ಸುಪ್ರೀಂ ಕೋರ್ಟ್ ಕಾವೇರಿ ತೀರ್ಪಿಗೆ ಯಾರು, ಏನೆಂದರು?
ಕಾವೇರಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕರ್ನಾಟಕದ ಪರ ವಕೀಲರೂ ಹೇಳುವಂತೆ ಈ ತೀರ್ಪಿನಿಂದ ಕರ್ನಾಟಕ ಒಂದಿಷ್ಟು ನಿರಾಳ ಆಗಬಹುದಾಗಿದೆ. ಹದಿನಾಲ್ಕು ಟಿಎಂಸಿ ಅಡಿ ನೀರು ರಾಜ್ಯದ ಪಾಲಿಗೆ ಉಳಿತಾಯ ಆಗಲಿದ್ದು, ಬೆಂಗಳೂರಿಗೆ ಹೆಚ್ಚುವರಿಯಾಗಿ ನಾಲ್ಕು ಟಿಎಂಸಿ ಅಡಿ ನೀರು ದೊರೆಯಲಿದೆ.
ಈ ತೀರ್ಪಿನ ಬಗ್ಗೆ ರಾಜ್ಯದಲ್ಲಿ ಸಂತೋಷ ವ್ಯಕ್ತವಾಗುತ್ತಿದೆ. ತನ್ನ ಪಾಲಿನ ನೀರಿನ ಪ್ರಮಾಣ ಕಡಿಮೆ ಆಗಿರುವುದಕ್ಕೆ ತಮಿಳುನಾಡಿನಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ರೈತರು ಪ್ರತಿಭಟನೆ ನಡೆಸುತ್ತಿದ್ದು, ತೀರ್ಪಿನ ಬಗ್ಗೆ ತಮ್ಮ ಅಸಮಾಧಾನ ತೋರಿಸಿಕೊಳ್ಳುತ್ತಿದ್ದಾರೆ. ಇನ್ನು ಅಲ್ಲಿನ ರಾಜಕೀಯ ಮುಖಂಡರು ಪರಸ್ಪರ ಆರೋಪದಲ್ಲಿ ತೊಡಗಿದ್ದಾರೆ.
ಇನ್ನು ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಕರ್ನಾಟಕದಲ್ಲಿ ಸಂತಸ ವ್ಯಕ್ತವಾಗಿದ್ದು, ಈ ಬಗ್ಗೆ ರಾಜಕಾರಣಿಗಳು, ಮುಖಂಡರು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಯಾರು- ಏನು ಹೇಳಿದರು ಎಂಬುದನ್ನು ತಿಳಿಯಲು ಇಲ್ಲಿ ಅಭಿಪ್ರಾಯಗಳನ್ನು ಹಾಕಲಾಗಿದೆ. ಅವುಗಳೇನು ಎಂದು ತಿಳಿಯಲು ಮುಂದೆ ಓದಿ.

ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ
ಬೆಂಗಳೂರು ಬೆಳೆಯುತ್ತಿರುವ ನಗರ. ಆದ್ದರಿಂದ ಹೆಚ್ಚಿನ ನೀರಿನ ಅಗತ್ಯವಿದೆ. ತೀರ್ಪನ್ನು ಪೂರ್ತಿಯಾಗಿ ಓದದೆ ಅಂತಿಮ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ಬೆಂಗಳೂರು ನಗರದ ನೀರಿನ ಅಗತ್ಯವನ್ನು ಸುಪ್ರೀಂ ಕೋರ್ಟ್ ಗಣನೆಗೆ ತೆಗೆದುಕೊಂಡಿದೆ. ತೀರ್ಪು ಸಮಾಧಾನಕರವಾಗಿದೆ.

ಬ್ರಿಜೇಶ್ ಕಾಳಪ್ಪ, ಕರ್ನಾಟಕ ಪರ ವಕೀಲ, ಕಾಂಗ್ರೆಸ್ ಮುಖಂಡ
ಕರ್ನಾಟಕದ ಪಾಲಿನ ನೀರಿನ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ತಮಿಳುನಾಡಿನ ಪ್ರಮಾಣ ಇಳಿಸಲಾಗಿದೆ. ಬೆಂಗಳೂರಿಗೆ ಹೆಚ್ಚುವರಿ ನೀರು ಸಿಗಲಿದೆ. ಇದರಿಂದ ಬೆಂಗಳೂರಿನ ಜನರಿಗೆ ದೊಡ್ಡ ಮಟ್ಟದ ನಿರಾಳ.

ಜಗದೀಶ್ ಶೆಟ್ಟರ್, ವಿಪಕ್ಷ ನಾಯಕ
ಮೇಲ್ನೋಟಕ್ಕೆ ನಾವು ಈ ತೀರ್ಪನ್ನು ಸ್ವಾಗತಿಸುತ್ತೇವೆ. ಆದರೆ ತೀರ್ಪಿನ ಬಗ್ಗೆ ಸಂಪೂರ್ಣ ಮಾಹಿತಿ ಸಿಕ್ಕ ಮೇಲೆ ಪ್ರತಿಕ್ರಿಯೆ ನೀಡುತ್ತೇನೆ.

ಸಿದ್ದರಾಮಯ್ಯ, ಮುಖ್ಯಮಂತ್ರಿ
ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ಕರ್ನಾಟಕಕ್ಕೆ 14.5 ಟಿಎಂಸಿ ಹೆಚ್ಚುವರಿ ನೀರು ಸಿಕ್ಕಿದೆ. ಇದರಿಂದಾಗಿ ರಾಜ್ಯಕ್ಕೆ ಅನುಕೂಲವಾಗಿದೆ. ವಿವರಗಳನ್ನು ನೋಡಿ ಮುಂದಿನ ಪ್ರತಿಕ್ರಿಯೆ ನೀಡುತ್ತೇನೆ.

ರಾಜೀವ್ ಚಂದ್ರಶೇಖರ್, ರಾಜ್ಯಸಭಾ ಸದಸ್ಯ
ಕಾವೇರಿ ವಿಚಾರವಾಗಿ ಸುಪ್ರೀಂ ಕೋರ್ಟ್ ತೀರ್ಪು ನ್ಯಾಯಸಮ್ಮತವಾಗಿದೆ. ಎರಡು ರಾಜ್ಯಗಳ ಮಧ್ಯದ ರಾಜಕೀಯ ವ್ಯಾಜ್ಯ ಹಾಗೂ ನೀರು ನಿರ್ವಹಣೆ ಮಾಡಬೇಕು ಎಂಬ ಒತ್ತಡಕ್ಕೆ ಶಾಶ್ವತ ಪರಿಹಾರ ಮಾರ್ಗ ಇದಾಗಿದೆ. ಬೆಂಗಳೂರಿನಲ್ಲಿ ನೀರು ಉಳಿಸುವ ಪದ್ಧತಿ ಮುಂದುವರಿಯಲಿ. ನಾವು ಆ ದಿಕ್ಕಿನಲ್ಲಿ ಸಾಗೋಣ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications