ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಗ್ಯಾರಂಟಿಯೇ ರಕ್ಷಾಕವಚ: ಪ್ರಧಾನಿ 'ಹುಸಿ ಭರವಸೆ' ಟೀಕೆಗೆ ಸುರ್ಜೆವಾಲ ತಿರುಗೇಟು
ಕರ್ನಾಟಕ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಹಾಗೂ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಶ್ನಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ಸೋಮವಾರ ಸಿಎಂ ಸಿದ್ದರಾಮಯ್ಯ ಪ್ರತ್ಯುತ್ತರ ನೀಡಿದ್ದರು. ಅದರ ಬೆನ್ನಲ್ಲೆ ಇಂದು ಮಂಗಳವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಟಾಂಗ್ ನೀಡಿದ್ದಾರೆ. '1.31 ಲಕ್ಷ ಕೋಟಿ ಹಣ ಕನ್ನಡಿಗರ ಜೇಬು ಸೇರಿದೆ' ಎಂದು ಅವರು ಉತ್ತರಿಸಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರ ದೊಡ್ಡದಾಗಿ ಭರವಸೆ ನೀಡಿತ್ತು. ಆ ಭರವಸೆ ಏನಾಯ್ತು. ಕಾಂಗ್ರೆಸ್ನ ಹುಸಿ ಭರವಸೆಗಳನ್ನು ನಂಬಬೇಡಿ ಎಂದು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ಮೋದಿ 'ಕೈ' ನಾಯಕರ ಕಾಲೆಳೆದಿದ್ದರು. ಇದಕ್ಕೆ ಎಕ್ಸ್ ಪೋಸ್ಟ್ ಮೂಲಕ ಸುರ್ಜೆವಾಲ ಪ್ರತಿಕ್ರಿಯೆ ನೀಡಿದ್ದಾರೆ.

'ಕಾಂಗ್ರೆಸ್ ಕರ್ನಾಟಕದಲ್ಲಿ ಕೊಟ್ಟ ದೊಡ್ಡ ಭರವಸೆಗಳು (ಗ್ಯಾರಂಟಿಗಳು) ಯಶಸ್ವಿಯಾಗಿ ಜಾರಿಯಾಗಿವೆ. 1.31 ಲಕ್ಷ ಕೋಟಿ ಹಣ ಕನ್ನಡಿಗರ ಜೇಬು ಸೇರಿದೆ. ನಿಮ್ಮ ದುರಾಡಳಿತದಿಂದ ಆಗುತ್ತಿರುವ ಬೆಲೆ ಏರಿಕೆಯಿಂದ ಜನರನ್ನು ಕಾಪಾಡುವ ರಕ್ಷಾಕವಚವಾಗಿವೆ. ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ತುಂಬಿದೆ. ಬಡವರ ಬದುಕಿನ ಬೆಳಕಾಗಿದೆ ಎಂದಿದ್ದಾರೆ.
ಪ್ರಧಾನಿಗೆ ಸಾಲು ಸಾಲು ಪ್ರಶ್ನೆ
ಪ್ರಧಾನಿ ನರೇಂದ್ರ ಮೋದಿಯವರ ನೀವು ಕೊಟ್ಟ ಅಚ್ಛೇ ದಿನದ ಭರವಸೆ ಏನಾಯ್ತು? ಬೆಲೆ ಏರಿಕೆ ಜಾಸ್ತಿಯಾಗಿದೆ, ಜನರ ಬದುಕು ಬೀದಿಗೆ ಬಿದ್ದಿದೆ. ಉದ್ಯೋಗಕ್ಕೆ ಕುತ್ತು ಬಂದಿದೆ. ದೇಶದ ಸಂಪತ್ತು ಕೆಲವು ಜನರು ಜೇಬಿಗೆ ಸೇರಿದೆ. ನಿಮಗೆ ಬಡವರು, ಮಧ್ಯಮವರ್ಗದವರ ಮೇಲೆ ಕಿಂಚಿತ್ತೂ ಅನುಕಂಪವಿಲ್ಲ. ಕೋವಿಡ್ ಸಮಯವಾಗಲಿ, ನೋಟು ರದ್ದತಿಯಾಗಲಿ, ಪ್ರಸ್ತುತ ಅಡುಗೆ ಅನಿಲ ಕೊರತೆಯಾಗಲಿ ನಿಮ್ಮ ನೀತಿಗಳಿಂದ ಪರದಾಡಿದ್ದು ಜನಸಾಮಾನ್ಯರು. ನಿಮ್ಮ ಕಣ್ಣಿಗೆ ಕಾಣುವುದು ಶ್ರೀಮಂತ ಉದ್ಯಮಿಗಳೇ ಹೊರತು, ಶ್ರಮಿಕ ವರ್ಗದ ಜನರಲ್ಲ ಎಂದು ಕಿಡಿ ಕಾರಿದರು.
ಮಹಾರಾಷ್ಟ್ರ, ಬಿಹಾರದಲ್ಲಿ ಬಿಜೆಪಿಯಿಂದ ಗ್ಯಾರಂಟಿ ನಕಲು
ನಿಮ್ಮ ನೀತಿಗಳಿಂದ ಕಂಗಾಲಾಗಿರುವ ಜನಸಾಮಾನ್ಯರಿಗೆ ಈಗ ಆಸರೆಯಾಗಿರುವುದು ಕಾಂಗ್ರೆಸ್ ಗ್ಯಾರಂಟಿಗಳೇ ಹೊರತು, ನಿಮ್ಮ ಬಣ್ಣದ ಮಾತುಗಳಲ್ಲ. ಅಂದಹಾಗೆ, ಮಹಾರಾಷ್ಟ್ರ, ಬಿಹಾರದಲ್ಲಿ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ನಿಮ್ಮ ಸರ್ಕಾರಗಳು ನಕಲು ಮಾಡಿದ್ದು ಯಾಕೆ? ನಕಲು ಮಾಡಿದ ಬಳಿಕ ಅವುಗಳನ್ನು ಸರಿಯಾಗಿ ಜಾರಿಗೊಳಿಸುವಲ್ಲಿ ವಿಫಲವಾಗಿದ್ದು ಯಾಕೆ?
ಅಲ್ಲೆಲ್ಲೋ ಅಸ್ಸಾಂನಲ್ಲಿ ಕೂತು ಕರ್ನಾಟಕದ ಗ್ಯಾರಂಟಿ ಮಾತನಾಡುವ ಬದಲು, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪಚುನಾವಣೆ ಪ್ರಚಾರಕ್ಕೆ ಬಂದು ಈ ಪ್ರಶ್ನೆ ಕೇಳಿ. ಕನ್ನಡಿಗರು ನಿಮಗೆ ವಿವರವಾಗಿ ಉತ್ತರ ನೀಡುತ್ತಾರೆ ಎಂದು ಹೇಳಿದರು.
ಗ್ಯಾರಂಟಿ ನೀಡಿ ರಾಜ್ಯ ದಿವಾಳಿ ಆಗಿಲ್ಲ: ಸಿದ್ದರಾಮಯ್ಯ
ಅಸ್ಸಾಂನಲ್ಲಿ ಪ್ರಧಾನಿ ಮೋದಿಯವರು ಕರ್ನಾಟಕ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ್ದಕ್ಕೆ ದಾವಣಗೆರೆಯಲ್ಲಿ ಸಿಎಂ ಸಿದ್ದರಾಮಯ್ಯ ಸೋಮವಾರ ಪ್ರತಿಕ್ರಿಯಿಸಿದರು. ಕಾಂಗ್ರೆಸ್ ಯೋಜನೆಗಳನ್ನು ಜನರು ಮೆಚ್ಚಿದ್ದಾರೆ. ನಮಗೆ ವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ. ಕರ್ನಾಟಕ ಬಾಗಲಕೋಟೆ ಮತ್ತು ದಾವಣಗೆರೆಯಲ್ಲಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ತಿರುಗೇಟು ನೀಡಿದ್ದಾರೆ.
-
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ದಕ್ಷಿಣ ಭಾರತದ ಧ್ವನಿ ಅಡಗಿಸುವ ಪಿತೂರಿ: ಮೋದಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ -
'Bagalkot: ರಾಜ್ಯದಲ್ಲಿ ಎಸ್ಸಿ, ಎಸ್ಟಿ, ಓಬಿಸಿ ವಿರೋಧಿ ಸರ್ಕಾರವಿದೆ; ಕಾಂಗ್ರೆಸ್ಗೆ ನಿಮ್ಮ ಶಕ್ತಿ ತೋರಿಸಿ'' -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
ಧನುಷ್ ಜೊತೆ ಸ್ನೇಹ ಕಳೆದುಕೊಂಡಿದ್ದು ನನ್ನ ಜೀವನದ ದೊಡ್ಡ ನಷ್ಟ: ಪತ್ನಿ ನಯನತಾರ ಜೊತೆಗಿನ ಮನಸ್ತಾಪಕ್ಕೆ ವಿಘ್ನೇಶ್ ಶಿವನ್ ಬೇಸರ -
"ನಾನು ಔಟ್ ಆಗಿದ್ದಕ್ಕೇ ತುಂಬಾ ಖುಷಿಯಾಯ್ತು": ಸಿಎಸ್ಕೆ ಎದುರು ರನ್ ಮಳೆ ಹರಿಸಿದ ಬಳಿಕ ಪಡಿಕ್ಕಲ್ ಹೀಗಂದಿದ್ದೇಕೆ? -
2026ರ PUC ಫಲಿತಾಂಶಕ್ಕೆ ಕ್ಷಣಗಣನೆ; ಈ ಬಾರಿ ಡಿಜಿಲಾಕರ್ನಲ್ಲೂ ರಿಸಲ್ಟ್ ಲಭ್ಯ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru: ನಸುಕಿನ ಜಾವ 3 ಗಂಟೆಗೆ ರಾಪಿಡೋ ರೈಡರ್ ತೋರಿದ ಮಾನವೀಯತೆಗೆ ಮಹಿಳೆ ಫಿದಾ, Video Viral -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
Virat Kohli: ನಾನೇನು ವಿದೇಶಿ ಆಟಗಾರನಾ?: ಲಂಡನ್ ವಾಸ್ತವ್ಯದ ಬಗ್ಗೆ ಟೀಕಾಕಾರರಿಗೆ ವಿರಾಟ್ ಕೊಹ್ಲಿ ತಿರುಗೇಟು -
ಒರಾಕಲ್ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral













Click it and Unblock the Notifications