Fali S Nariman: ಸುಪ್ರೀಂ ಕೋರ್ಟ್ ಹಿರಿಯ ನ್ಯಾಯವಾದಿ ಫಾಲಿ ಎಸ್ ನಾರಿಮನ್ ನಿಧನ: ಗಣ್ಯರ ಸಂತಾಪ
ಬೆಂಗಳೂರು, ಫೆಬ್ರವರಿ 21: ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯವಾದಿ ಹಾಗೂ ಕರ್ನಾಟಕದ ನೀರಾವರಿ ಯೋಜನೆ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ಪರ ವಾದ ಮಾಡಿ ರಾಜ್ಯಕ್ಕೆ ನ್ಯಾಯ ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ 'ಫಾಲಿ ಎಸ್. ನಾರಿಮನ್' (Fali Sam Nariman) ಅವರು ಬುಧವಾರ (ಫೆಬ್ರವರಿ 21) ನಿಧನರಾದರು.
ಸುಮಾರು ಎಪ್ಪತ್ತು ವರ್ಷಗಳ ಕಾಲ ನ್ಯಾಯವಾದಿಯಾಗಿ ಸೇವೆ ಸಲ್ಲಿಸಿರುವ ಅವರು ದೇಶದ ಪ್ರಮುಖ ವಕೀಲರಲ್ಲಿ ಒಬ್ಬರಾಗಿದ್ದರು. ಪ್ರಸಿದ್ಧ ನ್ಯಾಯಶಾಸ್ತ್ರಜ್ಞರು ಆಗಿದ್ದ ನಾರಿಮನ್ ಅವರು ಭಾರತೀಯ ಕಾನೂನು ಇತಿಹಾಸದಲ್ಲಿ ವಿಶಿಷ್ಟ ವ್ಯಕ್ತಿಯಾಗಿ ನಿಂತವರು. ಅವರು ತಮ್ಮ 95ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು. ಅವರಿಗೆ 1991 ರಲ್ಲಿ ಪದ್ಮಭೂಷಣ ಮತ್ತು 2007 ರಲ್ಲಿ ಪದ್ಮವಿಭೂಷಣ ಪ್ರಶಸ್ತಿಗಳನ್ನು ಅವರಿಗೆ ನೀಡಿ ಗೌರವಿಸಲಾಗಿದೆ.

ಮೃತ ನಿಧನಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಸೇರಿದಂತೆ ರಾಜಕೀಯ ಗಣ್ಯರು, ಮತ್ತಿರರು ದುಃಖ ವ್ಯಕ್ತಪಡಿಸಿದ್ದಾರೆ. ಸಂತಾಪ ಸೂಚಿಸಿದ್ದಾರೆ.
1929 ರಲ್ಲಿ ಜನಿಸಿದ ಫಾಲಿ ಎಸ್. ನಾರಿಮನ್ ಅವರು ಸಾಂವಿಧಾನಿಕ ವಕೀಲರಾಗಿ ಮತ್ತು ಭಾರತದ ಸುಪ್ರೀಂ ಕೋರ್ಟ್ನ ಹಿರಿಯ ವಕೀಲರಾಗಿ ವೃತ್ತಿ ನಿರ್ವಹಿಸಿದರು. ಕಾನೂನು ವೃತ್ತಿಯಲ್ಲಿ ತಮ್ಮ ರೀತಿಯಲ್ಲಿ ಛಾಪು ಮೂಡಿಸಿದರು. ಕಾನೂನು ಪದವಿ ಪಡೆದ ನಂತರ ಕಾನೂನು ಕ್ಷೇತ್ರದಲ್ಲಿ ಅವರ ಪ್ರಯಾಣ ಪ್ರಾರಂಭವಾಯಿತು. ವಿಶೇಷವಾಗಿ ಸಾಂವಿಧಾನಿಕ ಕಾನೂನು ಮತ್ತು ಅಂತರರಾಷ್ಟ್ರೀಯ ಅವರ ಪರಿಣತಿಗಾಗಿ ಸಾಕಷ್ಟು ಗೌರವಗಳು ಅವರನ್ನು ಹುಡುಕಿ ಬಂದವು.
ಮೃತರು ಭಾರತದ ಸುಪ್ರೀಂ ಕೋರ್ಟ್ನಿಂದ 1971 ರಲ್ಲಿ ಹಿರಿಯ ವಕೀಲರಾಗಿ ನೇಮಕಗೊಂಡರು. ಇಲ್ಲಿಂದ ಅವರ ವೃತ್ತಿಜೀವನವು ಗಮನಾರ್ಹ ಪ್ರಗತಿಯತ್ತ ವಾಲಿತು. ಬಿಫೋರ್ ಮೆಮೊರಿ ಫೇಡ್ಸ್ ಎಂಬುದು ಫಾಲಿ ಎಸ್ ನಾರಿಮನ್ ಅವರ ಆತ್ಮಚರಿತ್ರೆ ಆಗಿದೆ.

ಫಾಲಿ ಎಸ್ ನಾರಿಮನ್ ಅವರ ಪುತ್ರ ರೋಹಿಂಟನ್ ನಾರಿಮನ್ ಅವರು ಭಾರತದ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿಯೂ ಸೇವೆ ಸಲ್ಲಿಸಿದವರು. ಅವರು 1972-1975ರಲ್ಲಿ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿದ್ದರು. ತುರ್ತು ಪರಿಸ್ಥಿತಿಯನ್ನು ಘೋಷಿಸಿದ ನಂತರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಹೊರ ನಡೆದರು.
ಸಮರ್ಥ ನ್ಯಾಯವಾದಿ ಕಳೆದುಕೊಂಡಿದ್ದೇವೆ: ಬೊಮ್ಮಾಯಿ
ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯವಾದಿ ಫಾಲಿ ಎಸ್. ನಾರಿಮನ್ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ನೋವಾಯಿತು.
ಸುಮಾರು 70 ವರ್ಷಗಳ ಕಾಲ ನ್ಯಾಯವಾದಿಯಾಗಿ ಸೇವೆ ಸಲ್ಲಿಸಿರುವ ಅವರು ದೇಶದ ಪ್ರಮುಖ ವಕೀಲರಲ್ಲಿ ಇವರು ಒಬ್ಬರು.
ಕರ್ನಾಟಕದ ನೀರಾವರಿ ಯೋಜನೆ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ಪರ ವಾದ ಮಾಡಿ, ರಾಜ್ಯಕ್ಕೆ ನ್ಯಾಯ ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇಂತಹ ಒಬ್ಬ ಸಮರ್ಥ ನ್ಯಾಯವಾದಿಯನ್ನು ಕಳೆದುಕೊಂಡಂತಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಬಸವರಾಜ ಬೊಮ್ಮಾಯಿ ಪ್ರಾರ್ಥಿಸಿದರು.
ವೃತ್ತಿ ಮೌಲ್ಯಗಳನ್ನು ಪ್ರತಿನಿಧಿಸುತ್ತಿದ್ದರು: ಪಾಟೀಲ್
ನಾರಿಮನ್ ಅವರು ಈ ದೇಶ ಕಂಡ ಅಪ್ರತಿಮ ನ್ಯಾಯವಾದಿಗಳಲ್ಲಿ ಒಬ್ಬರು. ವೃತ್ತಿಯಲ್ಲಿ ಮೌಲ್ಯಗಳನ್ನು ಪ್ರತಿನಿಧಿಸುತ್ತಿದ್ದ ಅವರು, ಉದಾರ ಮಾನವತಾವಾದಿ. ಇದೆಲ್ಲವು ನನಗೆ ಜಲ ಸಂಪನ್ಮೂಲ ಸಚಿವನಾಗಿದ್ದಾಗ ಅವರೊಂದಿಗೆ ಕಾವೇರಿ ನೀರಿನ ಹಕ್ಕಿನ ವಿಚಾರವಾಗಿ ಮಾತನಾಡುವಾಗ ಅನುಭವಕ್ಕೆ ಬಂದಿದೆ ಎಂದು ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಸ್ಮರಿಸಿದರು.
ಕಾವೇರಿ ಜಲ ವಿವಾದ ಭುಗಿಲೆದ್ದಾಗ ನಾರಿಮನ್ ಅವರು ಕರ್ನಾಟಕದ ಹಕ್ಕನ್ನು ಸಮರ್ಥವಾಗಿ ಮಂಡಿಸಿದರು. ಅವರ ವಾದದಿಂದಾಗಿ ರಾಜ್ಯಕ್ಕೆ ಹೆಚ್ಚು ನೀರು ಸಿಕ್ಕಿತು. ನಮ್ಮ ಅಹವಾಲುಗಳನ್ನು ನಾರಿಮನ್ ಅವರು ಸದಾ ಸಹಾನುಭೂತಿಯಿಂದ ಆಲಿಸುತ್ತಿದ್ದರು ಎಂದು ಹೇಳಿದರು.
ನಾರಿಮನ್ ಅವರೊಂದಿಗೆ ನನಗೆ ವೈಯಕ್ತಿಕವಾಗಿ ಗಾಢ ಸಂಬಂಧವಿತ್ತು. ಎಷ್ಟೋ ಸಂದರ್ಭಗಳಲ್ಲಿ ಅವರು ನಮ್ಮನ್ನೆಲ್ಲ ಉದ್ದೇಶಿಸಿ, ಸಚಿವರಾದವರು ಯಾವುದೇ ವಿಚಾರದ ಬಗ್ಗೆ ಸೂಕ್ತ ತಿಳಿವಳಿಕೆ ಹೊಂದಿರಬೇಕು ಎಂದು ಹೇಳುತ್ತಿದ್ದರು. ಅವರ ಇಂತಹ ಮಾತುಗಳು ನಮ್ಮ ಆತ್ಮಸಾಕ್ಷಿಯನ್ನು ಜಾಗೃತಗೊಳಿಸುತ್ತಿದ್ದವು ಎಂದು ಅವರು ನೆನಪಿಸಿಕೊಂಡಿದ್ದಾರೆ.
ಭಗವಂತನು ನಾರಿಮನ್ ಅವರ ಆತ್ಮಕ್ಕೆ ಶಾಂತಿ ನೀಡಲ. ಅವರ ಕುಟುಂಬದ ಸದಸ್ಯರಿಗೆ ಈ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕರುಣಿಸಲಿ ಎಂದು ಸಚಿವರು ಪ್ರಾರ್ಥಿಸಿದ್ದಾರೆ. ಇವರು ಸೇರಿದಂತೆ ಅನೇಕ ಗಣ್ಯರು ನಾರಿಮನ್ ಅವರ ಜತೆಗಿನ ಸಂಬಂಧ ಸ್ಮರಿಸಿದ್ದಾರೆ.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್












Click it and Unblock the Notifications