ಬೇಸಿಗೆಯ ಬಿಸಿ: 200 ಯೂನಿಟ್ ದಾಟಿದ ವಿದ್ಯುತ್ ಬಳಕೆ, ಗೃಹಜ್ಯೋತಿ ಇಲ್ಲ
ಮೈಸೂರು, ಮೇ 08: ಬಿರು ಬೇಸಿಗೆಯ ಹಿನ್ನಲೆಯಲ್ಲಿ ರಾಜ್ಯದಲ್ಲಿ ವಿದ್ಯುತ್ ಬಳಕೆ ಹೆಚ್ಚಾಗಿದೆ. ಫ್ಯಾನ್, ಎಸಿ ಬಳಕೆ ಸರಾಸರಿ ವಿದ್ಯುತ್ ಬಳಕೆ ಯೂನಿಟ್ ದಾಟುವಂತೆ ಮಾಡಿದ್ದು, ಹಲವು ಜನರು ಮೇ ತಿಂಗಳಿನಲ್ಲಿ ಉಚಿತ ವಿದ್ಯುತ್ ಬಿಲ್ ಬದಲು ಸಂಪೂರ್ಣ ಬಿಲ್ ಕಟ್ಟಬೇಕಿದೆ.
ಹೌದು, ಹಲವು ಜಿಲ್ಲೆಗಳಲ್ಲಿ ಕರ್ನಾಟಕ ಸರ್ಕಾರದ 'ಗೃಹಜ್ಯೋತಿ' ಗ್ಯಾರಂಟಿ ಈ ಬಾರಿ ಕೈಕೊಟ್ಟಿದೆ. ಏಪ್ರಿಲ್ ತಿಂಗಳಿನ ಬೇಸಿಗೆಯ ಬಿಸಿ ಜನರಿಗೆ ತಟ್ಟಿದ್ದು, ಮೇ ತಿಂಗಳಿನಲ್ಲಿ ಪೂರ್ಣ ಬಿಲ್ ಕಟ್ಟುವಂತೆ ಮಾಡಿದೆ.

2023ರ ಆಗಸ್ಟ್ನಲ್ಲಿ ಗೃಹಜ್ಯೋತಿ ಯೋಜನೆ ಘೋಷಣೆ ಮಾಡಿದ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಗೃಹ ಬಳಕೆಯ 200 ಯೂನಿಟ್ ತನಕ ಶೂನ್ಯ ವಿದ್ಯುತ್ ಬಿಲ್ ಎಂದು ಹೇಳಿತ್ತು. ಆದರೆ ಈ ಬಾರಿ ಬೇಸಿಗೆಯ ಪರಿಣಾಮ ಸಾವಿರಾರು ಜನರು ಗೃಹಜ್ಯೋತಿ ಯೋಜನೆಯಿಂದ ವಂಚಿತರಾಗಿದ್ದಾರೆ.
ಯಾವ-ಯಾವ ಜಿಲ್ಲೆ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ 42,384 ಗ್ರಾಹಕರು ಈ ತಿಂಗಳು ಗೃಹಜ್ಯೋತಿ ಯೋಜನೆಯಿಂದ ವಂಚಿತರಾಗಿ ಸಂಪೂರ್ಣ ವಿದ್ಯುತ್ ಬಿಲ್ ಕಟ್ಟಬೇಕಿದೆ.
ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳ ವ್ಯಾಪ್ತಿಯಲ್ಲಿ ಸೆಸ್ಕ್ ಅಡಿ 22.33 ಲಕ್ಷ ಗೃಹ ಬಳಕೆ ಸಂಪರ್ಕಗಳಿವೆ. ಇವುಗಳಲ್ಲಿ ಮೈಸೂರು ಜಿಲ್ಲೆಯೊಂದರಲ್ಲಿಯೇ 26,958 ಗ್ರಾಹಕರು ಸಂಪೂರ್ಣ ಬಿಲ್ ಪಾವತಿ ಮಾಡಬೇಕಿದೆ.
ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ತನಕ ಶೂನ್ಯ ಬಿಲ್ ಕರ್ನಾಟಕ ಸರ್ಕಾರದ ಗ್ಯಾರಂಟಿಯಾಗಿದೆ. ಆದರೆ ಬೇಸಿಗೆಯ ಕಾರಣಕ್ಕೆ ಸರಾಸರಿ ಬಳಕೆಯ ಮಿತಿಯನ್ನು ಗ್ರಾಹಕರು ಮೀರಿದ್ದು, ಸಂಪೂರ್ಣ ಬಿಲ್ ಪಾವತಿ ಮಾಡಬೇಕಿರುವುದು ಅನಿವಾರ್ಯವಾಗಿದೆ.
ಸರ್ಕಾರ ಗೃಹಜ್ಯೋತಿ ಯೋಜನೆ ಜಾರಿಗೊಳಿಸುವಾಗಲೇ 200 ಯೂನಿಟ್ ಉಚಿತ ವಿದ್ಯುತ್ ಎಂದು ವಾರ್ಷಿಕ ಸರಾಸರಿ ಬಳಕೆ ಆಧರಿಸಿ ಹೇಳಿತ್ತು. 200 ಯೂನಿಟ್ ದಾಟಿದರೆ ಸಂಪೂರ್ಣ ಬಿಲ್ ಪಾವತಿಸಬೇಕು ಎಂದು ಷರತ್ತು ಹಾಕಿತ್ತು. ಅದರಂತೆ ಏಪ್ರಿಲ್ನಲ್ಲಿ 200 ಯೂನಿಟ್ ಮೀರಿದವರು ಸಂಪೂರ್ಣ ಬಿಲ್ ಕಟ್ಟುತ್ತಿದ್ದಾರೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಈ ಬಾರಿಯ ಬೇಸಿಗೆಗೆ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿಸಿಲಝಳ, ಬಿಸಿಗಾಳಿಯಿಂದಾಗಿ ಫ್ಯಾನ್ ಇಲ್ಲದೇ ಇರುವುದೇ ಕಷ್ಟ ಎನ್ನುವಂತಾಗಿದೆ. ಆದ್ದರಿಂದ ಮನೆಯಲ್ಲಿ ಸದಾ ಫ್ಯಾನ್, ಎಸಿ ಆನ್ ಆಗಿರುತ್ತಿದ್ದು, ವಿದ್ಯುತ್ ಬಳಕೆ ಹೆಚ್ಚಾಗಿದೆ.
ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ 45 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ಮುಂಗಾರು ಮಳೆ ಆರಂಭವಾದರೆ ಸಾಕು ಎಂದು ಕಾದು ಕುಳಿತಿದ್ದಾರೆ. ಇಂತಹ ಹೊತ್ತಿನಲ್ಲಿಯೇ ಏಪ್ರಿಲ್ ತಿಂಗಳ ಕರೆಂಟ್ ಬಿಲ್ ನೋಡಿ ಜನರು ಮತ್ತಷ್ಟು ಬೆವೆತು ಹೋಗಿದ್ದಾರೆ. ತೆರಿಗೆ ಸೇರಿ ಸಂಪೂರ್ಣ ಬಿಲ್ ಕಟ್ಟುವುದು ಜನರಿಗೆ ಅನಿವಾರ್ಯವಾಗಿದೆ.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹಿಂಗಾರು ಮಳೆ ಆರಂಭವಾಗಿದೆ. ಆದರೆ ಬೇಸಿಗೆಯ ಧಗೆಗೆ ಮಳೆ ಎಲ್ಲಿಗೂ ಸಾಲುತ್ತಿಲ್ಲ. ಮಳೆ ಕಡಿಮೆಯಾದ ಕ್ಷಣವೇ ಮತ್ತೆ ಸೆಕೆ ಆರಂಭವಾಗುತ್ತದೆ. ರಾಜ್ಯದಲ್ಲಿ ಇನ್ನೂ ಒಂದು ವಾರ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದಾಗಿ ರಾಜ್ಯದಲ್ಲಿ ಉಷ್ಣಾಂಶದಲ್ಲಿ ಇಳಿಕೆ ಕಂಡು ಬರಬಹುದು.
ಜೂನ್-ಸೆಪ್ಟೆಂಬರ್ ನೈಋತ್ಯ ಮುಂಗಾರು ಆರಂಭವಾದರೆ ಫ್ಯಾನ್, ಎಸಿಗಳ ಬಳಕೆ ಕಡಿಮೆಯಾಗಲಿದೆ. ಆಗ ವಿದ್ಯುತ್ ಬಳಕೆ ಪ್ರಮಾಣವೂ ಕಡಿಮೆಯಾಗಲಿದ್ದು, ಜನರು ಮತ್ತೆ ಗೃಹಜ್ಯೋತಿ ಯೋಜನೆಯ ಫಲಾನುಭವಿಯಾಗಬಹುದು. ಆದರೆ ಮೇ ತಿಂಗಳಿನಲ್ಲಿ ಜನರು ಸಂಪೂರ್ಣ ಬಿಲ್ ಕಟ್ಟಲೇ ಬೇಕಿದೆ.
-
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Summer Alert: ಬೇಸಿಗೆಯಲ್ಲಿ ಫ್ರಿಜ್ ನೀರು ಕುಡಿಯುತ್ತಿದ್ದೀರಾ? ಮೊದಲು ಈ ವಿಷಯ ತಿಳಿದುಕೊಳ್ಳಿ -
ಬೇಸಿಗೆಯಲ್ಲಿ ಗ್ರಾಮೀಣ ಭಾಗದಲ್ಲಿ ಎದುರಾಗುವ ನೀರಿನ ಸಮಸ್ಯೆ ತಡೆಯಲು ಸಚಿವ ಪ್ರಿಯಾಂಕ್ ಖರ್ಗೆ ಮಾಸ್ಟರ್ ಪ್ಲಾನ್ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ












Click it and Unblock the Notifications