ಮೌಲ್ಯಮಾಪನ ಪ್ರಕ್ರಿಯೆ; ಖಡಕ್ ಎಚ್ಚರಿಕೆ ಕೊಟ್ಟ ಶಿಕ್ಷಣ ಸಚಿವ ಸುರೇಶ್ ಕುಮಾರ್!
ಬೆಂಗಳೂರು, ಜ. 25: ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುವ ಶಿಕ್ಷಣ ಇಲಾಖೆ ಸಿಬ್ಬಂದಿ ಮೇಲೆ ಕಠಿಣಕ್ರಮ ಕೈಗೊಳ್ಳಲು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮುಂದಾಗಿದ್ದಾರೆ. ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ನಿರ್ಲಕ್ಷ ತೋರುವ ಇಲಾಖೆ ಸಿಬ್ಬಂದಿ ಮೇಲೆ ಇದೇ ಮೊದಲ ಬಾರಿ ಕಠಿಣ ಕ್ರಮಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ. ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಕಠಿಣ ಆದೇಶವನ್ನು ಹೊರಡಿಸಿದ್ದಾರೆ.
ಹೊಸನಗರ ತಾಲೂಕಿನ ಹನಿಯಾ ಗ್ರಾಮದ ದ್ವಿತೀಯ ಪಿಯು ವಿದ್ಯಾರ್ಥಿನಿಯೊಬ್ಬರ ಉತ್ತರ ಪತ್ರಿಕೆ ಮರು ಎಣಿಕೆಯಲ್ಲಿ ಕಡಿಮೆ ಅಂಕ ನೀಡಲಾಗಿತ್ತು. ಇಡೀ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ತಕ್ಷಣವೇ ವರದಿ ಸಲ್ಲಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
ತನಗೆ ಬರಬೇಕಾಗಿದ್ದ ಅಂಕಗಳನ್ನು ಪಡೆಯಲು ಆ ವಿದ್ಯಾರ್ಥಿನಿ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಮರುಎಣಿಕೆ ಸಂದರ್ಭದಲ್ಲಿ ವಿದ್ಯಾರ್ಥಿನಿಗೆ ಮತ್ತೆ ಕಡಿಮೆ ಅಂಕಗಳು ಬಂದಿದ್ದವು. ಹೀಗಾಗಿ ಆ ವಿದ್ಯಾರ್ಥಿನಿ ಹೈಕೋರ್ಟ್ ಮೊರೆ ಹೊಗಿದ್ದರು. ಇದೀಗ ಆ ವಿದ್ಯಾರ್ಥಿನಿಗೆ ನೂರಕ್ಕೆ ನೂರು ಅಂಕಗಳು ಬಂದಿದ್ದು, ಶಿಕ್ಷಣ ಇಲಾಖೆಯ ಸಿಬ್ಬಂದಿ ಕಾರ್ಯವೈಖರಿಗೆ ಸಚಿವ ಸುರೇಶ್ ಕುಮಾರ್ ಅವರು ಗರಂ ಆಗಿದ್ದಾರೆ.

ಮರುಎಣಿಕೆಯಲ್ಲಿ ಕಡಿಮೆ ಅಂಕಗಳು
ಪಿಯು ಪರೀಕ್ಷೆಯಲ್ಲಿ ಒಂದು ವಿಷಯದಲ್ಲಿ 99 ಅಂಕ ಬಂದಾಗ ತನಗೆ 100 ಅಂಕ ಬರಬೇಕಿತ್ತೆಂಬ ಉತ್ತರಪತ್ರಿಕೆಯ ಫೊಟೊ ಕಾಪಿ ತರಿಸಿ ಪರಿಶೀಲನೆ ಮಾಡಿದ್ದ ವಿದ್ಯಾರ್ಥಿನಿಗೆ ಅಘಾತ ಕಾದಿತ್ತು. ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸವಾಗಿ ತನಗೆ ಒಂದು ಅಂಕ ಕಡಿಮೆ ಬಂದಿದೆ ಎಂದು ವಿದ್ಯಾರ್ಥಿನಿ ಮರುಎಣಿಕೆಗೆ ಹಾಕಿದ್ದರು. ಆದರೆ ಮರುಎಣಿಕೆಗೆ ಅರ್ಜಿ ಸಲ್ಲಿಸಿದಾಗ 99 ಅಂಕಗಳು ಹೀಗಿ ಕೇವಲ 88 ಅಂಕಗಳನ್ನು ಕೊಡಲಾಗಿತ್ತು. ಅದು ವಿದ್ಯಾರ್ಥಿನಿ ಹಾಗೂ ಆಕೆಯ ಪಾಲಕರ ಆತಂಕಕ್ಕೆ ಕಾರಣವಾಗಿತ್ತು.

ಹೈಕೋರ್ಟ್ ಮೊರೆ ಹೋಗಿದ್ದ ವಿದ್ಯಾರ್ಥಿನಿ
ಈ ಕುರಿತು ವಿದ್ಯಾರ್ಥಿನಿ ರಾಜ್ಯ ಹೈಕೋರ್ಟ್ ಮೊರೆ ಹೋದಾಗ ಹೈಕೋರ್ಟ್ ಮರುಎಣಿಕೆಗೆ ಆದೇಶಿಸಿತ್ತು. ಆ ನಂತರ ವಿದ್ಯಾರ್ಥಿನಿಗೆ 100 ಅಂಕಗಳು ಬಂದಿದ್ದವು. ಈ ಕುರಿತು ಮರು ಎಣಿಕೆಯಲ್ಲಿ ಲೋಪ ಎಸಗಿದ ಅಧಿಕಾರಿ, ಉಪನ್ಯಾಸಕರು ಮತ್ತು ಸಂಬಂಧಿಸಿದ ಸಿಬ್ಬಂದಿಯ ವಿರುದ್ಧ ಅಗತ್ಯ ಕ್ರಮಕೈಗೊಳ್ಳಲು ಸಂಬಂಧಿಸಿದವರ ವಿವರಗಳೊಂದಿಗೆ ಎರಡು ದಿನಗಳೊಳಗೆ ವರದಿ ಸಲ್ಲಿಸಬೇಕೆಂದು ಸಚಿವರು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಮತ್ತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸಚಿವ ಸುರೇಶ್ ಕುಮಾರ್ ಅವರು ಸೂಚಿಸಿದ್ದಾರೆ.

ನ್ಯಾಯ ದೊರೆತದ್ದು ಸಂತಸ, ಆದರೆ..
ವಿದ್ಯಾರ್ಥಿನಿಗೆ ಕೊನೆಗಾದರೂ ನ್ಯಾಯ ದೊರೆತದ್ದು ಸಂತಸ ಸಂಗತಿಯಾಗಿದ್ದರೂ ಸಹ ಇಲಾಖೆ ಅಧಿಕಾರಿಗಳ ಕರ್ತವ್ಯ ಚ್ಯುತಿಯಿಂದ ಒಬ್ಬ ಪ್ರತಿಭಾವಂತ ವಿದ್ಯಾರ್ಥಿನಿಯ ಆತ್ಮವಿಶ್ವಾಸಕ್ಕೆ ಧಕ್ಕೆಯಾಗುವಂತಾಗಿದ್ದು, ವ್ಯವಸ್ಥೆ ಕುರಿತು ಭರವಸೆ ಕಳೆದುಕೊಳ್ಳುವಂತಾಗಿದೆ. ಪ್ರತಿಭಾವಂತ ವಿದ್ಯಾರ್ಥಿನಿಯ ನೆರವಿಗೆ ಬರಬೇಕಾದ ಇಲಾಖೆ ಆಕೆಯ ಆತ್ಮ ವಿಶ್ವಾಸ ಕಸಿಯುವ ಕೆಲಸ ಮಾಡಿದ್ದು, ಇದಕ್ಕೆ ಕಾರಣರಾದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದ್ದು, ತಕ್ಷಣವೇ ಈ ಕುರಿತು ವರದಿ ಸಲ್ಲಿಸಬೇಕೆಂದು ಸಚಿವರು ಟಿಪ್ಪಣಿಯಲ್ಲಿ ಪಿಯು ನಿರ್ದೇಶಕರಿಗೆ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.
Recommended Video

ನೂರಕ್ಕೆ ನೂರು ಅಂಕ ಪಡೆದ ವಿದ್ಯಾರ್ಥಿನಿ
ಕಳೆದ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೊಸನಗರ ತಾಲೂಕಿನ ಹನಿಯ ಗ್ರಾಮದ ಎಚ್.ಆರ್. ಧರಣಿ ಎಂಬ ವಿದ್ಯಾರ್ಥಿನಿ ಅಕೌಂಟೆನ್ಸಿ ವಿಷಯದಲ್ಲಿ 99 ಅಂಕ ಪಡೆದಿದ್ದಳು. ತನಗೆ 100 ಅಂಕಗಳು ಬರಬೇಕಿತ್ತೆಂಬ ಹಿನ್ನೆಲೆಯಲ್ಲಿ ಉತ್ತರ ಪತ್ರಿಕೆಯ ಛಾಯಾಪ್ರತಿ ತರಿಸಿ ನೋಡಿದಾಗ ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸವಾಗಿದ್ದು ಕಂಡು ಬಂದಿತ್ತು. ನಂತರ ಮರು ಎಣಿಕೆಗೆ ಅರ್ಜಿ ಹಾಕಿದ್ದರು. ಆದರೆ ಮರುಎಣಿಕೆಯಲ್ಲಿಯೂ ವಿದ್ಯಾರ್ಥಿನಿಗೆ 88 ಅಂಕಗಳನ್ನು ಮಾತ್ರ ಕೊಡಲಾಗಿತ್ತು. ಈ ಕುರಿತು ವಿದ್ಯಾರ್ಥಿನಿ ರಾಜ್ಯ ಹೈಕೋರ್ಟ್ ಮೊರೆ ಹೋದಾಗ ಮರುಎಣಿಕೆಗೆ ನ್ಯಾಯಾಲಯ ಆದೇಶಿಸಿದ ಹಿನ್ನೆಲೆಯಲ್ಲಿ 100 ಅಂಕಗಳು ಬಂದಿದ್ದವು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications