ರೋಹಿಣಿ ಸಿಂಧೂರಿ & ಡಿ.ರೂಪಾಗೆ ಸುಪ್ರಿಂ ಕೋರ್ಟ್ ಮಹತ್ವದ ಸಲಹೆ
ಬೆಂಗಳೂರು, ಮೇ, 09: ಇತ್ತೀಚೆಗಷ್ಟೇ ಡಿ.ರೂಪಾ ಅವರು ರೋಹಿಣಿ ಸಿಂಧೂರಿ ಅವರ ಕೆಲ ವೈಯಕ್ತಿಕ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡದ್ದು, ಬಳಿಕ ಭ್ರಷ್ಚಾಚಾರದ ಆರೋಪ ಹಿನ್ನೆಲೆ ಇಬ್ಬರೂ ಮಹಿಳಾ ಅಧಿಕಾರಿಗಳು ಸಾರ್ವಜನಿಕವಾಗಿ ವಾಗ್ವಾದಕ್ಕೆ ಇಳಿದಿದ್ದರು. ನಂತರ ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದೀಗ ಈ ವಿಚಾರದಲ್ಲಿ ಸುಪ್ರಿಂಕೋರ್ಟ್ ಮಹತ್ವದ ಸಲಹೆಯೊಂದನ್ನು ನೀಡಿದೆ. ಹಾಗಾದರೆ ಆ ಸಲಹೆ ಏನು ಎಂದು ಇಲ್ಲಿ ತಿಳಿಯಿರಿ.
ಪರಸ್ಪರ ಆರೋಪ-ಪ್ರತ್ಯಾರೋಪ ಬಿಟ್ಟು ಸಂಧಾನದ ಮೂಲಕ ವಿವಾದವನ್ನು ನೀವೇ ಪರಿಹರಿಸಿಕೊಳ್ಳಿ ಎಂದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರಿಗೆ ಸುಪ್ರೀಂ ಕೋರ್ಟ್ ಸಲಹೆ ನೀಡಿದೆ.

ನಿಮ್ಮಬ್ಬಿರ ನಡುವಿನ ಜಗಳ ಹೀಗೆಯೇ ಮುಂದುವರಿದರೆ ನಿಮ್ಮ ವೃತ್ತಿ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಸಾರ್ವಜನಿಕ ಜೀವನದಲ್ಲಿರುವ ನೀವು ಇಂತಹ ನಡವಳಿಕೆ ಮುಂದುವರೆಸಬಾರದು ಎಂದು ನ್ಯಾ.ಅಭಯ್ ಎಸ್.ಓಕಾ ಹಾಗೂ ಪಂಕಜ್ ಮಿತ್ತಲ್ ಅವರಿದ್ದ ಪೀಠವು ಅಭಿಪ್ರಾಯಪಟ್ಟು, ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದೆ ಎಂದು ತಿಳಿದುಬಂದಿದೆ.
ಇನ್ನು ಒಂದು ವೇಳೆ ಇಬ್ಬರೂ ತಮ್ಮ ಆರೋಪ-ಪ್ರತ್ಯಾರೋಪಗಳನ್ನು ಕೈಬಿಡಲು ಮುಂದಾದರೆ, ಇಲಾಖೆಯ ಕ್ರಮ ಕೈಗೊಳ್ಳದಂತೆ ರಾಜ್ಯಕ್ಕೆ ಸೂಚನೆ ನೀಡುವುದಾಗಿ ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ ಸೂಚಿಸಿದೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications