ಮೌಲ್ಯಮಾಪನ ಪ್ರಕ್ರಿಯೆ; ಖಡಕ್ ಎಚ್ಚರಿಕೆ ಕೊಟ್ಟ ಶಿಕ್ಷಣ ಸಚಿವ ಸುರೇಶ್ ಕುಮಾರ್!
ಬೆಂಗಳೂರು, ಜ. 25: ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುವ ಶಿಕ್ಷಣ ಇಲಾಖೆ ಸಿಬ್ಬಂದಿ ಮೇಲೆ ಕಠಿಣಕ್ರಮ ಕೈಗೊಳ್ಳಲು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮುಂದಾಗಿದ್ದಾರೆ. ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ನಿರ್ಲಕ್ಷ ತೋರುವ ಇಲಾಖೆ ಸಿಬ್ಬಂದಿ ಮೇಲೆ ಇದೇ ಮೊದಲ ಬಾರಿ ಕಠಿಣ ಕ್ರಮಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ. ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಕಠಿಣ ಆದೇಶವನ್ನು ಹೊರಡಿಸಿದ್ದಾರೆ.
ಹೊಸನಗರ ತಾಲೂಕಿನ ಹನಿಯಾ ಗ್ರಾಮದ ದ್ವಿತೀಯ ಪಿಯು ವಿದ್ಯಾರ್ಥಿನಿಯೊಬ್ಬರ ಉತ್ತರ ಪತ್ರಿಕೆ ಮರು ಎಣಿಕೆಯಲ್ಲಿ ಕಡಿಮೆ ಅಂಕ ನೀಡಲಾಗಿತ್ತು. ಇಡೀ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ತಕ್ಷಣವೇ ವರದಿ ಸಲ್ಲಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
ತನಗೆ ಬರಬೇಕಾಗಿದ್ದ ಅಂಕಗಳನ್ನು ಪಡೆಯಲು ಆ ವಿದ್ಯಾರ್ಥಿನಿ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಮರುಎಣಿಕೆ ಸಂದರ್ಭದಲ್ಲಿ ವಿದ್ಯಾರ್ಥಿನಿಗೆ ಮತ್ತೆ ಕಡಿಮೆ ಅಂಕಗಳು ಬಂದಿದ್ದವು. ಹೀಗಾಗಿ ಆ ವಿದ್ಯಾರ್ಥಿನಿ ಹೈಕೋರ್ಟ್ ಮೊರೆ ಹೊಗಿದ್ದರು. ಇದೀಗ ಆ ವಿದ್ಯಾರ್ಥಿನಿಗೆ ನೂರಕ್ಕೆ ನೂರು ಅಂಕಗಳು ಬಂದಿದ್ದು, ಶಿಕ್ಷಣ ಇಲಾಖೆಯ ಸಿಬ್ಬಂದಿ ಕಾರ್ಯವೈಖರಿಗೆ ಸಚಿವ ಸುರೇಶ್ ಕುಮಾರ್ ಅವರು ಗರಂ ಆಗಿದ್ದಾರೆ.

ಮರುಎಣಿಕೆಯಲ್ಲಿ ಕಡಿಮೆ ಅಂಕಗಳು
ಪಿಯು ಪರೀಕ್ಷೆಯಲ್ಲಿ ಒಂದು ವಿಷಯದಲ್ಲಿ 99 ಅಂಕ ಬಂದಾಗ ತನಗೆ 100 ಅಂಕ ಬರಬೇಕಿತ್ತೆಂಬ ಉತ್ತರಪತ್ರಿಕೆಯ ಫೊಟೊ ಕಾಪಿ ತರಿಸಿ ಪರಿಶೀಲನೆ ಮಾಡಿದ್ದ ವಿದ್ಯಾರ್ಥಿನಿಗೆ ಅಘಾತ ಕಾದಿತ್ತು. ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸವಾಗಿ ತನಗೆ ಒಂದು ಅಂಕ ಕಡಿಮೆ ಬಂದಿದೆ ಎಂದು ವಿದ್ಯಾರ್ಥಿನಿ ಮರುಎಣಿಕೆಗೆ ಹಾಕಿದ್ದರು. ಆದರೆ ಮರುಎಣಿಕೆಗೆ ಅರ್ಜಿ ಸಲ್ಲಿಸಿದಾಗ 99 ಅಂಕಗಳು ಹೀಗಿ ಕೇವಲ 88 ಅಂಕಗಳನ್ನು ಕೊಡಲಾಗಿತ್ತು. ಅದು ವಿದ್ಯಾರ್ಥಿನಿ ಹಾಗೂ ಆಕೆಯ ಪಾಲಕರ ಆತಂಕಕ್ಕೆ ಕಾರಣವಾಗಿತ್ತು.

ಹೈಕೋರ್ಟ್ ಮೊರೆ ಹೋಗಿದ್ದ ವಿದ್ಯಾರ್ಥಿನಿ
ಈ ಕುರಿತು ವಿದ್ಯಾರ್ಥಿನಿ ರಾಜ್ಯ ಹೈಕೋರ್ಟ್ ಮೊರೆ ಹೋದಾಗ ಹೈಕೋರ್ಟ್ ಮರುಎಣಿಕೆಗೆ ಆದೇಶಿಸಿತ್ತು. ಆ ನಂತರ ವಿದ್ಯಾರ್ಥಿನಿಗೆ 100 ಅಂಕಗಳು ಬಂದಿದ್ದವು. ಈ ಕುರಿತು ಮರು ಎಣಿಕೆಯಲ್ಲಿ ಲೋಪ ಎಸಗಿದ ಅಧಿಕಾರಿ, ಉಪನ್ಯಾಸಕರು ಮತ್ತು ಸಂಬಂಧಿಸಿದ ಸಿಬ್ಬಂದಿಯ ವಿರುದ್ಧ ಅಗತ್ಯ ಕ್ರಮಕೈಗೊಳ್ಳಲು ಸಂಬಂಧಿಸಿದವರ ವಿವರಗಳೊಂದಿಗೆ ಎರಡು ದಿನಗಳೊಳಗೆ ವರದಿ ಸಲ್ಲಿಸಬೇಕೆಂದು ಸಚಿವರು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಮತ್ತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸಚಿವ ಸುರೇಶ್ ಕುಮಾರ್ ಅವರು ಸೂಚಿಸಿದ್ದಾರೆ.

ನ್ಯಾಯ ದೊರೆತದ್ದು ಸಂತಸ, ಆದರೆ..
ವಿದ್ಯಾರ್ಥಿನಿಗೆ ಕೊನೆಗಾದರೂ ನ್ಯಾಯ ದೊರೆತದ್ದು ಸಂತಸ ಸಂಗತಿಯಾಗಿದ್ದರೂ ಸಹ ಇಲಾಖೆ ಅಧಿಕಾರಿಗಳ ಕರ್ತವ್ಯ ಚ್ಯುತಿಯಿಂದ ಒಬ್ಬ ಪ್ರತಿಭಾವಂತ ವಿದ್ಯಾರ್ಥಿನಿಯ ಆತ್ಮವಿಶ್ವಾಸಕ್ಕೆ ಧಕ್ಕೆಯಾಗುವಂತಾಗಿದ್ದು, ವ್ಯವಸ್ಥೆ ಕುರಿತು ಭರವಸೆ ಕಳೆದುಕೊಳ್ಳುವಂತಾಗಿದೆ. ಪ್ರತಿಭಾವಂತ ವಿದ್ಯಾರ್ಥಿನಿಯ ನೆರವಿಗೆ ಬರಬೇಕಾದ ಇಲಾಖೆ ಆಕೆಯ ಆತ್ಮ ವಿಶ್ವಾಸ ಕಸಿಯುವ ಕೆಲಸ ಮಾಡಿದ್ದು, ಇದಕ್ಕೆ ಕಾರಣರಾದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದ್ದು, ತಕ್ಷಣವೇ ಈ ಕುರಿತು ವರದಿ ಸಲ್ಲಿಸಬೇಕೆಂದು ಸಚಿವರು ಟಿಪ್ಪಣಿಯಲ್ಲಿ ಪಿಯು ನಿರ್ದೇಶಕರಿಗೆ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.
Recommended Video

ನೂರಕ್ಕೆ ನೂರು ಅಂಕ ಪಡೆದ ವಿದ್ಯಾರ್ಥಿನಿ
ಕಳೆದ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೊಸನಗರ ತಾಲೂಕಿನ ಹನಿಯ ಗ್ರಾಮದ ಎಚ್.ಆರ್. ಧರಣಿ ಎಂಬ ವಿದ್ಯಾರ್ಥಿನಿ ಅಕೌಂಟೆನ್ಸಿ ವಿಷಯದಲ್ಲಿ 99 ಅಂಕ ಪಡೆದಿದ್ದಳು. ತನಗೆ 100 ಅಂಕಗಳು ಬರಬೇಕಿತ್ತೆಂಬ ಹಿನ್ನೆಲೆಯಲ್ಲಿ ಉತ್ತರ ಪತ್ರಿಕೆಯ ಛಾಯಾಪ್ರತಿ ತರಿಸಿ ನೋಡಿದಾಗ ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸವಾಗಿದ್ದು ಕಂಡು ಬಂದಿತ್ತು. ನಂತರ ಮರು ಎಣಿಕೆಗೆ ಅರ್ಜಿ ಹಾಕಿದ್ದರು. ಆದರೆ ಮರುಎಣಿಕೆಯಲ್ಲಿಯೂ ವಿದ್ಯಾರ್ಥಿನಿಗೆ 88 ಅಂಕಗಳನ್ನು ಮಾತ್ರ ಕೊಡಲಾಗಿತ್ತು. ಈ ಕುರಿತು ವಿದ್ಯಾರ್ಥಿನಿ ರಾಜ್ಯ ಹೈಕೋರ್ಟ್ ಮೊರೆ ಹೋದಾಗ ಮರುಎಣಿಕೆಗೆ ನ್ಯಾಯಾಲಯ ಆದೇಶಿಸಿದ ಹಿನ್ನೆಲೆಯಲ್ಲಿ 100 ಅಂಕಗಳು ಬಂದಿದ್ದವು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications