Get Updates
Get notified of breaking news, exclusive insights, and must-see stories!

Greater Bengaluru Election: ಜೂನ್‌ 30ರೊಳಗೆ ಜಿಬಿಎ ಚುನಾವಣೆ ಮುಗಿಸಿ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಖಡಕ್ ಸೂಚನೆ

ಬೆಂಗಳೂರು: ಬಿಬಿಎಂಪಿಯನ್ನು ಜಿಬಿಎ ಆಗಿ ಮಾರ್ಪಡಿಸಿ, ಸುತ್ತಮುತ್ತಲ ಹಳ್ಳಿಗಳನ್ನು ಸೇರಿಸಿ 369 ವಾರ್ಡ್‌ಗಳನ್ನು ರಚಿಸಲಾಗಿದೆ. ಹಿಂದೆ ವಾರ್ಡ್ ಮರುವಿಂಗಡಣೆ ಮತ್ತು ತಾಂತ್ರಿಕ ಕಾರಣಗಳಿಂದ ಚುನಾವಣೆ ನೆನೆಗುದಿಯಲ್ಲಿತ್ತು, ಇದೀಗ ಕರ್ನಾಟಕ ಸರ್ಕಾರಕ್ಕೆ ಸುಪ್ರಿಂ ಕೋರ್ಟ್‌ ಒತ್ತಡ ಹೇರಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ'ದ ಅಡಿಯಲ್ಲಿ ಬರುವ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಜೂನ್ 30ರೊಳಗೆ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಕಟ್ಟುನಿಟ್ಟಿನ ಗಡುವು ನೀಡಿದೆ.

ಗ್ರೇಟರ್‌ ಬೆಂಗಳೂರು ಚುನಾವಣೆ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು, ಇದೀಗ ಸುಪ್ರೀಂ ಕೋರ್ಟ್ ಚುನಾವಣೆಗೆ ‌ ಆದೇಶ ನೀಡುವ ಮೂಲಕ ಚಾಲನೆ ನೀಡಿದೆ. ಜೂನ್ 30, 2026 ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆ ಪೂರ್ಣಗೊಳಿಸಲು ಕರ್ನಾಟಕ ಸರ್ಕಾರಕ್ಕೆ ಕಟ್ಟುನಿಟ್ಟು ಆದೇಶ ನೀಡಿದೆ. ಈ ಆದೇಶವು ಬೆಂಗಳೂರಿನ ಐದು ನಗರ ಪಾಲಿಕೆಗಳ (ದಕ್ಷಿಣ, ಉತ್ತರ, ಪೂರ್ವ, ಪಶ್ಚಿಮ, ಮಧ್ಯ) 369 ವಾರ್ಡ್‌ಗಳ ಚುನಾವಣೆ ಸಂಬಂಧಿಸಿದ್ದು, ಯಾವುದೇ ವಿಳಂಬಕ್ಕೆ ಅವಕಾಶ ಇಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

Supreme Court sets June 30 2026 deadline for Greater Bengaluru Authority elections

ಭಾರತದ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು ಈ ಆದೇಶವನ್ನು ಅಂಗೀಕರಿಸಿತು, ಇದು ಈ ವಿಷಯವನ್ನು ದೀರ್ಘಕಾಲದವರೆಗೆ ಬಾಕಿ ಉಳಿದಿದೆ ಎಂದು ವಿವರಿಸಿತು ಮತ್ತು ಬೆಂಗಳೂರಿನಲ್ಲಿ ಚುನಾಯಿತ ನಾಗರಿಕ ಆಡಳಿತದ ಅಗತ್ಯವನ್ನು ಒತ್ತಿಹೇಳಿತು. ಫೆಬ್ರವರಿ 20 ರೊಳಗೆ ಅಂತಿಮ ವಾರ್ಡ್ವಾರು ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲು ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿತು, ಇದು ಚುನಾವಣಾ ಪ್ರಕ್ರಿಯೆಯ ಉಳಿದ ಹಂತಗಳಿಗೆ ವೇಗವನ್ನು ನಿಗದಿಪಡಿಸಿತು.

ನೂತನವಾಗಿ ರಚನೆಯಾಗಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬರುವ ಐದು ನಗರ ಪಾಲಿಕೆಗಳ ಚುನಾವಣಾ ಪ್ರಕ್ರಿಯೆಯನ್ನು ಜೂನ್ 30ರೊಳಗೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್‌ನ ಸಿಜೆಐ ಪೀಠವು ರಾಜ್ಯ ಸರ್ಕಾರಕ್ಕೆ ಮತ್ತು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು ಈ ಆದೇಶವನ್ನು ಅಂಗೀಕರಿಸಿತು, ಈ ವಿಷಯವು ಬಹಳ ಕಾಲದಿಂದ ಬಾಕಿ ಇದೆ ಎಂದು ವಿವರಿಸಿತು ಮತ್ತು ಬೆಂಗಳೂರಿನಲ್ಲಿ ಚುನಾಯಿತ ನಾಗರಿಕ ಆಡಳಿತದ ಅಗತ್ಯವನ್ನು ಒತ್ತಿ ಹೇಳಿತು.

ಇನ್ನೂ ಸರ್ಕಾರದ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಮತ್ತು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು, ವಾರ್ಡ್‌ಗಳ ಮೀಸಲಾತಿ ಪ್ರಕ್ರಿಯೆಯು ಪ್ರಸ್ತುತ ಅಂತಿಮ ಹಂತದಲ್ಲಿದೆ ಎಂದು ಕೋರ್ಟ್‌ಗೆ ತಿಳಿಸಿದರು. ಚುನಾವಣಾ ಪ್ರಕ್ರಿಯೆಯ ಉಳಿದ ಹಂತಗಳಿಗೆ ವೇಗವನ್ನು ನಿಗದಿಪಡಿಸುವ ಮೂಲಕ ಫೆಬ್ರವರಿ 20 ರೊಳಗೆ ಅಂತಿಮ ವಾರ್ಡ್‌ವಾರು ಮೀಸಲಾತಿ ಪಟ್ಟಿಯನ್ನು ಪ್ರಕಟಿಸುವಂತೆ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿತು.

ರಾಜ್ಯ ಚುನಾವಣಾ ಆಯೋಗವು ಮಾರ್ಚ್ 16ರವರೆಗೆ ಮತದಾರರ ಪಟ್ಟಿಯ ಪರಿಶೀಲನೆ ನಡೆಯಲಿದೆ ಎಂದು ತಿಳಿಸಿದೆ. ಇದಾದ ಬಳಿಕ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿರುವುದರಿಂದ ಸಿಬ್ಬಂದಿ ಕೊರತೆ ಎದುರಾಗಬಹುದು. ಹೀಗಾಗಿ ಚುನಾವಣೆ ನಡೆಸಲು ಮೇ ಕೊನೆಯ ವಾರದವರೆಗೂ ಸಮಯಾವಕಾಶ ಬೇಕು ಎಂದು ಮನವಿ ಮಾಡಿತು. ಸಂಪೂರ್ಣ ಪ್ರಕ್ರಿಯೆ ಮುಗಿಸಲು ಜೂನ್ ವರೆಗೂ ಸಮಯ ಬೇಕಾಗಬಹುದು ಎಂದು ಆಯೋಗವು ಸುಪ್ರೀಂ ಕೋರ್ಟ್‌ಗೆ ವಿವರಿಸಿದೆ.

ಇನ್ನೂ ಎಲ್ಲಾ ವಾದಗಳನ್ನು ಆಲಿಸಿದ ಸುಪ್ರೀಂ ಕೋರ್ಟ್, ಜೂನ್ 30ರ ಒಳಗೆ ಯಾವುದೇ ಕಾರಣಕ್ಕೂ ವಿಳಂಬ ಮಾಡದೆ ಚುನಾವಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಗಡುವು ನೀಡಿದೆ. ಮತ್ತೆ ಸಮಯ ಕೇಳಿಕೊಂಡು ಬರಬೇಡಿ ಎಂದು ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಾದ ಎಚ್ಚರಿಕೆಯನ್ನು ನೀಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+