ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈತ ಬೆಳೆ ಸಮೀಕ್ಷೆ ಆ್ಯಪ್ ಕಂಡು ಸಂತಸಪಟ್ಟಿದ್ದ ಸುರೇಶ್ ಅಂಗಡಿ

|
Google Oneindia Kannada News

ಬೆಂಗಳೂರು, ಸೆ. 24: ರೈತ ಬೆಳೆ ಸಮೀಕ್ಷೆ ಆ್ಯಪ್ ಕಂಡು ಸಂತಸಪಟ್ಟಿದ್ದ ಸುರೇಶ್ ಅಂಗಡಿ ಅದನ್ನು ಇತರೆ ರಾಜ್ಯಗಳಿಗೂ ಮಾದರಿಯಾಗಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ನೆನಪಿಸಿಕೊಂಡರು.

ವಿಧಾನಸಭೆಯಲ್ಲಿ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದ ಮೇಲಿನ ಸಂತಾಪ ಸೂಚನೆ ಕಲಾಪದಲ್ಲಿ ಪಾಲ್ಗೊಂಡು ಮಾತನಾಡಿದರು. ಕರ್ನಾಟಕದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ ದುಡಿಯುತ್ತಿದ್ದ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ನಿಧನ ವೈಯಕ್ತಿಕವಾಗಿಯೂ ಹಾಗೂ ರಾಜ್ಯಕ್ಕೂ ತಮಗೂ ಅನಿರೀಕ್ಷಿತದ ಜೊತೆಗೆ ಆಘಾತವನ್ನುಂಟು ಮಾಡಿದೆ ಎಂದರು.

ವಿಧಾನಸಭೆ ಕಲಾಪ; ಸುರೇಶ್ ಅಂಗಡಿ ನಿಧನಕ್ಕೆ ಸಂತಾಪವಿಧಾನಸಭೆ ಕಲಾಪ; ಸುರೇಶ್ ಅಂಗಡಿ ನಿಧನಕ್ಕೆ ಸಂತಾಪ

ಕಳೆದ ತಿಂಗಳು 22ರಂದು ದೆಹಲಿಗೆ ತಾವು ಭೇಟಿ ನೀಡಿದ್ದಾಗ ಸುರೇಶ್ ಅಂಗಡಿ ತಮ್ಮನ್ನು ಉಪಹಾರಕ್ಕೆ ಅವರ ನಿವಾಸಕ್ಕೆ ಆಹ್ವಾನಿಸಿ ತಮ್ಮ ಸರಳ ಸಜ್ಜನಿಕೆ ಮೆರೆದಿದ್ದರು. ಅಷ್ಟೇ ಅಲ್ಲದೇ ಅವರೊಂದಿಗೆ ಚರ್ಚೆ ವೇಳೆಯನ್ನು ರೈತ ಬೆಳೆ ಸಮೀಕ್ಷೆ ಆಪ್ ಅನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿ ತಂತ್ರಜ್ಞಾನದ ಮೂಲಕ ರೈತರ ಬೆಳೆ ಸಮೀಕ್ಷೆ ವಿಡಿಯೋವನ್ನು ತಮ್ಮ ಪೆನ್‌ಡ್ರೈವ್‌ನಲ್ಲಿ ಹಾಕಿಕೊಂಡು ಎಲ್ಲಾ ರಾಜ್ಯಗಳಿಗೂ ಇದು ಸ್ಫೂರ್ತಿಯಾಗಬೇಕು ಎಂದು ಸಂತಸ ವ್ಯಕ್ತಪಡಿಸಿದ್ದಾಗಿ ಹೇಳಿದರು.

Suresh Angadi pleased with farmers crop survey app BC Patil recalled in assembly session

ಹುಬ್ಬಳ್ಳಿ-ಅಂಕೋಲಾ ರೈಲು ಸಂಪರ್ಕ ಹಾಗೂ ರಾಣೆಬೆನ್ನೂರು ಬೈಂದೂರು ರೈಲು ಬ್ಯಾಡಗಿ ರಸ್ತೆ ಸಂಪರ್ಕ ಸಂಬಂಧ ತಮ್ಮೊಂದಿಗೆ ಚರ್ಚೆಯನ್ನು ಮಾಡಿದ್ದರು. ರಾಜ್ಯದ ಕೆಲಸ ಎಂದರೆ ಬಹಳ ಆಸಕ್ತಿ ಮತ್ತು ಶ್ರದ್ಧೆಯಿಂದ ಮಾಡುತ್ತಿದ್ದರು. ಇತ್ತೀಚೆಗೆ ಕಿಸಾನ್ ರೈಲನ್ನು ಇಡೀ ದೇಶಕ್ಕೆ ಪರಿಚಯಿಸಿ ರೈತರಿಗೆ ಅನುಕೂಲ ಕಲ್ಪಿಸಿಕೊಟ್ಟರು ಎಂದು ಬಿ.ಸಿ. ಪಾಟೀಲ್ ಹೇಳಿದರು.

Recommended Video

ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಕೊಡ್ಲಿ | Oneindia Kannada

ಕೊರೊನಾ ಸೋಂಕು ಎಲ್ಲರಲ್ಲೂ ಆತಂಕವನ್ನುಂಟು ಮಾಡಿದೆ. ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಬಗ್ಗೆ ನಿರ್ಲಕ್ಷ್ಯಭಾವ ಎದ್ದುಕಾಣುತ್ತಿದ್ದೆ.ಈ ನಿಟ್ಟಿನಲ್ಲಿ ಜನ ಜಾಗೃತಿ, ಸಾಮಾಜಿಕ ಅಂತರ ಹೆಚ್ಚಾಗಬೇಕು ಎಂದರು. ಸುರೇಶ್ ಅಂಗಡಿ ಅವರ ಅಂತ್ಯಸಂಸ್ಕಾರಕ್ಕೂ ಹೋಗದ ದುಃಸ್ಥಿತಿಯನ್ನು ಕೊರೊನಾ ತಂದಿಟ್ಟಿದೆ. ಮೊದಲು ಬಂಧುಗಳಾಗಲೀ ಸ್ನೇಹಿತರಾಗಲೀ ಯಾರೇ ಆಗಲೀ ಆಸ್ಪತ್ರೆಗೆ ದಾಖಲಾಗಿದ್ದ ಸುದ್ದಿತಿಳಿಯುತ್ತಿದ್ದಂತೆಯೇ ಅವರ ಯೋಗಕ್ಷೇಮ ವಿಚಾರಿಸಲು ಆಸ್ಪತ್ರೆಗೆ ಮನೆಗೆ ತೆರಳುತ್ತಿದ್ದೆವು. ಇದು ನಮ್ಮ ಸಂಸ್ಕೃತಿ ಕೂಡ. ಆದರೆ ಕೊರೊನಾ ಇದೆಲ್ಲವನ್ನು ತಲೆಕೆಳಗೆ ಮಾಡಿಹಾಕಿದೆ. ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಹೋಗುವುದಾಗಲೀ ಅವರ ಬಂಧುಗಳನ್ನು ಭೇಟಿ ಮಾಡಲಾಗಲೀ ಸಾಧ್ಯವಾಗುತ್ತಿಲ್ಲ ಎಂದು ಬಿ.ಸಿ. ಪಾಟೀಲ್ ಬೇಸರ ವ್ಯಕ್ತಪಡಿಸಿದರು.

English summary
Union minister Suresh Angadi was pleased with the farmers crop survey app. And expressed his opinion that it should be a model for other states, Agriculture Minister BC Patil recalled in assembly session.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X