ಕರ್ನಾಟಕದ 5 ಲಕ್ಷ ಜನರಿಗೆ ಸ್ವಯಂ ಉದ್ಯೋಗ ಹೊಂದಲು ವಿವೇಕಾನಂದರ ಯೋಜನೆ ಜಾರಿ: ಬೊಮ್ಮಾಯಿ
ಹುಬ್ಬಳ್ಳಿ, ಜನವರಿ 12: ಸುಮಾರು ಐದು ಲಕ್ಷ ಜನರಿಗೆ ಸ್ವಯಂ ಉದ್ಯೋಗ ಹೊಂದುವ ಸ್ವಾಮಿ ವಿವೇಕಾನಂದ ಯೋಜನೆಯನ್ನು ಕರ್ನಾಟಕದಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಭಾರತ ಸರ್ಕಾರದ ಯುವಸಬಲೀಕರಣ ಮತ್ತು ಕ್ರೀಡಾ ಮಂತ್ರಾಲಯ ಹಾಗೂ ಕರ್ನಾಟಕ ಸರ್ಕಾರದ ಸಹಯೋಗದಲ್ಲಿ ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಗುರುವಾರ ಆಯೋಜಿಸಿದ್ದ 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ದೇಶದಲ್ಲಿಯೇ ಮೊಟ್ಟ ಮೊದಲು ಹೊಸ ಶಿಕ್ಷಣ ನೀತಿ ಜಾರಿಗೊಳಿಸಿದ ಕೀರ್ತಿ ಕರ್ನಾಟಕದ್ದಾಗಿದೆ. ಮುಂಬರುವ ಓಲಂಪಿಕ್ ಕ್ರೀಡಾಕೂಟಕ್ಕಾಗಿ ರಾಜ್ಯವು 75 ಜನ ಕ್ರೀಡಾಪಟುಗಳನ್ನು ಅಣಿಗೊಳಿಸಲು ಪ್ರತಿಭಾವಂತರನ್ನು ದತ್ತು ಪಡೆದು ತರಬೇತಿ ನೀಡುವ ಕಾರ್ಯಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಯುವಜನರನ್ನು ಸ್ವಯಂ ಉದ್ಯೋಗಿಗಳನ್ನಾಗಿಸಲು ರಾಜ್ಯ ಸರ್ಕಾರವು ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಯೋಜನೆ ಜಾರಿಗೊಳಿಸಲಿದ್ದೇವೆ. ಸ್ವಾಮಿ ವಿವೇಕಾನಂದರು ಯುವಕರಿಗೆ ಪ್ರೇರಣೆಕೊಟ್ಟ ಧೀಮಂತ ಯೋಗಿಯಾಗಿದ್ದಾರೆ. ಧ್ಯಾನ ಮತ್ತು ಜ್ಞಾನವನ್ನು ಯುವಜನರಿಗೆ ಬೋಧಿಸಿದ ಮಹಾನ್ ಚೇತನ ಅವರಾಗಿದ್ದಾರೆ ಎಂದು ಬೊಮ್ಮಾಯಿ ಸ್ಮರಿಸಿದರು.
ಜನಸಂಖ್ಯೆ ಎಂದರೆ ಹೊರೆಯಲ್ಲ. ಅದು ಮಾನವ ಸಂಪತ್ತು ಅದರ ಸದ್ವಿನಿಯೋಗಪಡಿಸಿಕೊಂಡು, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸ್ಫೂರ್ತಿಯಾಗಿದ್ದಾರೆ. ಖೇಲೋ ಇಂಡಿಯಾ ಮೂಲಕ ಯುವ ಜನತೆಯಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಇಂದಿನಿಂದ ಪ್ರಾರಂಭವಾಗಲಿರುವ ರಾಷ್ಟ್ರೀಯ ಯುವಜನೋತ್ಸವ ನಾಡಿನ ಯುವಜನರಲ್ಲಿ ಹೊಸ ಸ್ಫೂರ್ತಿ ತುಂಬಲಿದೆ ಎಂದು ಆಶಿಸಿದರು.
ಜನವರಿ 16ರವರೆಗೆ ಯುವಜನೋತ್ಸವ
ಶಿಕ್ಷಣದ ಕಾಶಿ ಧಾರವಾಡದಲ್ಲಿ ಜನವರಿ 12 ರಿಂದ 16 ರ ವರೆಗೆ ನಡೆಯುತ್ತಿರುವ ರಾಷ್ಟ್ರೀಯ ಯುವಜನೋತ್ಸವದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ದೇಶಿಯ ಕ್ರೀಡೆಗಳ ಪ್ರದರ್ಶನಕ್ಕೆ ಅವಕಾಶ ನೀಡಿ ಸಾರ್ವಜನಿಕರಿಗೆ ಆಸಕ್ತಿ ಹುಟ್ಟಿಸಲು ಕ್ರಮ ಕೈಗೊಂಡಿದೆ. ಸದರಿ ಕಾರ್ಯಕ್ರಮವನ್ನು ಗುರುವಾರ ಪ್ರಧಾನಮಂತ್ರಿಗಳು ಉದ್ಘಾಟಿಸಿದ್ದು, ಸಮಾರಂಭಕ್ಕೆ ಮತ್ತಷ್ಟು ಮೆರಗು ಹೆಚ್ಚಿಸಿದೆ.

ಸಮಾರಂಭದಲ್ಲಿ ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಯುವಜನರ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೇಂದ್ರ ಸಚಿವ ಅನುರಾಗ್ ಠಾಕೂರ್, ಧಾರವಾಡದ ಗ್ರಾಮೀಣ ಶಾಸಕ ಅಮೃತ್ ದೇಸಾಯಿ ಸೇರಿದಂತೆ ಇನ್ನಿತರ ಮುಖಂಡರು ಪಾಲ್ಗೊಂಡಿದ್ದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications