Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?
ಬೇಸಿಗೆ ಕಾಲ ಶುರುವಾಗುತ್ತಿದ್ದಂತೆ ಬಿಸಿಲಿನಿಂದ ದೇಹವನ್ನು ತಂಪಾಗಿಡಲು ಮತ್ತು ಹೈಡ್ರೇಟ್(ನೀರಿನಾಂಶ)ನಿಂದ ಇರಲು ಜನರು ವಿವಿಧ ಪಾನಿಯಗಳತ್ತ ಮುಖ ಮಾಡುತ್ತಾರೆ. ವಿಶೇಷವಾಗಿ ಭಾರತದಲ್ಲಿ ಎಳನೀರು ಹಾಗೂ ಕಬ್ಬಿನ ರಸ ಆರೋಗ್ಯಕರ ಮತ್ತು ಜನಪ್ರಿಯ ಪಾನೀಯಗಳಾಗಿವೆ. ಆದರೆ ಈ ಎರಡರಲ್ಲಿ ಯಾವುದು ಆರೋಗ್ಯಕರ? ಯಾವುದು ಹೆಚ್ಚು ದೇಹಕ್ಕೆ ನಿರಿನಾಂಶವನ್ನು ನೀಡುತ್ತದೆ? ಇಲ್ಲಿದೆ ಅದರ ಸಂಪೂರ್ಣ ಮಾಹಿತಿ.
ಎಳನೀರು ಪ್ರಕೃತಿ ಹೈಡ್ರೇಶನ್ ಪಾನೀಯ
ಎಳನೀರನ್ನು ಸಾಮಾನ್ಯವಾಗಿ ಪ್ರಕೃತಿಯ ಪಾನೀಯ ಎಂದು ಕರೆಯಲಾಗುತ್ತದೆ. ಇದರಲ್ಲಿ ಪೊಟ್ಯಾಶಿಯಮ್, ಸೋಡಿಯಮ್ ಮತ್ತು ಮೆಗ್ನೀಶಿಯಮ್ ಮುಂತಾದ ಎಲೆಕ್ಟ್ರೋಲೈಟ್ಗಳು ಸಮೃದ್ಧವಾಗಿವೆ. ಇವು ದೇಹದಲ್ಲಿ ಬೆವರಿನಿಂದ ಮೂಲಕ ಕಳೆದುಹೋಗುವ ದ್ರವ ಮತ್ತು ಖನಿಜಗಳನ್ನು ಮರು ಪೂರೈಸುವಲ್ಲಿ ಸಹಾಯ ಮಾಡುತ್ತವೆ.

ಎಳನೀರು ಕಡಿಮೆ ಸಕ್ಕರೆ ಇರುವುದರಿಂದ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳುತ್ತಾರೆ. ದಿನ ನಿತ್ಯ ಕುಡಿಯಲು ಸೂಕ್ತವಾಗಿದೆ. ಬಿಸಿಲಿನಲ್ಲಿ ಕೆಲಸ ಮಾಡುವವರು ಮತ್ತು ಹೆಚ್ಚು ದಣಿವನ್ನು ಅನುಭವಿಸುವವರಿಗೆ ಇದು ಉತ್ತಮ ಪಾನೀಯ ಆಗಿದೆ.
ಕಬ್ಬಿನ ರಸ ತಕ್ಷಣ ಶಕ್ತಿ ನೀಡುವ ಪಾನೀಯ
ಕಬ್ಬಿನ ರಸವು ಸಾಮಾನ್ಯವಾಗಿ ಸಿಹಿಯನ್ನು ಹೊಂದಿದ್ದು ದೇಹಕ್ಕೆ ತಕ್ಷಣ ಶಕ್ತಿ ನೀಡುವ ಸಾಮರ್ಥ್ಯ ಹೊಂದಿದೆ. ಇದರಲ್ಲಿ ಸಕ್ಕರೆ, ಕ್ಯಾಲ್ಸಿಯಮ್, ಪೊಟ್ಯಾಸಿಯಮ್ ಮತ್ತು ಇತರ ಖನಿಜಾಂಶಗಳು ಇರುತ್ತವೆ. ಬೇಸಿಗೆಕಾಲದಲ್ಲಿ ದೇಹವನ್ನು ತಂಪಾಗಿಸಲು ಹಾಗೂ ದಣಿವು ನಿವಾರಿಸಲು ಕಬ್ಬಿನ ರಸ ತುಂಬಾ ಸಹಕಾರಿಯಾಗಿದೆ. ಆದರೆ ಇದರಲ್ಲಿ ಸಕ್ಕರೆಯ ಪ್ರಮಾಣವು ಹೆಚ್ಚಾಗಿರುವುದರಿಂದ ಇದನ್ನು ಮಿತವಾದ ರೀತಿಯಲ್ಲಿ ಬಳಸುವುದು ಒಳ್ಳೆಯದು.
ಹೈಡ್ರೇಶನ್ ದೃಷ್ಟಿಯಿಂದ ನೋಡಿದರೆ ದೇಹಕ್ಕೆ ಯಾವುದು ಉತ್ತಮ?
ಹೈಡ್ರೇಶನ್ ದೃಷ್ಟಿಯಿಂದ ನೋಡಿದರೆ ಆರೋಗ್ಯಕ್ಕೆ ಎಳನೀರು ಹೆಚ್ಚು ಪರಿಣಾಮಕಾರಿ ಎಂದು ಹೇಳುತ್ತಾರೆ. ಸಕ್ಕರೆಯ ಪ್ರಮಾಣವು ಕಡಿಮೆ ಮತ್ತು ಹೆಚ್ಚು ಎಲೆಕ್ಟ್ರೊಲೈಟ್ಗಳು ಹೊಂದಿರುತ್ತದೆ ಆದ್ದರಿಂದ ಎಳನೀರು ಒಳ್ಳೆಯದು ಎಂದು ತಜ್ಞರ ಅಭಿಪ್ರಾಯವಾಗಿದೆ. ಎಳನೀರು ಕುಡಿಯುವುದರಿಂದ ದೇಹದಲ್ಲಿನ ನೀರಿನಾಂಶವನ್ನು ದೀರ್ಘಕಾಲದವರೆಗೆ ಹೈಡ್ರೇಟ್ ಆಗಿ ಇಡುವ ಸಾಮರ್ಥ್ಯ ಇದೆ ಎಂದು ಹೇಳುತ್ತಾರೆ.
ಆರೋಗ್ಯಕ್ಕೆ ಹೆಚ್ಚಿನ ಲಾಭ
ಎಳನೀರು ದೇಹಕ್ಕೆ ನೀರಿನಂಶವನ್ನು ಹೆಚ್ಚು ಮಾಡುವುದರ ಜೊತೆಗೆ ಜೀರ್ಣಕ್ರಿಯೆಯನ್ನು ಸುಧಾರಿಸಲು ತುಂಬಾ ಸಹಕಾರಿಯಾಗಿದೆ. ಇದರಲ್ಲಿ ಇರುವ ನೈಸರ್ಗಿಕ ಎನ್ಜೈಮ್ಗಳು ಅಜೀರ್ಣ ಮತ್ತು ಆಮ್ಲತೆಯಂತಹ ಮುಂತಾದ ಸಮಸ್ಯೆಗಳನ್ನು ಕಡಿಮೆ ಮಾಡಲು ನೆರವಾಗಬಲ್ಲದು. ಅದೆ ರೀತಿ ಕಬ್ಬಿನ ರಸದಲ್ಲಿ ಇರುವ ಆಂಟಿಆಕ್ಸಿಡೆಂಟ್ಗಳು ದೇಹದ ರೋಗನಿರೋಧಕಗಳು ಶಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗಿದೆ.
ಯಾವಾಗ ಯಾವುದು ಕುಡಿಯಬೇಕು?
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಅಥವಾ ವ್ಯಾಯಾಮದ ನಂತರ ಎಳನೀರು ಕುಡಿಯುವುದು ಉತ್ತಮ. ಇದು ದೇಹಕ್ಕೆ ತಕ್ಷಣ ತಂಪು ನೀಡುವುದರ ಜೊತೆಗೆ ಎಲೆಕ್ಟ್ರೋಲೈಟ್ಗಳನ್ನು ಸ್ಥಿರತೆಯಲ್ಲಿ ಇಡುತ್ತದೆ. ಇನ್ನೊಂದೆಡೆ ಕಬ್ಬಿನ ರಸವು ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಈ ಕಬ್ಬಿನ ರಸವು ಹೆಚ್ಚು ದಣಿವು ಅಥವಾ ಶಕ್ತಿಯ ನ್ಯೂನತೆಯನ್ನು ಅನುಭವಿಸಿದಾಗ ಕಬ್ಬಿನ ರಸ ಕುಡಿಯುವುದರಿಂದ ದೇಹಕ್ಕೆ ತಕ್ಷಣ ಶಕ್ತಿ ಸಿಗುತ್ತದೆ. ಕಬ್ಬಿನ ರಸವನ್ನುಆಯುರ್ವೇದದಲ್ಲಿ ಕಾಮಾಲೆಯಂತಹ ಕಾಯಿಲೆಗಳಿಗೆ ಉಪಯೋಗಿಸಲಾಗುತ್ತದೆ ಇದು ತುಂಬಾ ಪ್ರಯೋಜನಕಾರಿಯಾಗಿದೆ.
ಕಬ್ಬಿನ ರಸವೂ ಆರೋಗ್ಯಕರವಾದ ಪಾನೀಯವೇ ಆಗಿದ್ದರೂ ಇದರಲ್ಲಿ ಸಕ್ಕರೆ ಪ್ರಮಾಣ ಹೆಚ್ಚು ಇರುವುದರಿಂದ ಮಿತವಾಗಿ ಸೇವಿಸುವುದು ಒಳ್ಳೆಯದು. ಜೊತೆಗೆ ಸ್ವಚ್ಛವಾದ ಸ್ಥಳದಲ್ಲಿ ತಯಾರಿಸಿದ ಕಬ್ಬಿನ ರಸವನ್ನು ಸೇವಿಸುವುದು ಆರೋಗ್ಯದ ದೃಷ್ಟಿಯಿಂದ ಅತ್ಯಂತ ಮುಖ್ಯ ಎಂದು ತಜ್ಞರು ಸಲಹೆ ನೀಡುತ್ತಾರೆ.
-
Summer Super Drink: ಪ್ರತಿದಿನ ಎರಡು ಗ್ಲಾಸ್ ಕಬ್ಬಿನ ರಸ: ಬೇಸಿಗೆಯ ಸೂಪರ್ ಡ್ರಿಂಕ್ -
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ













Click it and Unblock the Notifications