Summer Walking: ಬೇಸಿಗೆಯಲ್ಲಿ ವಾಕಿಂಗ್ ಮಾಡುವವರು ಈ ನಿಯಮ ತಪ್ಪದೇ ಪಾಲಿಸಿ..
ವಾಕಿಂಗ್ ಮಾಡುವುದು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಆಗಿದೆ ಹಾಗೂ ವ್ಯಾಯಾಮಗಳಲ್ಲಿ ಇದು ಒಂದು ಸರಳ ವಿಧಾನ ಕೂಡ ಹೌದು. ಆದರೆ ಬೇಸಿಗೆಯಲ್ಲಿ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾಕಿಂಗ್ ಮಾಡುವಾಗ ಕೆಲವು ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ. ಬೇಸಿಗೆ ಪ್ರಾರಂಭ ಆಗಿರುವುದರಿಂದ ತಾಪಮಾನ ಸಾಮಾನ್ಯ ಮಟ್ಟಕ್ಕಿಂತ ದಿನೇದಿನೆ ಹೆಚ್ಚಾಗುತ್ತಲೇ ಇದೆ. ಯಾವ ಸಮಯದಲ್ಲಿ ವಾಕಿಂಗ್ ಮಾಡಬೇಕು ಯಾವ ಸಮಯದಲ್ಲಿ ಮಾಡಬಾರದು ಮತ್ತು ಅದಕ್ಕೆ ಯಾವ ರೀತಿಯ ಕ್ರಮಗಳನ್ನು ಪಾಲಿಸಬೇಕು ಎಂಬುದಕ್ಕೆ ತಜ್ಞರು ಕೆಲವು ಮಾರ್ಗಸೂಚಿಗಳನ್ನು ನೀಡಿದ್ದಾರೆ.
ತಜ್ಞರ ಪ್ರಕಾರ ಮಧ್ಯವಯಸ್ಕರು ಹಾಗೂ ವೃದ್ದರು ಸೂರ್ಯನ ಬಿಸಿಲು ಕಡಿಮೆಯಾಗುವವರೆಗೆ ವಾಕಿಂಗ್ ಹೋಗುವುದನ್ನು ನಿಲ್ಲಿಸುವುದು ಒಳ್ಳೆಯದು. ಜೊತೆಗೆ ನಮ್ಮ ದೈನಂದಿನ ಹೆಜ್ಜೆಯ ಎಣಿಕೆಯ ಗುರಿಗಳನ್ನು ಹವಾಮಾನಕ್ಕೆ ಅನುಗುಣವಾಗಿ ನಾವು ಅದನ್ನು ಬದಲಾಯಿಸಬೆಕು ಎಂದು ಹೇಳುತ್ತಾರೆ.

ಬೇಸಿಗೆಯಲ್ಲಿ ನಾವು ವಾಕಿಂಗ್ ಸಂಪೂರ್ಣವಾಗಿ ನಿಲ್ಲಿಸುವ ಅಗತ್ಯವಿಲ್ಲ, ಆದರೆ ಸರಿಯಾದ ಸಮಯವನ್ನು ಆಯ್ಕೆ ಮಾಡುವುದು ಬಹಳ ಮುಖ್ಯ. ಬೆಳಿಗ್ಗೆ 5ರಿಂದ 7ರವರೆಗೆ ಅಥವಾ ಸಂಜೆ 6ರಿಂದ 8ರವರೆಗೆ ನಡಿಗೆ ಮಾಡುವುದು ಉತ್ತಮ. ಈ ಸಮಯದಲ್ಲಿ ತಾಪಮಾನ ಕಡಿಮೆ ಇರುವುದರಿಂದ ನಿರ್ಜಲೀಕರಣ ಮತ್ತು ಬಿಸಿಲಿನ ಶಾಖದ ಹೊಡೆತದ ಅಪಾಯ ಕಡಿಮೆ ಆಗುತ್ತದೆ. ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಾಕಿಂಗ್ ಮಾಡುವುದು ಅಪಾಯಕಾರಿ ಎಂದು ವೈದ್ಯರು ಎಚ್ಚರಿಸುತ್ತಾರೆ.
ಹೊಸದಾಗಿ ವಾಕಿಂಗ್ ಪ್ರಾರಂಭಿಸುವವರು ದಿನಕ್ಕೆ 20 ರಿಂದ 30 ನಿಮಿಷಗಳಿಂದ ಪ್ರಾರಂಭಿಸಿ, ಕ್ರಮೇಣ 30 ರಿಂದ 60 ನಿಮಿಷಗಳವರೆಗೆ ಮಾಡಬಹುದು. ಅಗತ್ಯವಿದ್ದರೆ ಬೆಳಿಗ್ಗೆ ಮತ್ತು ಸಂಜೆ ಎರಡು ಭಾಗಗಳಾಗಿ ನಡಿಗೆ ಮಾಡುವುದು ಉತ್ತಮ. ಉದಾಹರಣೆಗೆ ಬೆಳಿಗ್ಗೆ 15 ನಿಮಿಷ ಹಾಗೂ ಸಂಜೆ 15 ನಿಮಿಷ ಈ ರೀತಿಯಾಗಿ ವಾಕಿಂಗ್ ಮಾಡಬೇಕು.
ವಾಕಿಂಗ್ ಹೋಗುವ ಮೊದಲು
ವಾಕಿಂಗ್ ಹೋಗುವ ಮೊದಲು ಮಧ್ಯದಲ್ಲಿ ಮತ್ತು ನಂತರ ಸಾಕಷ್ಟು ನೀರು ಕುಡಿಯುವುದು ಅತ್ಯಗತ್ಯ. ಬೇಸಿಗೆಯಲ್ಲಿ ಎಲೆಕ್ಟ್ರೋಲೈಟ್ ಪಾನೀಯಗಳನ್ನು ಸೇವಿಸುವುದು ಉತ್ತಮ. ಕಾಫಿ ಮತ್ತು ಆಲ್ಕೋಹಾಲ್ನಂತಹ ಪಾನೀಯಗಳನ್ನು ಕಡಿಮೆ ಮಾಡುವುದು ಒಳ್ಳೆಯದು ಏಕೆಂದರೆ ಅವು ದೇಹವನ್ನು ಇನ್ನಷ್ಟು ನಿರ್ಜಲೀಕರಣಗೊಳಿಸಬಹುದು.
ಸೂರ್ಯನ ತಾಪಮಾನದಿಂದ ರಕ್ಷಣೆ ಪಡೆಯಲು ಹೆಚ್ಚಿನ ಸನ್ಸ್ಕ್ರೀನ್ ಬಳಸಿ, ಟೋಪಿ ಮತ್ತು ಸನ್ಗ್ಲಾಸ್ ಧರಿಸುವುದು ಅಗತ್ಯವಾಗಿದೆ. ಹಗುರವಾದ ಬಟ್ಟೆಗಳನ್ನು ಧರಿಸುವುದರಿಂದ ದೇಹದ ತಾಪಮಾನ ನಿಯಂತ್ರಣಕ್ಕೆ ಸಹಾಯವಾಗುತ್ತದೆ. ಸಾಧ್ಯವಾದಷ್ಟು ನೆರಳಿರುವ ಸ್ಥಳಗಳು, ಉದ್ಯಾನವನಗಳು ಅಥವಾ ಮರಗಳಿರುವ ದಾರಿಗಳಲ್ಲಿ ವಾಕಿಂಗ್ ಮಾಡುವುದು ಉತ್ತಮ.
ವಾಕಿಂಗ್ ವೇಳೆ ತಲೆನೋವು, ವಾಂತಿ ಅಥವಾ ತೀವ್ರ ಆಯಾಸದ ಲಕ್ಷಣಗಳು ಕಂಡುಬಂದರೆ ತಕ್ಷಣ ನಿಲ್ಲಿಸಿ ವಿಶ್ರಾಂತಿ ಪಡೆಯಬೇಕು. ನಿರ್ಜಲೀಕರಣವೂ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ತಜ್ಞರು ಹೇಳುತ್ತಾರೆ. ಒಟ್ಟಿನಲ್ಲಿ ವಾಕಿಂಗ್ ಆರೋಗ್ಯಕ್ಕೆ ಅತ್ಯುತ್ತಮವಾದರೂ ಬೇಸಿಗೆಯಲ್ಲಿ ಸರಿಯಾದ ಸಮಯ ಮತ್ತು ಮುನ್ನೆಚ್ಚರಿಕೆಗಳನ್ನು ಪಾಲಿಸುವುದು ಅತ್ಯಗತ್ಯ ಎಂದು ತಜ್ಞರು ಸಲಹೆ ನೀಡಿದ್ದಾರೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
ಶನಿವಾರ ಈ ಕೆಲಸಗಳನ್ನು ಮಾಡಿದರೆ ಬದಲಾಗಲಿದೆ ನಿಮ್ಮ ಅದೃಷ್ಟ: ಶನಿದೇವನ ಕೃಪೆಗೆ ಇಲ್ಲಿದೆ ಸರಳ ವಾಸ್ತು ಟಿಪ್ಸ್ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ














Click it and Unblock the Notifications