Get Updates
Get notified of breaking news, exclusive insights, and must-see stories!

ಕಾಂಗ್ರೆಸ್‌ ಹೈಕಮಾಂಡ್‌ನಿಂದ ಮಹತ್ವದ ನಿರ್ಧಾರ: 'ಬೆಳಗಾವಿ ಅಧಿವೇಶನಕ್ಕೆ ಹೊಸ ಮುಖ್ಯಮಂತ್ರಿ'

ಬೆಂಗಳೂರು, ನವೆಂಬರ್‌ 14: ಬೆಳಗಾವಿಯ ಅಧಿವೇಶನ ಹೊಸ ಮುಖ್ಯಮಂತ್ರಿಯೊಂದಿಗೆ ನಡೆಯಲಿದೆ. ರಾಜ್ಯದಲ್ಲಿ ಮುಖ್ಯಮಂತ್ರಿಗಳನ್ನು ಕಾಂಗ್ರೆಸ್ ಹೈಕಮಾಂಡ್ ಬದಲಿಸಲಿದೆ ಎಂಬಂಥ ಬೆಳವಣಿಗೆ ನಡೆಯುತ್ತಿರುವಂತಿದೆ ಎಂದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಸುನೀಲ್‍ಕುಮಾರ್ ಅವರು ಹೇಳಿದರು.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿ, ಉಪ ಚುನಾವಣೆಯ ಫಲಿತಾಂಶ ಬರುವುದಕ್ಕಿಂತ ಮುಂಚೆಯೇ ಸೋಲಿನ ಮುನ್ಸೂಚನೆ ಸಿಕ್ಕಿರುವ ಹಿನ್ನೆಲೆಯಲ್ಲಿ ತನ್ನ ಸ್ಥಾನಕ್ಕೆ ಚ್ಯುತಿ ಬರುವ ಭಾವನೆಯನ್ನು ಕಣ್ಮುಂದೆ ಇಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯನವರು 'ನಮ್ಮ ಶಾಸಕರನ್ನು ಬಿಜೆಪಿಯವರು ಖರೀದಿಸುತ್ತಿದ್ದಾರೆ ಎಂಬ ಹುಸಿ ಸುಳ್ಳನ್ನು ಹೇಳುತ್ತಿದ್ದಾರೆ ಎಂದು ಶಾಸಕ ಸುನೀಲ್‍ಕುಮಾರ್ ಅವರು ಟೀಕಿಸಿದರು.

Sunil kumar Says Let The Belagavi Session be held with a new Chief Minister

ಕಾಂಗ್ರೆಸ್ಸಿನ ಬೆಳವಣಿಗೆಗಳು, ನಾಯಕರ ಒಳ ಸಭೆಗಳು ಮುಖ್ಯಮಂತ್ರಿಗಳ ಕುರ್ಚಿಗೆ ಆಪತ್ತು ತರುತ್ತದೆ. ಮುಖ್ಯಮಂತ್ರಿಯವರು ಇಲ್ಲಿನತನಕ ತನ್ನ ಅಧಿಕಾರಾವಧಿಯಲ್ಲಿ ನೂರು ಸುಳ್ಳು ಹೇಳಿದ್ದು, ಇದು ನೂರ ಒಂದನೇ ಸುಳ್ಳು ಎಂದು ಅಂದುಕೊಳ್ಳುವುದಾಗಿ ತಿಳಿಸಿದರು. ಆಡಳಿತ ಪಕ್ಷವನ್ನು ಬೆದರಿಸಲು ಪ್ರತಿಪಕ್ಷದ ಹೆಗಲ ಮೇಲೆ ಬಂದೂಕು ಇಟ್ಟುಕೊಂಡು ಆಡಳಿತ ಪಕ್ಷದ ಶಾಸಕರು, ಹೈಕಮಾಂಡನ್ನು ಹೆದರಿಸುವ ಪ್ರಯತ್ನ ಮುಖ್ಯಮಂತ್ರಿಯವರ ಈ ಹೇಳಿಕೆ ಹಿಂದಿದೆ ಎಂದು ಸುನೀಲ್‌ ಕುಮಾರ್‌ ತಿಳಿಸಿದರು.

ಮೂಡ ಹಗರಣ, ವಾಲ್ಮೀಕಿ ಹಗರಣದಲ್ಲಿ ಶಾಸಕರ ನಡುವಿನ ದೊಡ್ಡ ಪ್ರಮಾಣದ ಅಸಮಾಧಾನಗಳು ಸ್ಫೋಟಗೊಳ್ಳುತ್ತದೆ; ತನ್ನ ಕುರ್ಚಿಗೆ ಅಪಾಯ ಇದೆ ಎಂಬುದನ್ನು ಅರ್ಥ ಮಾಡಿಕೊಂಡು, ಪರೋಕ್ಷವಾಗಿ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಈ ರೀತಿಯ 50 ಕೋಟಿಯ ಆಫರ್‍ಗಳನ್ನು ತಮ್ಮ ಶಾಸಕರ ಮೇಲೆ ಹೇಳುತ್ತಿದ್ದಾರೆ ಎಂದು ಅನಿಸುತ್ತಿದೆ. ಸರಕಾರ ಬಂದು 2 ವರ್ಷಗಳಾಗುತ್ತಿರುವ ಸಂದರ್ಭದಲ್ಲಿ, ಯಾವುದೇ ಅನುದಾನವಿಲ್ಲದೆ ಅಭಿವೃದ್ಧಿಯ ಚಟುವಟಿಕೆಗಳು ಸಂಪೂರ್ಣ ನಾಶವಾಗಿರುವ ಸಂದರ್ಭದಲ್ಲಿ ಆಡಳಿತ ಪಕ್ಷದ ಶಾಸಕರೇ ಅಸಮಾಧಾನಗೊಂಡಿದ್ದಾರೆ. ಬೇರೆ ಬೇರೆ ಗುಂಪುಗಳಲ್ಲಿ ಸಭೆ ನಡೆಸುತ್ತಿದ್ದಾರೆ ಎಂಬುದನ್ನು ಸಿಎಂ ಕಚೇರಿ ಗಮನಿಸುತ್ತಿದೆ ಎಂದು ಹೇಳಿದರು.

ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು, ಅನುದಾನ ಕೊಡಲಾಗದ ಅಸಹಾಯಕ ಪರಿಸ್ಥಿತಿಯಲ್ಲಿ ತಮ್ಮ ಶಾಸಕರನ್ನೇ ಖರೀದಿ ಮಾಡಿಕೊಳ್ಳುವ ಪರೋಕ್ಷ ಸಂದೇಶವನ್ನು ಮುಖ್ಯಮಂತ್ರಿಗಳು ಕೊಟ್ಟಿದ್ದಾರೆ. ನಾನು ಏನೂ ಕಡಿಮೆ ಇಲ್ಲ ಎಂದು ಉಪ ಮುಖ್ಯಮಂತ್ರಿಗಳೂ ಇದೇ ಸಂದೇಶವನ್ನು ತಮ್ಮ ಶಾಸಕರಿಗೆ ನೀಡಿದ್ದಾರೆ ಎಂದರು.

ಸಿದ್ದರಾಮಯ್ಯನವರ ಹೈಕಮಾಂಡ್ ಗಡುವು ಮುಕ್ತಾಯವಾಗುತ್ತಿದೆ. ಇದೆಲ್ಲವನ್ನೂ ಅರ್ಥ ಮಾಡಿಕೊಂಡ ಮುಖ್ಯಮಂತ್ರಿಗಳು ತಮ್ಮನ್ನು ಮುಟ್ಟಲು ಬರಬೇಡಿ ಎಂಬ ಸಂದೇಶವನ್ನು ಹೈಕಮಾಂಡಿಗೂ ಕೊಡುವ ಪ್ರಯತ್ನ ಮಾಡಿದ್ದಾರೆ. ಟೀಕೆ ಬಿಜೆಪಿಯವರ ಮೇಲೆ; ಸಂದೇಶ ಶಿವಕುಮಾರ್, ಪರಮೇಶ್ವರ್, ತನ್ನ ಆಪ್ತ ಜಾರಕಿಹೊಳಿ ಮೇಲೆ, ಹೈಕಮಾಂಡಿನ ಮೇಲೆ ಹೇಳುವ ಪ್ರಯತ್ನವನ್ನು ಅವರು ಮಾಡಿರುವಂತಿದೆ ಎಂದು ವಿಶ್ಲೇಷಿಸಿದರು.

ಅವರು ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು 50 ಕೋಟಿಯಾದರೂ ಕೊಡಲಿ, ನೂರು ಕೋಟಿಯಾದರೂ ಕೊಡಲಿ. ಆದರೆ, ಈ ರೀತಿ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಹೊಸ ಸಂಪ್ರದಾಯಕ್ಕೆ ಮುಖ್ಯಮಂತ್ರಿಗಳು ಹೋಗುತ್ತಿರುವುದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದರು.

ಗುತ್ತಿಗೆಯಲ್ಲಿ ಮುಸಲ್ಮಾನರಿಗೆ ಮೀಸಲಾತಿಯ ಮೂಲಕ ದೇಶದ ಯಾವುದೇ ರಾಜ್ಯದಲ್ಲಿ ಇಲ್ಲದೇ ಇರುವ ಪದ್ಧತಿ, ಕಾನೂನನ್ನು ಮುಖ್ಯಮಂತ್ರಿಗಳು ತರಲು ಹೊರಟಿದ್ದಾರೆ. ಇದರಿಂದ ಇಡೀ ರಾಜ್ಯದಲ್ಲಿ ಒಂದು ಸರ್ವಜನರ ಸರಕಾರ ಇದೆ ಎಂದು ಅನಿಸುವುದರ ಬದಲಾಗಿ, ಕರ್ನಾಟಕದಲ್ಲಿ ಇರುವುದು ಮುಸಲ್ಮಾನರ ಸರಕಾರ; ಮುಸಲ್ಮಾನರಿಗೆ ಮಾತ್ರ ಈ ಸರಕಾರ ಇದೆ ಎಂಬಷ್ಟರ ಮಟ್ಟಿಗೆ ಯೋಜನೆಗಳು, ಯೋಚನೆಗಳು, ಹೇಳಿಕೆಗಳು ಮುಖ್ಯಮಂತ್ರಿಗಳ ಬಾಯಿಯಿಂದ ಬರುತ್ತಿವೆ ಎಂದು ಟೀಕಿಸಿದರು.

ನಿಮ್ಮ ಆಪ್ತ ನಝೀರ್ ಅವರು ಬರೆದ ಪತ್ರ ಸುಳ್ಳೇ? ಅದನ್ನು ಬಹಿರಂಗಪಡಿಸಿ ಎಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು. ಅದರ ಮೇಲೆ ಟಿಪ್ಪಣಿ ಬರೆದು ಕೆಟಿಟಿಪಿ ಕಾಯಿದೆಗೆ ತಿದ್ದುಪಡಿ ಮಾಡಲು ಟಿಪ್ಪಣಿ ಬರೆದುದು ಸುಳ್ಳೇ? ನಿಮ್ಮ ಟಿಪ್ಪಣಿಯ ಮೇಲೆ ಕಾನೂನು ಇಲಾಖೆ ಆಲೋಚಿಸುತ್ತಿರುವುದು ಸುಳ್ಳೇ ಎಂದು ಪ್ರಶ್ನಿಸಿದರು.

ಮೊದಲು ಇದೇ ಮಾದರಿಯ ಯೋಚನೆಗಳನ್ನು ಮಾಡಿ ಸದ್ದಿಲ್ಲದೇ ಆದೇಶ ಮಾಡಿದ್ದೀರಿ. ಅಂಥದ್ದೇ ಸದ್ದಿಲ್ಲದೇ ಆದೇಶ ಮಾಡುವ ಹುನ್ನಾರ ಇವತ್ತು ನಡೆಯುತ್ತಿದೆ. ಇದರಿಂದ ರಾಜ್ಯದಲ್ಲಿ ಅರಾಜಕತೆಗೆ ಮುಖ್ಯಮಂತ್ರಿಗಳೇ ನಾಂದಿ ಹಾಡುವಂತಿದೆ ಎಂದು ಸುನೀಲ್‌ ಕುಮಾರ್‌ ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+