಿಂತ, ಎಳನೀರು ಮತ್ತು ಮಜ್ಜಿಗೆ ಎರಡನ್ನೂ ಸಮನಾಗಿ ಸೇವಿಸುವುದು ಉತ್ತಮ ಆರೋಗ್ಯಕ್ಕಾಗಿ ಸೂಕ್ತವಾಗಿದೆ.
-
NHAI ನಿಂದ ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ: ತಿಂಗಳಿಗೆ ₹20,000 ಸ್ಟೈಪೆಂಡ್, ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ -
ಬೇಸಿಗೆಯಲ್ಲಿ ತಣ್ಣೀರಿನ ಸ್ನಾನ ಮಾಡುವ ಮೊದಲು ತಿಳಿದುಕೊಳ್ಳಬೇಕಾದ ವಿಷಯಗಳು -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ














Click it and Unblock the Notifications