ಸುರಪುರ ಕ್ಷೇತ್ರದ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಘೋಷಣೆ: ರಾಜುಗೌಡ ಸ್ಪರ್ಧೆ!
ಬೆಂಗಳೂರು, ಮಾರ್ಚ್ 26: ಕಾಂಗ್ರೆಸ್ ಶಾಸಕ ರಾಜ ವೆಂಕಟಪ್ಪ ನಾಯಕ ನಿಧನದ ನಂತರ ತೆರುವಾಗಿದ್ದ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ದಿನಾಂಕವನ್ನ ಚುನಾವಣಾ ಆಯೋಗ ಘೋಷಿಸಿದೆ. ಸುರಪುರ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದ್ದು, ರಾಜುಗೌಡ ಅವರಿಗೆ ಮತ್ತೆ ಮಣೆ ಹಾಕಿದೆ.
ಕಳೆದ ವಿಧಾನಸಭೆಯಲ್ಲಿ ಸೋತಿದ್ದ ರಾಜುಗೌಡ ಅವರಿಗೆ ಮತ್ತೆ ಮಣೆ ಹಾಕಿದೆ. ಇನ್ನು ಕಾಂಗ್ರೆಸ್ ದಿವಂಗತ ಶಾಸಕ ರಾಜ ವೆಂಕಟಪ್ಪ ನಾಯಕ ಪುತ್ರ ರಾಜಾ ವೇಣುಗೋಪಾಲ ನಾಯಕ ಅವರಿಗೆ ಈಗಾಗಲೆ ಟಿಕೆಟ್ ನೀಡಿದೆ. ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೇ 7ರಂದು ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪನಾಯಕ ಅವರು ನಿಧನರಾದ್ದರಿಂದ ಸುರಪುರ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದೆ. ಕರ್ನಾಟಕದಲ್ಲಿ ಏಪ್ರಿಲ್ 26 ಮೊದಲ ಹಂತದ ಮತದಾನ ಹಾಗೂ ಮೇ 7ರಂದು ಎರಡನೇ ಹಂತದ ಮತದಾನ ಲೋಕಸಭೆ ಚುನಾವಣೆ ನಡೆಯಲಿದ್ದು , ಮೇ 7 ರಿಂದ ಕರ್ನಾಟಕದ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದೆ.












Click it and Unblock the Notifications