ಚಕ್ರತೀರ್ಥ ಹೆಸರು ಶಿಫಾರಸು: 'ಡೀಸೆಲ್' ಕಥೆ ಹೇಳಿದ ಎಸ್. ಸುರೇಶ್ ಕುಮಾರ್!
ಬೆಂಗಳೂರು, ಮೇ 31: ಭಾರಿ ವಿವಾದಕ್ಕೆ ನಾಂದಿ ಹಾಡಿರುವ ಕರ್ನಾಟಕ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಗೆ ರೋಹಿತ್ ಚಕ್ರತೀರ್ಥ ಹೆಸರು ಶಿಫಾರಸು ಮಾಡಿದ ಅರೋಪಕ್ಕೆ ಸಂಬಂಧಿಸದಿಂತೆ ಮಾಜಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳ ಪ್ರಶ್ನೆಗೆ ಸುರೇಶ್ ಕುಮಾರ್ ಸ್ಪಷ್ಟ ಉತ್ತರ ನೀಡದೇ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿದ್ದಾರೆ.
ಕರ್ನಾಟಕ ಲೋಕ ಸೇವಾ ಅಯೋಗದ ಕಾರ್ಯ ವೈಖರಿ ಬಗ್ಗೆ ಪ್ರಶ್ನೆ "ಬಾಗಿಲು ತಟ್ಟುವ' ಅಭಿಯಾನಕ್ಕೆ ಚಾಲನೆ ನೀಡಿರುವ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. 'ರೋಹಿತ್ ಚಕ್ರತೀರ್ಥ ಅವರನ್ನು ಕರ್ನಾಟಕ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿ ಅಧ್ಯಕ್ಷರನ್ನಾಗಿಸುವ ಯೋಗ್ಯತೆ ಬಗ್ಗೆ ವಿವಾದ ಎದ್ದಿದೆ. ಅವರನ್ನು ಈ ಸಮಿತಿಗೆ ಶಿಫಾರಸು ಮಾಡಿದ್ದು ನೀವು ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ. ಇದು ನಿಜವೇ ಎಂದು ಪತ್ರಕರ್ತನೊಬ್ಬ ನೇರ ಪ್ರಶ್ನೆಯನ್ನು ಕೇಳಿದರು.
ಈ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಸುರೇಶ್ ಕುಮಾರ್, "ಇಲ್ಲಾ ನೋಡಿ, ಆಸಮಯದಲ್ಲಿ ನನಗೆ ಚೆನ್ನಾಗಿ ನೆನಪಿದೆ. ಡಿಸೆಂಬರ್ 2020 ರಲ್ಲಿ. ಸ್ವಲ್ಪ ವಿವರವಾಗಿ ಹೇಳ್ತೀನಿ. ನಾನು ಗುಂಡ್ಲುಪೇಟೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಮುಗಿಸಿಕೊಂಡು ವಾಪಸು ಬರುತ್ತಿದ್ದೆ. ನನ್ನ ಕಾರ್ದು ಡೀಸೆಲ್ ಆಗೋಯ್ತು ರಾತ್ರಿ ಸುಮಾರು 9.30 ರಲ್ಲಿ. ಖಾಸಗಿ ಕಾರಿನಲ್ಲಿ ಹೋಗಿದ್ದೆ. ಆಗ ನನ್ನ ಪೋನ್ಗೆ ಒಂದು ಕರೆ ಬಂತು. ನಾನು ತಗೊಂಡೆ. ಅದನ್ನು ಮಾಡಿದ್ದು. ಮಂತ್ರಾಲಯದ ಪೂಜ್ಯ ಸ್ವಾಮಿಗಳು. ಆರನೇ ತರಗತಿಯನ್ನು ವಿಶೇಷವಾಗಿ ಉಲ್ಲೇಖಮಾಡಿ, ಈ ರೀತಿಯ ವಯಸ್ಸಿನ ಮಕ್ಕಳಿಗೆ ಈ ರೀತಿ ಕೊಟ್ಟರೆ ಏನಾಗುತ್ತೆ? ಏನು ಮಾಡೋಕೆ ಹೊರಟಿದ್ದೀರಾ ನೀವು ? ಎಂದು ಕೇಳಿದರು. ಅದಕ್ಕೆ ನಾನು ಪರಿಶೀಲಿಸ್ತೀನಿ ಅಂತ ಹೇಳಿದೆ.

ಅದಾದ ಮೇಲೆ ಅದೂ...ಅದೂ ಅದೂ ಮತ್ತೆ ಮತ್ತೆ ಬಂದಾಗ, ನಾನು ಚಕ್ರತೀರ್ಥ ಅವರಿಗೆ, ಅವರೂ ನನ್ನ ಮೇಲೆ ಆರ್ಟಿಕಲ್ ಬರೆದಿದ್ದರು. ಆಗ ಚಕ್ರತೀರ್ಥ ಅವರನ್ನು ಕರೆದು, ಏನೇನು ತಪ್ಪಿದೆ ಮೊದಲು ಒಂದು ಲಿಸ್ಟ್ ಮಾಡಿ ಕೊಡಿ ಎಂದು ಹೇಳಿದೆ. ನೀವು ಲಿಸ್ಟ ಮಾಡಿ ಕೊಟ್ಟಿರುವುದನ್ನು ಪರಿಶೀಲಿಸಿ ಅಳವಡಿಸೋಕೆ ಅದರ ಮೇಲೆ ಒಂದು ಸಮಿತಿ ಇರುತ್ತೆ. ಅದು ನಿರ್ಣಯ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದೆ. ಆದರೆ ಅವರಿಗೆ ಆದೇಶ ಅಂತ ಬಂದಿದ್ದು ನಾನು ಸಚಿವ ಸ್ಥಾನದಿಂದ ಇಳಿದ ಮೇಲೆ. ಆನಂತರ ಸರ್ಕಾರದಿಂದ ಅಧಿಕೃತ ಆದೇಶ ಬಂತು. ಆಗ ಅವರು ಮೇಲಿಂದ ಮೇಲೆ ತಪ್ಪುಗಳನ್ನು ನನ್ನ ಗಮನಕ್ಕೆ ತಂದಾಗ, ನೀವು ಅದನ್ನು ಲಿಸ್ಟ್ ಮಾಡಿಕೊಳ್ಳಿ ಎಂದು ಹೇಳಿದ್ದೆ ಎಂದು ಸುರೇಶ್ ಕುಮಾರ್ ಕಾರಿಗೆ ಡೀಸೆಲ್ ಖಾಲಿಯಾದ ಕಥೆ ಹೇಳಿದರು. ಅವರು ಸ್ಪಷ್ಟವಾಗಿ ನಾನು ಶಿಫಾರಸು ಮಾಡಿದ್ದೀನಿ, ಅಥವಾ ಇಲ್ಲ ಎಂದು ಸ್ಪಷ್ಟನೆ ನೀಡಲಿಲ್ಲ.
ನೀವು ಚಕ್ರತೀರ್ಥ ಅವರ ಹೆಸರನ್ನು ಶಿಫಾರಸು ಮಾಡಿದ್ದೀರೋ ಇಲ್ಲವೋ ? ಎಂದು ಪತ್ರಕರ್ತ ಪ್ರಶ್ನೆ ಮಾಡಿದಾಗ, ಅಲ್ಲಾ ಆ ಜವಾಬ್ದಾರಿ ಕೊಟ್ಟಿದ್ದೆ. ಅಧಿಕೃತವಾಗಿ ಆದೇಶ ಬಂದಿದ್ದು ಆಮೇಲೆ ( ಸುರೇಶ್ ಕುಮಾರ್ ಸಚಿವ ಸ್ಥಾನ ಕಳೆದುಕೊಂಡ ಮೇಲೆ) , ನಾನು ಜವಾಬ್ದಾರಿ ಕೊಟ್ಟಿದ್ದು, ಆ ಕಮಿಟಿ ಅಂತ ಏನು ಮಾಡಿದ್ರಲ್ಲಾ, ನೀವು ಇದನ್ನು ಮಾಡಿಕೊಡಿ ಅಂತಷ್ಟೇ ಹೇಳಿದ್ದೆ. ( ಪಠ್ಯ ಪುಸ್ತಕದಲ್ಲಿ ಆಗಿರುವ ಲೋಪ) ತಪ್ಪುಗಳಿದ್ದರೆ, ನಮ್ಮ ಗಮನಕ್ಕೆ ತನ್ನಿ ಎಂದಿದ್ದೆ ಎಂದಷ್ಟೇ ಹೇಳಿ ನೇರ ಉತ್ತರ ಹೇಳದೇ ಜಾರಿಕೊಂಡರು.

ಇನ್ನು ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯಿಂದ ವಜಾ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮಾಜಿ ಶಿಕ್ಷಣ ಸಚಿವರು, ರೋಹಿತ್ ಚಕ್ರತೀರ್ಥ ಅವರ ಸಮಿತಿ ಬಗ್ಗೆ ಮುಖ್ಯಮಂತ್ರಿಗಳು ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ಶಿಕ್ಷಣ ಸಚಿವರ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಅವರು ತೆಗೆದುಕೊಳ್ಳುತ್ತಾರೆ ಎಂದೇಳಿ ಸುರೇಶ್ ಕುಮಾರ್ ಹೊರ ನಡೆದರು.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Karnataka: ರಾಜ್ಯದಲ್ಲಿ ಹೆಚ್ಚಾಯ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ: 3 ವರ್ಷದಲ್ಲಿ 27 ಸಾವು -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ












Click it and Unblock the Notifications