ಮಠಕ್ಕೆ ಎರಡು ಕೋಟಿ ಕೊಡ್ರೀ.. ಏನ್ರೀ ನೀವು ಸಿಎಂಗೆ ಸ್ವಾಮೀಜಿ ಆವಾಜ್!
ಮಠಕ್ಕೆ ಎರಡು ಕೋಟಿ ಅನುದಾನ ನೀಡಿ, ಇಲ್ಲಾಂದ್ರೆ ನಿಮ್ಮ ಕಚೇರಿ ಮುಂದೆ ಪ್ರತಿಭಟನೆ ಮಾಡ್ತೀನಿ, ಹಡಪ ಮಠದ ಸ್ವಾಮೀಜಿಯವರ ಬೇಡಿಕೆ.
ಬೆಂಗಳೂರು, ಮಾ 10: ಬಜೆಟ್ ಪೂರ್ವಭಾವಿ ಸಭೆಯಲ್ಲಿ ಸ್ವಾರಸ್ಯಕರ ಘಟನೆಯೊಂದು ನಡೆದಿದೆ. ನನ್ನ ಮಠಕ್ಕೆ ಎರಡು ಕೋಟಿ ನೀಡ್ರೀ ಎಂದು ಸ್ವಾಮೀಜಿಯೊಬ್ಬರು ಮುಖ್ಯಮಂತ್ರಿಗಳಿಗೆ ಆವಾಜ್ ಹಾಕುವ ಮೂಲಕ ಬೇಡಿಕೆ ಇಟ್ಟಿದ್ದಾರೆ.
ಶುಕ್ರವಾರ (ಮಾ 10) ಶಕ್ತಿಭವನದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ, ಹಡಪ ಅಪ್ಪಣ್ಣ ಮಠದ ಅನ್ನದಾನ ಭಾರತಿ ಸ್ವಾಮೀಜಿಯವರು ಮಠಕ್ಕೆ ಅನುದಾನ ನೀಡುವಂತೆ ಖಡಕ್ಕಾಗಿ ಮುಖ್ಯಮಂತ್ರಿಗಳಿಗೆ ಬೇಡಿಕೆ ಇಟ್ಟಿದ್ದಾರೆ.
ನಮ್ಮ ತಂಗಡಿಗೆಯ ಶಾಖಾ ಮಠಕ್ಕೆ ಎರಡು ಕೋಟಿ ಅನುದಾನ ನೀಡಿ.. ಇಲ್ಲಾಂದ್ರೆ ನಿಮ್ಮ ಕಚೇರಿ ಮುಂದೆ ಪ್ರತಿಭಟನೆ ಮಾಡ್ತೀನಿ, ಹುಷಾರ್ ಎಂದು ಅನ್ನದಾನ ಸ್ವಾಮೀಜಿ ಸಿಎಂಗೆ ಬೆದರಿಕೆಯೊಡ್ಡಿದ್ದಾರೆ.

ಸ್ವಾಮೀಜಿಯವರ ಖಡಕ್ ಬೇಡಿಕೆಗೆ ಒಂದು ಕ್ಷಣ ವಿಚಲಿತರಾದ ಸಿದ್ದರಾಮಯ್ಯ, ನೀವು ಹೇಳಿದಂಗೆ ಕೊಡೊಕ್ಕೆ ಬರೋಲ್ಲ. ಪ್ರತಿಭಟನೆ ಮಾಡ್ತೀನಿ ಎನ್ನುವ ನಿಮ್ಮ ಧಮ್ಕಿಗೆ ನಾನು ಕ್ಯಾರ್ ಮಾಡಲ್ಲ ಎಂದು ಸಿಎಂ ತಿರುಗೇಟು ನೀಡಿದ್ದಾರೆ.
ಆದರೂ ಪಟ್ಟ ಬಿಡದ ಸ್ವಾಮೀಜಿ, ಏನ್ರೀ ನೀವು.. ಹೋದ್ಸಲ ಕೊಡ್ತೀನಿ ಅಂದ್ರಿ, ಕೊಟ್ಟಿಲ್ಲಾ.. ಈ ಸಲ ಆದರೂ ಬಜೆಟ್ ನಲ್ಲಿ ಕೊಡಿ ಎಂದು ಮರು ಬೇಡಿಕೆ ಇಟ್ಟರು. ಆಗ ಸಿಎಂ ಇವರನ್ನು ಒಳಗೆ ಬಿಡ್ರೀ ಎಂದು ಭದ್ರತಾ ಅಧಿಕಾರಿಗಳಿಗೆ ಸೂಚಿಸಿದರು.
ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಬಂದ ಅನ್ನದಾನ ಸ್ವಾಮೀಜಿ, ಮಠಕ್ಕೆಅನುದಾನದ ರೂಪದಲ್ಲಿ ಎರಡು ಕೋಟಿ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.
ಅವರ ಮಾತಿನ ಮೇಲೆ ನಂಬಿಕೆಯಿಟ್ಟು ಹೋಗುತ್ತಿದ್ದೇನೆಂದು ಮಾಧ್ಯಮದವರ ಮುಂದೆ ಅನ್ನದಾನ ಸ್ವಾಮೀಜಿ ಹೇಳಿದ್ದಾರೆ. (ಚಿತ್ರ: ಪಬ್ಲಿಕ್ ಟಿವಿ)
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications