ಬಿರು ಬೇಸಿಗೆ : ಸರ್ಕಾರಿ ಕಚೇರಿ ವೇಳಾಪಟ್ಟಿ ಬದಲಾವಣೆ

ಬೆಂಗಳೂರು, ಏಪ್ರಿಲ್ 01 : ಬಿರು ಬೇಸಿಗೆಯಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಿರುವ ಕಾರಣ ಕಲಬುರಗಿ ವಿಭಾಗದ 6 ಜಿಲ್ಲೆಗಳು ಹಾಗೂ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣೆಯನ್ನು ಸಮಯವನ್ನು ಬದಲಾವಣೆ ಮಾಡಲಾಗಿದೆ.

ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಉಪ ಕಾರ್ಯದರ್ಶಿ ಆರ್.ಶಿವಲಿಂಗಯ್ಯ ಅವರು ಏ.1ರ ಶುಕ್ರವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. ಇಂದಿನಿಂದಲೇ ಈ ಆದೇಶ ಜಾರಿಗೆ ಬಂದಿದ್ದು, ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಈ ಆದೇಶ ಜಾರಿಯಲ್ಲಿರುತ್ತದೆ. [ಸುಡುತ್ತಿದೆ ಕರ್ನಾಟಕ, ಬಾ ಮಳೆಯೇ ಬೇಗ ಬಾ]

summer

ಕಚೇರಿ ವೇಳಾಪಟ್ಟಿ : ಶುಕ್ರವಾರ ಹೊರಡಿಸಿರುವ ಆದೇಶದಂತೆ ರಾಜ್ಯ ಸರ್ಕಾರಿ ಕಚೇರಿಗಳು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1.30ರ ತನಕ ಕಾರ್ಯನಿರ್ವಹಿಸಲಿವೆ. ಸಮಯ ಬದಲಾವಣೆಯಾದ ಜಿಲ್ಲೆಗಳಲ್ಲಿ ಸರ್ಕಾರಿ ನೌಕರರು ಎಂದಿನಂತೆ ಲೋಪ/ಅಡೆ-ತಡೆಗಳಿಲ್ಲದೆ ಹಾಗೂ ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಾರ್ಯನಿರ್ವಹಿಸಬೇಕಾಗಿದೆ. [ಎರಡೇ ಎರಡು ಬಕೆಟ್ ನೀರುಳಿಸಲು ಸಾಧ್ಯವೆ? ಪ್ರಯತ್ನಿಸಿ]

ಸರ್ಕಾರದ ತುರ್ತು ಕೆಲಸವಿದ್ದಾಗ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸರ್ಕಾರಿ ಕೆಲಸ ನಿರ್ವಹಿಸಲು ಆದೇಶ ಮಾಡಿದಲ್ಲಿ ಅಂತಹ ಆದೇಶಗಳನ್ನು ತಪ್ಪದೇ ಪಾಲಿಸಿ, ಸರ್ಕಾರಿ ಕೆಲಸದ ಸಮಯ ಮೀರಿದ್ದರೂ ಕೆಲಸಕ್ಕೆ ಹಾಜರಾಗತಕ್ಕದ್ದು ಎಂಬ ಷರತ್ತಿಗೊಳಪಟ್ಟು ಈ ಆದೇಶ ಹೊರಡಿಸಲಾಗಿದೆ.[ಜಲಾಶಯಗಳ ನೀರು ಕುಡಿಯುವ ನೀರಿಗಾಗಿ ಮಾತ್ರ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+