ಸಂಸತ್ತಿನಿಂದ 146 ಸಂಸದರು ಅಮಾನತು: ಸಿಎಂ ಸಿದ್ದರಾಮಯ್ಯ ಹೇಳಿದಿಷ್ಟು!
ಮೈಸೂರು, ಡಿಸೆಂಬರ್ 22: ಸಂಸತ್ತಿನಲ್ಲಿ 146 ಸಂಸದರು ಅಮಾನತುಗೊಂಡಿದ್ದಾರೆ. ಸದನದಲ್ಲಿ ದೊಡ್ಡ ಸಂಖ್ಯೆಯಲ್ಲಿ ಸಂಸದರನ್ನು ಅಮಾನತ್ತು ಮಾಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.
ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಪ್ರಜಾಪ್ರಭುತ್ವದಲ್ಲಿ ವಿರೋಧಪಕ್ಷದವರ ವಾದವನ್ನು ಕೇಳಬೇಕು. ಜನರ ತೀರ್ಪಿನಂತೆ ಸಂಸದರು ಲೋಕಸಭೆ ಅಥವಾ ವಿಧಾನಸಭೆಗೆ ಬಂದಿರುತ್ತಾರೆ. ಅವರ ಹಕ್ಕುಗಳನ್ನು ಕಸಿದುಕೊಳ್ಳಲು ಸಭಾಧ್ಯಕ್ಷರು ಸೇರಿದಂತೆ ಯಾರಿಗೂ ಸಾಧ್ಯವಿಲ್ಲ ಎಂದರು.

ಲೋಕಸಭೆಯ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಸದರನ್ನು ಅಮಾನತ್ತು ಮಾಡಿರಲಿಲ್ಲ. ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಕೇಂದ್ರ ಸರ್ಕಾರದವರು ಪ್ರಭಾಪ್ರಭುತ್ವವನ್ನು ಹಾಗೂ ಜನರ ಭಾವನೆಯನ್ನು ಗೌರವಿಸುತ್ತಿಲ್ಲ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಜನರು ಸರಿಯಾದ ತೀರ್ಮಾನವನ್ನು ತೆಗೆದುಕೊಳ್ಳುತ್ತಾರೆ ಎಂದರು.
ಇಂಡಿಯಾ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಮಂತ್ರಿ ಅಭ್ಯರ್ಥಿಯಾಗಿ ಪ್ರಸ್ತಾಪ ಮಾಡಲಾಗಿರುವ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಇಂಡಿಯ ಸಭೆಯಲ್ಲಿ ತೀರ್ಮಾನ ಮಾಡಬೇಕು ಎಂದು ತಿಳಿಸಿದರು.
ಜಮೀರ್ ಅಹ್ಮದ್ ಅವರ ಜೊತೆ ಐಷಾರಾಮಿ ವಿಮಾನದಲ್ಲಿ ತಿರುಗಾಡಿದ ಕುರಿತು ಬಿಜೆಪಿಯವರು ಮಾಡಿರುವ ಟೀಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ನರೇಂದ್ರ ಮೋದಿಯವರು ಯಾವುದರಲ್ಲಿ ತಿರುಗಾಡುತ್ತಾರೆ ಎಂದು ಅವರಿಗೇ ಕೇಳಿ ಎಂದು ತಿಳಿಸಿದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications