ಲಕ್ಷ್ಮಿ ಹೆಬ್ಬಾಳ್ಕರ್‌ ಪುತ್ರನನ್ನು ಬೆಂಬಲಿಸಲು ಮನವಿ ಮಾಡಿದ ನೇಹಾ ಹಿರೇಮಠ ತಂದೆ- ಬೆಳಗಾವಿಯಲ್ಲಿ ಬಿಜೆಪಿಗೆ ಮತ್ತೊಂದು ಹಿನ್ನೆಡೆ

ಬೆಳಗಾವಿ, ಮೇ 03: ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಕ್ಯಾಂಪಸ್‌ನಲ್ಲಿ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾಳನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆ ಪ್ರಕರಣದ ಸಂಬಂಧ ಪೊಲೀಸರು ಆರೋಪಿ ಫಯಾಜ್‌ನನ್ನು ಬಂಧಿಸಿದ್ದಾರೆ. ಆರೋಪಿ ಫಯಾಜ್‌ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ನೇಹಾ ತಂದೆ ನಿರಂಜನ್ ಹಿರೇಮಠ ಅವರು ಕಾಂಗ್ರೆಸ್‌ ಅಭ್ಯರ್ಥಿಯನ್ನ ಬೆಂಬಲಿಸುವಂತೆ ಮನವಿ ಮಾಡಿದ್ದು, ಮತ್ತೊಮ್ಮೆ ಬೆಳಗಾವಿ ಬಿಜೆಪಿ ಅಭ್ಯರ್ಥಿಗೆ ಹಿನ್ನೆಡೆಯಾಗಿದೆ.

ಹೌದು, ಹುಬ್ಬಳ್ಳಿಯ ಕಾಲೇಜು ಆವರಣದಲ್ಲಿ ಅಮಾನುಷವಾಗಿ ಹತ್ಯೆಗೀಡಾದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಪೋಷಕರು ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಅಗತ್ಯವಿರುವ ಎಲ್ಲ ರೀತಿಯ ಬೆಂಬಲವನ್ನು ನೀಡಿದರು. .

Support Mrinal Hebbalkar in LS polls Hubballi murder victim s father urges people

ಈ ಸಂದರ್ಭದಲ್ಲಿ ನೇಹಾ ಅವರ ತಂದೆ ನಿರಂಜನ್ ಹಿರೇಮಠ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಗಳು ಹತ್ಯೆಯಾದ ನಂತರ ಬೆಂಬಲ ಸೂಚಿಸಲು ಮನೆಗೆ ಬಂದಿದ್ದು, ಸಮಗ್ರ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದಾರೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಕೌನ್ಸಿಲರ್‌ ನಿರಂಜನ್‌ ಮಾತನಾಡಿ, ಹಂತಕರಿಗೂ ಕಠಿಣ ಶಿಕ್ಷೆಯಾಗುವಂತೆ ಸರ್ಕಾರ ನೋಡಿಕೊಳ್ಳಲಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ ಎಂದು ತಿಳಿಸಿದರು.

ಕಷ್ಟಕಾಲದಲ್ಲಿ ಕುಟುಂಬಕ್ಕೆ ಬೆಂಬಲವಾಗಿ ನಿಲ್ಲುವಲ್ಲಿ ಹೆಬ್ಬಾಳ್ಕರ್ ಅವರ ಪಾತ್ರವನ್ನು ಶ್ಲಾಘಿಸಿದ ನಿರಂಜನ್ ಹಿರೇಮಠ ಅವರು, ನೇಹಾ ಸಾವಿನ ವಿಷಯವನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸುವುದಾಗಿ ಹೇಳಿದರು. ಲೋಕಸಭೆ ಚುನಾವಣೆಗೆ ಬೆಳಗಾವಿಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಮುಂದಿನ ದಿನಗಳಲ್ಲಿ ಸಂಸತ್ತಿನಲ್ಲಿ ನೇಹಾ ಹತ್ಯೆಯ ವಿಷಯವನ್ನು ಪ್ರಸ್ತಾಪಿಸಲು ಮೃಣಾಲ್ ಅವರನ್ನು ಜನರು ಬೆಂಬಲಿಸಬೇಕೆಂದು ನಾನು ಬಯಸುತ್ತೇನೆ ಎಂದು ನಿರಂಜನ್ ಹೇಳಿದರು. ಕುಟುಂಬಕ್ಕೆ ಬೆಂಬಲ ನೀಡಿದ ಎಬಿವಿಪಿ ಸೇರಿದಂತೆ ವಿದ್ಯಾರ್ಥಿ ಸಂಘಗಳು ಹಾಗೂ ರಾಜಕೀಯ ಪಕ್ಷಗಳ ಬೇಧವಿಲ್ಲದೆ ಎಲ್ಲ ನಾಯಕರಿಗೆ ಕೃತಜ್ಞತೆ ಸಲ್ಲಿಸಿದರು. ನೇಹಾ ಅವರ ಹತ್ಯೆಯ ಘಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ರಾಜಕಾರಣಿಗಳು ದುಃಖಿತ ಕುಟುಂಬಕ್ಕೆ ನ್ಯಾಯ ಒದಗಿಸುವ ಏಕೈಕ ಉದ್ದೇಶದಿಂದ ಪ್ರಸ್ತಾಪಿಸಿದ್ದಾರೆ ಎಂದು ನಿರಂಜನ್ ಹೇಳಿದರು.

ಬಳಿಕ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ನೇಹಾ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ. ನೇಹಾ ಪಾಲಕರು ತಮ್ಮ ದುಃಖವನ್ನು ಹಂಚಿಕೊಂಡಿದ್ದಾರೆ‌. ದೊಡ್ಡ ಸಮಾಜ ನಾವೆಲ್ಲಾ ಜೊತೆಯಲ್ಲಿ ಇರ್ತೀವಿ ಅಂತ ಹೇಳಿದ್ದೇನೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿದೆ ಎಂದು ಸಚಿವರು ಹೇಳಿದರು ‌

ಇಂಥ ಘಟನೆ ನಡೆಯಬಾರದಿತ್ತು. ಇದನ್ನು ಕಠಿಣ‌ ಶಬ್ದದಿಂದ ಖಂಡಿಸುತ್ತೇನೆ. ಪ್ರಕರಣದ ತನಿಖೆ ಬಗ್ಗೆ ಯಾರಿಗೂ, ಯಾವುದೇ ಸಂಶಯ ಬೇಡ. ತನಿಖೆ ನಡೆಯಲಿದ್ದು, ನಾನೊಬ್ಬ ತಾಯಿಯಾಗಿ ಘಟನೆಯನ್ನು ಖಂಡಿಸುತ್ತೇನೆ ಎಂದು ಸಚಿವರು ಹೇಳಿದರು. ಇಂತಹ ಸಂದರ್ಭದಲ್ಲಿ‌ ಸಾಂತ್ವನ, ಸಮಾಧಾನ ಹೇಳಿದರೆ ಸಾಲದು. ಈ ವೇಳೆ ಯಾವುದೇ ರಾಜಕೀಯ ಮಾತುಗಳ ಬೇಡ ಎಂದು ಪತ್ರಕರ್ತರಲ್ಲಿ ಮನವಿ ಮಾಡಿದರು.

ಬೇರೆ ಯಾವ ವಿಷಯದ ಬಗ್ಗೆಯೂ ಮಾತನಾಡುವ ಸಂದರ್ಭ‌ ಇದಲ್ಲ. ಆ ಹೆಣ್ಣು ಮಗಳಿಗೆ ನ್ಯಾಯ ಕೊಡಿಸುವ ಜವಾಬ್ದಾರಿ ಇದೆ. ನಿರಂಜನ್ ಹಿರೇಮಠ ಅವರು ನಮ್ಮ ಪಕ್ಷದ ಕಾರ್ಪೊರೇಟರ್. ಅವರ ಜೊತೆಗೆ ನಾವಿದ್ದೇವೆ. ಅವರ ಮಗಳಿಗೆ ಸೂಕ್ತ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+