ಹಾಲ್ ಟಿಕೆಟ್ನಲ್ಲಿ ಸನ್ನಿ ಲಿಯೋನ್ ಫೋಟೋ: ಸಿಸ್ಟಮ್ ದೋಷವಿಲ್ಲ ಎಂದ ಇಲಾಖೆ
ಬೆಂಗಳೂರು, ನ.10 : ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಅಭ್ಯರ್ಥಿಯ ಪ್ರವೇಶ ಪತ್ರದಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಫೋಟೋ ಕಾಣಿಸಿಕೊಂಡಿರುವ ಕುರಿತ ತನಿಖೆಗೆ ತಿರುವು ಸಿಕ್ಕಿದೆ. ಶಿಕ್ಷಣ ಇಲಾಖೆಯ ಮೂಲಗಳ ಪ್ರಕಾರ, ಅಭ್ಯರ್ಥಿಯು ತನ್ನ ವಿವರಗಳನ್ನು ಅಪ್ಲೋಡ್ ಮಾಡಲು ತನ್ನ ಸ್ನೇಹಿತೆಯ ಗಂಡನ ಸಹಾಯವನ್ನು ಪಡೆದಿರುವ ಶಂಕೆ ವ್ಯಕ್ತವಾಗಿದೆ.
ಟಿಇಟಿ 2022ಗೆ ಹಾಜರಾದ ಅಭ್ಯರ್ಥಿಯ ಪರೀಕ್ಷಾ ಹಾಲ್ ಟಿಕೆಟ್ನಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರ ಫೋಟೋವನ್ನು ಮುದ್ರಿಸಿರುವ ಪ್ರವೇಶ ಪತ್ರದ ಸ್ಕ್ರೀನ್ ಶಾಟ್ ಭಾರಿ ವೈರಲ್ ಆಗಿತ್ತು. ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆ ಎದುರಾದ ಮೇಲೆ ಘಟನೆ ಕುರಿತು ತನಿಖೆಗೂ ಆದೇಸಿಸಲಾಗಿತ್ತು.
"ಅಭ್ಯರ್ಥಿಯು ತನ್ನ ವಿವರಗಳನ್ನು ತುಂಬಲು ಫೋನ್ ಅನ್ನು ಸ್ನೇಹಿತೆಯ ಗಂಡನಿಗೆ ನೀಡಿದ್ದಾರೆ. ಪರೀಕ್ಷೆಯ ನಂತರವೇ ಅವರು ಈ ಬಗ್ಗೆ ತಿಳಿದಿದ್ದಾರೆ, ಅದು ಪೊಲೀಸರು ದೂರು ದಾಖಲಿಸಿದಾಗ" ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.

ಆನ್ಲೈನ್ ನೋಂದಣಿ ವ್ಯವಸ್ಥೆಯಲ್ಲಿ ದೋಷವಿದೆ ಎಂಬ ಹೇಳಿಕೆಯನ್ನು ತಳ್ಳಿಹಾಕಿರುವ ಶಿಕ್ಷ ಮೂಲಕ ಇಲಾಖೆಯು "ಅರ್ಜಿ ಸಲ್ಲಿಸುವ ಮೊದಲು, ಅಭ್ಯರ್ಥಿಯು ಬಳಕೆದಾರ ಐಡಿ ಮತ್ತು ಪಾಸ್ವರ್ಡ್ ನೋಂದಾಯಿಸಿಕೊಳ್ಳುತ್ತಾರೆ. ಅವರ ಮಾಹಿತಿಯನ್ನು ಇಲಾಖೆ ಕೂಡ ಬದಲಿಸಲು ಸಾಧ್ಯವಿಲ್ಲ. ಅಭ್ಯರ್ಥಿ ಮಾಹಿತಿಯನ್ನು ಭರ್ತಿ ಮಾಡಿ ಪೋಟೋ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ನಿಗದಿತ ಅಂಕಣದಲ್ಲಿ ಅಪ್ಲೋಡ್ ಮಾಡಿದ ನಂತರ, ಅಭ್ಯರ್ಥಿಯು ತಾನು ನೀಡಿರುವ ಮಾಹಿತಿಯು ಸರಿಯಾಗಿದೆ ಎಂದು ಖಚಿತಪಡಿಸಿಕೊಂಡು ಅರ್ಜಿ Submit ಮಾಡಿದ ನಂತರವೇ ನಿಗದಿತ ಅರ್ಜಿ ಶುಲ್ಕ ಪಾವತಿಸಿ, ಅಭ್ಯರ್ಥಿಯು ತನ್ನ ಅನ್ಲೈನ್ ಅರ್ಜಿಯ ಪ್ರಿಂಟ್ ಅನ್ನು ಪಡೆಯುತ್ತಾರೆ" ಎಂದಿದೆ.
ಸಾರ್ವಜನಿಕ ಶಿಕ್ಷಣ ಆಯುಕ್ತ ಆರ್.ವಿಶಾಲ್ ಮಾತನಾಡಿ, "ಆನ್ಲೈನ್ ನೋಂದಣಿ ವ್ಯವಸ್ಥೆಯು ಸುರಕ್ಷಿತವಾಗಿದೆ. ಅಭ್ಯರ್ಥಿಯು ಮಾಹಿತಿ ಗೌಪ್ಯವಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಇದು ಮಾನವ ದೋಷ ಎಂದು ಹೇಳಲಾಗುವುದಿಲ್ಲ. ಘಟನೆಗೆ ಯಾರು ಹೊಣೆ ಎಂದು ತನಿಖೆ ಮಾಡಲು ನಾವು ಪ್ರಕರಣ ದಾಖಲಿಸಿದ್ದೇವೆ" ಎಂದಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆಯು (ಡಿಪಿಐ) ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET) ಪತ್ರಿಕೆ-1 ಮತ್ತು ಪತ್ರಿಕೆ-2 ರ ಕೀ ಉತ್ತರಗಳನ್ನು ಬುಧವಾರ ಪ್ರಕಟಿಸಿದೆ. ಎರಡೂ ಪತ್ರಿಕೆಗಳ ಕೀ ಉತ್ತರಗಳು ಡಿಪಿಐ ವೆಬ್ಸೈಟ್ನಲ್ಲಿ ಲಭ್ಯವಿದೆ (https://www.schooleducation.kar.nic.in/). ಅಭ್ಯರ್ಥಿಗಳು ತಮ್ಮ ನೋಂದಣಿ/ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ಹಾಗೂ ಸಂಬಂಧಿತ ದಾಖಲೆಗಳನ್ನು ಬಳಸಿಕೊಂಡು ವೆಬ್ಸೈಟ್ ಮೂಲಕ ಪರಿಶೀಲಿಸಬಹುದು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications