ಕರ್ನಾಟಕದಲ್ಲಿ Thug Life ರಿಲೀಸ್ಗೆ ಗ್ರೀನ್ಸಿಗ್ನಲ್: ಕನ್ನಡಿಗರ ನಡೆಗೆ ಸುಪ್ರೀಂಕೋರ್ಟ್ ಹೇಳಿದ್ದೇನು?
ಕನ್ನಡದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಮಲ್ ಹಾಸನ್ ಅವರು ಕ್ಷಮೆ ಕೇಳುವವರೆಗೆ ಕರ್ನಾಟಕದಲ್ಲಿ ಅವರ ಥಗ್ ಲೈಫ್ ಸಿನಿಮಾ ರಿಲೀಸ್ ಮಾಡಬಾರದು ಎಂದು ಕನ್ನಡಿಗರು ವಿರೋಧ ವ್ಯಕ್ತಪಡಿಸಿದ್ದರು. ಕರ್ನಾಟಕ ಹೈಕೋರ್ಟ್ ಕೂಡ ಕ್ಷಮೆ ಕೇಳುವಂತೆ ಕಮಲ್ಗೆ ಹೇಳಿತ್ತು. ಆದರೂ ಮೊಂಡಾಟ ಮುಂದುವರಿಸಿದ್ದ ಕಮಲ್ ತಮ್ಮ ಸಿನಿಮಾ ಬಿಡುಗಡೆಗೆ ಅವಕಾಶ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸುಪ್ರೀಂಕೋರ್ಟ್ನಲ್ಲಿ ಕನ್ನಡಿಗರಿಗೆ ತೀವ್ರ ಹಿನ್ನಡೆಯಾಗಿದೆ. ಈ ವಿಚಾರವಾಗಿ ಕರ್ನಾಟಕ ಸರ್ಕಾರವನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ತಮಿಳು ಸೂಪರ್ಸ್ಟಾರ್ ಕಮಲ್ ಹಾಸನ್ ಅವರ "ಥಗ್ ಲೈಫ್" ಚಿತ್ರ ಬಿಡುಗಡೆಗೆ ಅವಕಾಶ ನೀಡುವಂತೆ ಸುಪ್ರೀಂಕೋರ್ಟ್ ಗ್ರೀನ್ಸಿಗ್ನಲ್ ನೀಡಿದೆ. ಜೊತೆಗೆ ಗುಂಪು ಬೆದರಿಕೆಗಳಿಗೆ ಕಾನೂನಿನ ನಿಯಮವನ್ನು ಒತ್ತೆಯಾಗಿ ಇಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ. ಚಿತ್ರಮಂದಿರಗಳಲ್ಲಿ ಏನು ಪ್ರದರ್ಶಿಸಬೇಕೆಂದು "ಗೂಂಡಾಗಳ ಗುಂಪುಗಳು" ನಿರ್ಧರಿಸಲು ಅವಕಾಶ ನೀಡಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.

ಮಣಿರತ್ನಂ ನಿರ್ದೇಶನದ ಥಗ್ ಲೈಫ್ ಚಿತ್ರದ ಪ್ರದರ್ಶನದ ಮೇಲಿನ ನ್ಯಾಯಾಂಗೇತರ ನಿಷೇಧದ ಬಗ್ಗೆ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಮತ್ತು ನ್ಯಾಯಮೂರ್ತಿ ಮನಮೋಹನ್ ಅವರನ್ನೊಳಗೊಂಡ ಪೀಠ ಕಳವಳ ವ್ಯಕ್ತಪಡಿಸಿದೆ. ಕಾನೂನಿನ ನಿಯಮದ ಪ್ರಕಾರ ಸಿಬಿಎಫ್ಸಿ ಪ್ರಮಾಣಪತ್ರ ಹೊಂದಿರುವ ಯಾವುದೇ ಚಿತ್ರವನ್ನು ಬಿಡುಗಡೆ ಮಾಡಬೇಕು. ರಾಜ್ಯವು ಅದರ ಪ್ರದರ್ಶನವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದೆ. ಯಾರಾದರೂ ಒಂದು ಹೇಳಿಕೆ ನೀಡಿದ್ದರೆ, ನೀವು ಇನ್ನೊಂದು ಹೇಳಿಕೆಯ ಮೂಲಕ ಅದನ್ನು ಎದುರಿಸುತ್ತೀರಿ. ಚಿತ್ರಮಂದಿರಗಳನ್ನು ಸುಡುವುದಾಗಿ ನೀವು ಬೆದರಿಕೆ ಹಾಕಲು ಸಾಧ್ಯವಿಲ್ಲ ಎಂದೂ ಪೀಠ ಎಚ್ಚರಿಸಿದೆ.
ಕರ್ನಾಟಕದ ಜನರು ಕಮಲ್ ಹಾಸನ್ ಅವರ ಹೇಳಿಕೆಯನ್ನು ಒಪ್ಪದೇ ಇರಲು ಸ್ವತಂತ್ರರು. ಆದರೆ ಮೂಲಭೂತ ಹಕ್ಕುಗಳನ್ನು ರಕ್ಷಿಸಬೇಕು ಎಂದು ಕೋರ್ಟ್ ಹೇಳಿದೆ. ಕರ್ನಾಟಕ ಮತ್ತು ಬೆಂಗಳೂರಿನ ಪ್ರಬುದ್ಧ ಜನರು ಅವರ ಹೇಳಿಕೆ ತಪ್ಪು ಎಂದು ನಂಬಿದರೆ, ಅವರು ಹಾಗೆ ಹೇಳಿಕೆ ನೀಡಬಹುದು. ಆದರೆ ಚಿತ್ರಮಂದಿರಗಳನ್ನು ಸುಡುವುದಾಗಿ ಬೆದರಿಕೆ ಹಾಕುವುದು ಏಕೆ? ಎಂದು ತರಾಟೆಗೆ ತೆಗೆದುಕೊಂಡಿದೆ.

ಕ್ಷಮೆಯಾಚಿಸಿ ಎಂದು ಹೈಕೋರ್ಟ್ ಹೇಳಿದ್ದೇಕೆ?
ಒಬ್ಬ ವ್ಯಕ್ತಿ ಹೇಳಿಕೆ ನೀಡಿದಾಗ ಎಲ್ಲರೂ ಭಾಗಿಯಾಗುತ್ತಾರೆ, ಈ ವ್ಯವಸ್ಥೆಯಲ್ಲಿ ಏನೋ ತಪ್ಪಿದೆ. ಹೈಕೋರ್ಟ್ ಕ್ಷಮೆಯಾಚಿಸಿ ಎಂದು ಏಕೆ ಹೇಳಬೇಕು? ಅದು ಅದರ ಪಾತ್ರವಲ್ಲ ಎಂದೂ ಕರ್ನಾಟಕ ಹೈಕೋರ್ಟ್ ನಡೆಯನ್ನು ಸುಪ್ರೀಂಕೋರ್ಟ್ ಖಂಡಿಸಿದೆ. ಕರ್ನಾಟಕದಲ್ಲಿ ಥಗ್ಲೈಫ್ ಸಿನಿಮಾ ರಿಲೀಸ್ಗೆ ಅವಕಾಶ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ ಎಂದು ಕಮಲ್ ಹಾಸನ್ ಅವರು ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಆಗ ಕಮಲ್ ಯಾಕೆ ಇನ್ನೂ ಕ್ಷಮೆ ಕೇಳಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಕೂಡ ಕೇಳಿತ್ತು. ಈ ವಿಚಾರವಾಗಿ ಸುಪ್ರೀಂಕೋರ್ಟ್, ಹೈಕೋರ್ಟ್ ನಡೆಯನ್ನು ಪ್ರಶ್ನಿಸಿದೆ. ಜೊತೆಗೆ ಕರ್ನಾಟಕದಲ್ಲಿ ಥಗ್ಲೈಫ್ ಸಿನಿಮಾ ರಿಲೀಸ್ಗೆ ಗ್ರೀನ್ಸಿಗ್ನಲ್ ನೀಡಿದೆ. ಗಲಭೆಗೆ ಅನುವು ಮಾಡಿಕೊಡದಂತೆ ಅದು ಇದೇ ವೇಳೆ ಸೂಚಿಸಿದೆ.
-
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Love Mocktail 3: ಲವ್ ಮಾಕ್ಟೇಲ್ 3 ಸಿನಿಮಾ ಕದ್ದ ಕಥೆ: ಮಾರಿ ಗೋಲ್ಡ್ ನಿರ್ದೇಶಕ ರಾಘವೇಂದ್ರ ನಾಯ್ಕ್ ಗಂಭೀರ ಆರೋಪ -
ಲವ್ ಮಾಕ್ಟೇಲ್ 3 ವಿವಾದ: ನನ್ನ ಕಥೆಯ ದ್ವಿತೀಯಾರ್ಧ ನಕಲು: ಸಿನಿಮಾ ಬರಹಗಾರರೇ ಎಚ್ಚರ ಎಂದ ನಿರ್ದೇಶಕ ರಾಘವೇಂದ್ರ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications