Lok Sabha Election 2024: ಕುಟುಂಬವಾದದ ಕಾಂಗ್ರೆಸ್ ಬೇಕೇ? ಪರಂಪರೆ ಕಾಪಾಡುವ ಬಿಜೆಪಿ ಬೇಕೇ : ಅಮಿತ್ ಶಾ
ಬೆಳಗಾವಿ, ಮೇ 03: ಕುಟುಂಬವಾದದ ಕಾಂಗ್ರೆಸ್ ಬೇಕೇ? ಪರಂಪರೆ ಕಾಪಾಡುವ ಬಿಜೆಪಿ ಬೇಕೇ? ಅಣ್ಣಾ ಸಾಹೇಬ ಜೊಲ್ಲೆಯವರನ್ನು ಗೆಲ್ಲಿಸಿ; ಮೋದಿಜೀ ಅವರಿಗೆ 400ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಅಧಿಕಾರ ಕೊಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದರು.
ಹುಕ್ಕೇರಿಯಲ್ಲಿ ಶುಕ್ರವಾರ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದ ಅವರು, ಕಾಂಗ್ರೆಸ್ ಪಕ್ಷವು ರಾಮಮಂದಿರ ನಿರ್ಮಾಣ ವಿಚಾರವನ್ನು ವಿಳಂಬ ಮಾಡಿತು. ಮೋದಿಜೀ ಅವರು ಕೇಸು ಗೆದ್ದು, ಭೂಮಿಪೂಜೆ ಮಾಡಿ ಪ್ರಾಣ ಪ್ರತಿಷ್ಠಾಪನೆಯನ್ನೂ ಮಾಡಿದರು. ರಾಹುಲ್ ಬಾಬಾ, ಸೋನಿಯಾ ಗಾಂಧಿ, ಖರ್ಗೆಯವರಿಗೆ ಆಮಂತ್ರಣಪತ್ರ ಇದ್ದರೂ ಅವರು ಗೈರುಹಾಜರಾದರು. ಮತಬ್ಯಾಂಕ್ಗಾಗಿ ಈ ನಿರ್ಧಾರ ಮಾಡಿದ್ದಾರೆ. ಇವರಿಗೆ ಮತ ಕೊಡಲು ಸಾಧ್ಯವೇ ಎಂದು ಕೇಳಿದರು.

ಕಾಶಿ ವಿಶ್ವನಾಥ ಮಂದಿರವನ್ನು ಔರಂಗಬೇಬನು ಹಾಳು ಮಾಡಿದ್ದ. ಕಾಶಿ ಕಾರಿಡಾರ್, ಸೋಮನಾಥ ಮಂದಿರ ಮೊದಲಾದ ಕೆಲಸಗಳನ್ನು ಮೋದಿಜೀ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷವು ತುಷ್ಟೀಕರಣಕ್ಕಾಗಿ ಈ ಎಲ್ಲ ವಿಚಾರಗಳನ್ನು ಕಡೆಗಣಿಸಿತ್ತು ಎಂದು ಹೇಳಿದರು.
ಕಾಶ್ಮೀರ ನಮ್ಮದಲ್ಲವೇ ಎಂದು ಪ್ರಶ್ನಿಸಿದ ಅವರು, ಖರ್ಗೆಯವರು ನಮಗೆ ಕಾಶ್ಮೀರದ ಜೊತೆಗೇನು ಸಂಬಂಧ ಎನ್ನುತ್ತಾರೆ. ಆದರೆ, ಇಲ್ಲಿನ ಜನತೆ ಕಾಶ್ಮೀರಕ್ಕಾಗಿ ತಮ್ಮ ಪ್ರಾಣವನ್ನೇ ಕೊಡಲು ಸಿದ್ಧರಿದ್ದಾರೆ ಎಂದು ಹೇಳಿದರು. 370ನೇ ವಿಧಿ ರದ್ದು ಮಾಡಬೇಕಿತ್ತಲ್ಲವೇ ಎಂದು ಕೇಳಿದರು. ಕಾಂಗ್ರೆಸ್ ಪಕ್ಷವು ಕಾಶ್ಮೀರಕ್ಕೆ 370ನೇ ವಿಧಿಯಡಿ ನೀಡಿದ್ದ ವಿಶೇóಷ ಸ್ಥಾನಮಾನವನ್ನು ಮೋದಿಜೀ ಅವರು ರದ್ದು ಮಾಡಿದ್ದಾರೆ ಎಂದು ತಿಳಿಸಿದರು. ಕಾಶ್ಮೀರದ ಆತಂಕವಾದ, ಭಯೋತ್ಪಾದನೆ ಈಗ ಇಲ್ಲವಾಗಿದೆ ಎಂದರು.
ರಾಹುಲ್ ಬಾಬಾ ಅವರು ಸಂಸತ್ತಿನಲ್ಲಿ ಆಗ ಮಾತನಾಡಿದ್ದರು. 370 ನೇ ವಿಧಿ ರದ್ದು ಮಾಡಿದರೆ ರಕ್ತದ ನದಿ ಹರಿಯುತ್ತದೆ ಎಂದಿದ್ದರು. 5 ವರ್ಷ ಕಳೆದರೂ ಏನೂ ಸಮಸ್ಯೆ ಆಗಿಲ್ಲ ಎಂದು ನುಡಿದರು. ಮೋದಿಜೀ ಅವರು ದೇಶವನ್ನು ಬಾಧಿಸುತ್ತಿದ್ದ ಭಯೋತ್ಪಾದಕತೆಯಿಂದ ಮುಕ್ತಿ ಕೊಟ್ಟಿದ್ದಾರೆ; ಪಿಎಫ್ಐ ನಿಷೇಧಿಸಿದ್ದಾರೆ ಎಂದು ತಿಳಿಸಿದರು.
ಎಸ್ಡಿಪಿಐ ಬೆಂಬಲದೊಂದಿಗೆ ಕಾಂಗ್ರೆಸ್ ಸರಕಾರ ನಡೆಯುತ್ತಿದೆ ಎಂದು ಟೀಕಿಸಿದ ಅವರು, ಬೆಂಗಳೂರು ಬಾಂಬ್ ಸ್ಫೋಟವನ್ನು ಪ್ರಸ್ತಾಪಿಸಿದರು. ನೇಹಾ ಹಿರೇಮಠ ಅವರ ಹತ್ಯೆ ಕೇಸನ್ನು ಸರಿಯಾಗಿ ತನಿಖೆ ಮಾಡಲು ಆಗದಿದ್ದರೆ ಸಿಬಿಐಗೆ ಕೊಡಿ ಎಂದು ರಾಜ್ಯ ಸರಕಾರಕ್ಕೆ ಎಚ್ಚರಿಸಿದರು.
ಹಿಂದೂ ವಿರೋಧಿಗಳು ಮತ್ತು ಹಿಂದೂಗಳಿಗೆ ಅವಮಾನ ಮಾಡುವವರು ಮತ್ತು ಹಿಂದೂ ಸನಾತನ ಧರ್ಮ ಸಂರಕ್ಷಣೆ ಮಾಡುವವರ ನಡುವೆ ಮತಸಮರ ನಡೆದಿದೆ ಎಂದು ತಿಳಿಸಿದರು. ಅಣ್ಣಾ ಸಾಹೇಬ ಜೊಲ್ಲೆ ಅವರಿಗೆ ಕೊಟ್ಟ ಮತವು ಮೋದಿಜೀ ಅವರಿಗೆ ತಲುಪಲಿದೆ ಎಂದರು. ಕರ್ನಾಟಕದಲ್ಲಿ ಬಿಜೆಪಿ ಸರಕಾರ ಇದ್ದಾಗ ರೈತರಿಗೆ 10 ಸಾವಿರ ಸಿಗುತ್ತಿತ್ತು. ರಾಜ್ಯ ಸರಕಾರ ಕೊಡುತ್ತಿದ್ದ 4 ಸಾವಿರವನ್ನು ರದ್ದು ಮಾಡಿದ್ದಾರೆ. ಯಾಕೆ ಹೀಗೆ ಮಾಡಿದ್ದೀರಿ ಎಂದು ಕೇಳಿದರು.
ಬರಗಾಲ, ನೀರಿನ ಸಮಸ್ಯೆ ತೀವ್ರಗೊಂಡಿದೆ. ವಿದ್ಯುತ್ ಸಂಕಷ್ಟ ಎದುರಾಗಿದೆ. ಕಾಂಗ್ರೆಸ್ಸಿಗರು ಕರ್ನಾಟಕವನ್ನು ದಿವಾಳಿ ಮಾಡಿದ್ದಾರೆ. ಮೋದಿಯವರಿಗೆ ಮತ ಕೊಟ್ಟರೆ ಕರ್ನಾಟಕದ ಸಮಗ್ರ ಅಭಿವೃದ್ಧಿ ಮಾಡುತ್ತೇವೆ ಎಂದು ಅವರು ಪ್ರಕಟಿಸಿದರು. ನದಿ ಜೋಡಣೆ ಮೂಲಕ ನೀರಿನ ಸಮಸ್ಯೆ ಪರಿಹರಿಸುವುದಾಗಿ ತಿಳಿಸಿದರು. ಇಲ್ಲಿನ 3 ಲಕ್ಷ ಮನೆಗಳಿಗೆ ನಳ್ಳಿ ನೀರು ಸಂಪರ್ಕ, ಗ್ಯಾಸ್ ಸಂಪರ್ಕ, 2 ಲಕ್ಷ ರೈತರಿಗೆ ಕಿಸಾನ್ ಸಮ್ಮಾನ್ ಸೇರಿ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಕೂಡ ಅವರು ಇದೇವೇಳೆ ಮಾಹಿತಿ ಕೊಟ್ಟರು.
ರಾಹುಲ್ ಬಾಬಾ ಕಂಪೆನಿಯಿಂದ ದೇಶವನ್ನು ಸುರಕ್ಷಿತವಾಗಿ ಇಡಲು ಸಾಧ್ಯವಿಲ್ಲ. ಮೋದಿಜೀ ಅವರ ಅವಧಿಯಲ್ಲಿ ದೇಶ ಸುರಕ್ಷಿತವಾಗಿತ್ತು, ಸಮೃದ್ಧ ದೇಶವಾಗಿ ಭಾರತ ಹೊರಹೊಮ್ಮಿದೆ. ಸೋನಿಯಾ ಗಾಂಧಿ, ರಾಹುಲ್, ಮನಮೋಹನ್ ಸಿಂಗ್ ಅವರ ಸರಕಾರ ಇದ್ದಾಗ ಬಾಂಬ್ ಸ್ಫೋಟ, ಭಯೋತ್ಪಾದನೆ ನಿರಂತರವಾಗಿ ನಡೆದಿತ್ತು ಎಂದು ವಿವರಿಸಿದರು.
ಜಗತ್ತಿನ 3ನೇ ಪ್ರಮುಖ ಆರ್ಥಿಕ ಶಕ್ತಿಯಾಗಿ ಭಾರತ ಹೊರಹೊಮ್ಮಲು ಮೋದಿ ಗ್ಯಾರಂಟಿಯನ್ನು ಬೆಂಬಲಿಸಿ ಎಂದು ಮನವಿ ಮಾಡಿದರು. ರಾಹುಲ್ ಬಾಬಾ ಅಮೇಥಿಯಿಂದ ರಾಯಬರೇಲಿಗೆ ಓಡಿದ್ದಾರೆ. ರಾಹುಲ್ ಬಾಬಾಗೆ ಸೋಲು ಖಚಿತ ಎಂದು ತಿಳಿಸಿದರು. ಕೋವಿಡ್ ಲಸಿಕೆಯನ್ನು ಮೋದಿ ಲಸಿಕೆ ಎಂದು ರಾಹುಲ್ ಬಾಬಾü ಹೇಳಿದ್ದರು. ಅಲ್ಲದೆ ಸದ್ದಿಲ್ಲದೆ ರಾತ್ರಿ ಲಸಿಕೆ ಹಾಕಿಸಿಕೊಂಡಿದ್ದರು ಎಂದು ವ್ಯಂಗ್ಯವಾಡಿದರು.
ಒಂದೆಡೆ 12 ಲಕ್ಷ ಕೋಟಿಯ ಹಗರಣಗಳ, ಭ್ರಷ್ಟಾಚಾರ ಮಾಡಿದ ಕಾಂಗ್ರೆಸ್ ಪಕ್ಷ ಇದೆ. ಇನ್ನೊಂದೆಡೆ 23 ವರ್ಷ ಸಿಎಂ, ಪ್ರಧಾನಿ ಆಗಿದ್ದರೂ ಒಂದೇ ಒಂದು ಪೈಸೆಯ ಭ್ರಷ್ಟಾಚಾರದ ಆರೋಪ ಇಲ್ಲದ ಪ್ರಾಮಾಣಿಕರಾದ ನರೇಂದ್ರ ಮೋದಿಯವರು ಇದ್ದಾರೆ ಎಂದು ವಿಶ್ಲೇಷಿಸಿದರು. ಮುಂದಿನ 5 ವರ್ಷಗಳ ಕಾಲ ಇವರಿಬ್ಬರ ನಡುವೆ ಯಾರಿಗೆ ಅಧಿಕಾರ ಎಂಬುದನ್ನು ಆಯ್ಕೆ ನಡೆಸಬೇಕಿದೆ ಎಂದು ತಿಳಿಸಿದರು.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications