ರೈತ ಬೆಳೆ ಸಮೀಕ್ಷೆ ಆ್ಯಪ್ ಕಂಡು ಸಂತಸಪಟ್ಟಿದ್ದ ಸುರೇಶ್ ಅಂಗಡಿ
ಬೆಂಗಳೂರು, ಸೆ. 24: ರೈತ ಬೆಳೆ ಸಮೀಕ್ಷೆ ಆ್ಯಪ್ ಕಂಡು ಸಂತಸಪಟ್ಟಿದ್ದ ಸುರೇಶ್ ಅಂಗಡಿ ಅದನ್ನು ಇತರೆ ರಾಜ್ಯಗಳಿಗೂ ಮಾದರಿಯಾಗಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ನೆನಪಿಸಿಕೊಂಡರು.
ವಿಧಾನಸಭೆಯಲ್ಲಿ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದ ಮೇಲಿನ ಸಂತಾಪ ಸೂಚನೆ ಕಲಾಪದಲ್ಲಿ ಪಾಲ್ಗೊಂಡು ಮಾತನಾಡಿದರು. ಕರ್ನಾಟಕದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ ದುಡಿಯುತ್ತಿದ್ದ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ನಿಧನ ವೈಯಕ್ತಿಕವಾಗಿಯೂ ಹಾಗೂ ರಾಜ್ಯಕ್ಕೂ ತಮಗೂ ಅನಿರೀಕ್ಷಿತದ ಜೊತೆಗೆ ಆಘಾತವನ್ನುಂಟು ಮಾಡಿದೆ ಎಂದರು.
ಕಳೆದ ತಿಂಗಳು 22ರಂದು ದೆಹಲಿಗೆ ತಾವು ಭೇಟಿ ನೀಡಿದ್ದಾಗ ಸುರೇಶ್ ಅಂಗಡಿ ತಮ್ಮನ್ನು ಉಪಹಾರಕ್ಕೆ ಅವರ ನಿವಾಸಕ್ಕೆ ಆಹ್ವಾನಿಸಿ ತಮ್ಮ ಸರಳ ಸಜ್ಜನಿಕೆ ಮೆರೆದಿದ್ದರು. ಅಷ್ಟೇ ಅಲ್ಲದೇ ಅವರೊಂದಿಗೆ ಚರ್ಚೆ ವೇಳೆಯನ್ನು ರೈತ ಬೆಳೆ ಸಮೀಕ್ಷೆ ಆಪ್ ಅನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿ ತಂತ್ರಜ್ಞಾನದ ಮೂಲಕ ರೈತರ ಬೆಳೆ ಸಮೀಕ್ಷೆ ವಿಡಿಯೋವನ್ನು ತಮ್ಮ ಪೆನ್ಡ್ರೈವ್ನಲ್ಲಿ ಹಾಕಿಕೊಂಡು ಎಲ್ಲಾ ರಾಜ್ಯಗಳಿಗೂ ಇದು ಸ್ಫೂರ್ತಿಯಾಗಬೇಕು ಎಂದು ಸಂತಸ ವ್ಯಕ್ತಪಡಿಸಿದ್ದಾಗಿ ಹೇಳಿದರು.

ಹುಬ್ಬಳ್ಳಿ-ಅಂಕೋಲಾ ರೈಲು ಸಂಪರ್ಕ ಹಾಗೂ ರಾಣೆಬೆನ್ನೂರು ಬೈಂದೂರು ರೈಲು ಬ್ಯಾಡಗಿ ರಸ್ತೆ ಸಂಪರ್ಕ ಸಂಬಂಧ ತಮ್ಮೊಂದಿಗೆ ಚರ್ಚೆಯನ್ನು ಮಾಡಿದ್ದರು. ರಾಜ್ಯದ ಕೆಲಸ ಎಂದರೆ ಬಹಳ ಆಸಕ್ತಿ ಮತ್ತು ಶ್ರದ್ಧೆಯಿಂದ ಮಾಡುತ್ತಿದ್ದರು. ಇತ್ತೀಚೆಗೆ ಕಿಸಾನ್ ರೈಲನ್ನು ಇಡೀ ದೇಶಕ್ಕೆ ಪರಿಚಯಿಸಿ ರೈತರಿಗೆ ಅನುಕೂಲ ಕಲ್ಪಿಸಿಕೊಟ್ಟರು ಎಂದು ಬಿ.ಸಿ. ಪಾಟೀಲ್ ಹೇಳಿದರು.
ಕೊರೊನಾ ಸೋಂಕು ಎಲ್ಲರಲ್ಲೂ ಆತಂಕವನ್ನುಂಟು ಮಾಡಿದೆ. ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಬಗ್ಗೆ ನಿರ್ಲಕ್ಷ್ಯಭಾವ ಎದ್ದುಕಾಣುತ್ತಿದ್ದೆ.ಈ ನಿಟ್ಟಿನಲ್ಲಿ ಜನ ಜಾಗೃತಿ, ಸಾಮಾಜಿಕ ಅಂತರ ಹೆಚ್ಚಾಗಬೇಕು ಎಂದರು. ಸುರೇಶ್ ಅಂಗಡಿ ಅವರ ಅಂತ್ಯಸಂಸ್ಕಾರಕ್ಕೂ ಹೋಗದ ದುಃಸ್ಥಿತಿಯನ್ನು ಕೊರೊನಾ ತಂದಿಟ್ಟಿದೆ. ಮೊದಲು ಬಂಧುಗಳಾಗಲೀ ಸ್ನೇಹಿತರಾಗಲೀ ಯಾರೇ ಆಗಲೀ ಆಸ್ಪತ್ರೆಗೆ ದಾಖಲಾಗಿದ್ದ ಸುದ್ದಿತಿಳಿಯುತ್ತಿದ್ದಂತೆಯೇ ಅವರ ಯೋಗಕ್ಷೇಮ ವಿಚಾರಿಸಲು ಆಸ್ಪತ್ರೆಗೆ ಮನೆಗೆ ತೆರಳುತ್ತಿದ್ದೆವು. ಇದು ನಮ್ಮ ಸಂಸ್ಕೃತಿ ಕೂಡ. ಆದರೆ ಕೊರೊನಾ ಇದೆಲ್ಲವನ್ನು ತಲೆಕೆಳಗೆ ಮಾಡಿಹಾಕಿದೆ. ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಹೋಗುವುದಾಗಲೀ ಅವರ ಬಂಧುಗಳನ್ನು ಭೇಟಿ ಮಾಡಲಾಗಲೀ ಸಾಧ್ಯವಾಗುತ್ತಿಲ್ಲ ಎಂದು ಬಿ.ಸಿ. ಪಾಟೀಲ್ ಬೇಸರ ವ್ಯಕ್ತಪಡಿಸಿದರು.
Recommended Video
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications