ಬೆಂಗಳೂರು ಕಾಲ್ತುಳಿತ: ಸರ್ಕಾರದ ವಿರುದ್ಧ ಸಿಡಿದೆದ್ದ ಮಠಾಧೀಶರು; ಕರ್ನಾಟಕ ಬಂದ್...
ಬೆಂಗಳೂರು, ಜೂನ್ 08: ಆರ್ ಸಿ ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಮಠಾಧೀಶರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ವಿವಿಧ ಸಂಘಟನೆಗಳು ಸಹ ಕರ್ನಾಟಕ ಬಂದ್ಗೆ ಮುಂದಾಗಿವೆ ಎನ್ನಲಾಗಿದ್ದು, ಮಠಾಧೀಶರುಗಳು ರಾಜ್ಯ ಸರ್ಕಾರದ ವಿರುದ್ಧ ದೂರು ಸಲ್ಲಿಸಲು ಮುಂದಾಗಿದ್ದಾರೆ.
ಆರ್ ಸಿ ಬಿ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತದಿಂದ ಆರ್ಸಿಬಿಯ 11 ಅಭಿಮಾನಿಗಳ ಸಾವು ಪ್ರಕರಣ ಸದ್ಯ ರಾಷ್ಟ್ರಮಟ್ಟದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ವಿಪಕ್ಷಗಳು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿವೆ. ಈ ಮಧ್ಯೆ ಮಠಾಧೀಶರು ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ದೂರು ಸಲ್ಲಿಸಲು ಸ್ವಾಮೀಜಿಗಳ ತಂಡ ಮುಂದಾಗಿದೆ. ಈಗಾಗಲೇ ಬೆಂಗಳೂರು ತಲುಪಿರುವ ಸ್ವಾಮೀಜಿಗಳ ತಂಡ ಇಂದು ಕಬ್ಬನ್ಪಾರ್ಕ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಿದೆ. ಬಳಿಕ ಆರ್ಸಿಬಿ ವಿರುದ್ಧ ಇಡಿಗೂ ದೂರು ದಾಖಲಿಸಲಿದ್ದಾರೆ.

ಕಲಬುರಗಿಯ ನಾರಾಯಣಗುರು ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ, ಕುಂಬಾರ ಮಹಾಸಂಸ್ಥಾನ ಪೀಠ ಬಸವಮೂರ್ತಿ ಕುಂಬಾರ ಗುಂಡಯ್ಯಶ್ರೀ ಮತ್ತು ಛಲವಾದಿ ಜಗದ್ಗುರು ಪೀಠದ ಬಸವನಾಗಿದೇವಶ್ರೀ ಸೇರಿ ಹಲವರಿಂದ ರಾಜ್ಯ ಸರ್ಕಾರದ ವಿರುದ್ಧ ದೂರು ನೀಡಲಾಗುತ್ತಿದೆ. 11 ಜೀವಗಳ ಬಲಿ ಕುರಿತು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದು, ಆರ್ಸಿಬಿ ತಂಡಕ್ಕೆ ಅಂತಾರಾಷ್ಟ್ರೀಯ ಮಟ್ಟದ ಹಣದ ವ್ಯವಹಾರವಿದೆ. ಹೊರ ದೇಶದವರು ಈ ತಂಡದ ಮೇಲೆ ಹಣ ಹೂಡಿಕೆ ಮಾಡಿದ್ದಾರೆ. ಹೀಗಾಗಿ ಇ.ಡಿ ಅಧಿಕಾರಿಗಳು ತನಿಖೆ ಮಾಡಬೇಕೆಂದು ಒತ್ತಾಯಿಸಿದ್ದು, ನ್ಯಾಯಾಲಯದಲ್ಲೂ ಖಾಸಗಿ ದೂರು ದಾಖಲಿಸಲು ಶ್ರೀಗಳು ತಂಡವು ಚಿಂತನೆ ನಡೆಸಿದೆ.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ 3ಮಾನವ ಹಕ್ಕು ಆಯೋಗ ಇದೀಗ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಕೆ ಮಾಡಿದೆ. ಮಾನವ ಹಕ್ಕು ಶಿಫಾರಸಿನಲ್ಲಿ ದೂರಿನ ಮೇರೆಗೆ 6 ರಂದು ಸ್ಥಳಕ್ಕೆ ಬೇಟಿ ಕೊಟ್ಟು ಪರಿಶೀಲನೆ ಮಾಡಲಾಗಿತ್ತು. ಘಟನೆಯಲ್ಲಿ 11 ಜನ ಮೃತಪಟ್ಟಿದ್ದರು, 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಅಲ್ಲದೇ ಪ್ರಜಾಪ್ರಭುತ್ವ ಮತ್ತು ನಾಗರೀಕ ಸಮಾಜದಲ್ಲಿ ಮಾನವನಿಗೆ ಮೂಲಭೂತ ಸೌಕರ್ಯಗಳನ್ನು ಹಾಗೂ ಸಾರ್ವಜನಿಕ ಸುರಕ್ಷತೆಯನ್ನು ಕಲ್ಪಿಸುವುದು ಅತ್ಯಂತ ಪ್ರಮುಖವಾದ ವಿಷಯವಾಗಿದೆ.
ಬೌರಿಂಗ್ ಮತ್ತು ವೈದೇಹಿ ಆಸ್ಪತ್ರೆಯಲ್ಲಿರುವ ಎಲ್ಲಾ ಗಾಯಾಳುಗಳನ್ನು ಆಯೋಗವು ಭೇಟಿ ಮಾಡಿ ಅವರನ್ನು ವಿಚಾರಿಸುವುದರೊಂದಿಗೆ ವೈದ್ಯಾಧಿಕಾರಿಗಳಿಗೆ ಎಲ್ಲ ವೈದ್ಯಕೀಯ ನೆರವು ನೀಡಲು ಸೂಚಿಸಿದೆ. ಕಾಲ್ತುಳಿತದಲ್ಲಿ ಮರಣಹೊಂದಿದ 11 ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳನ್ನು ಸಿದ್ದರಾಮಯ್ಯ ಅವರ ಸರ್ಕಾರ ಈಗಾಗಲೇ ಘೋಷಿಸಿರುವುದನ್ನು ಪರಿಗಣಿಸಿ ಇನ್ನೂ 15 ಲಕ್ಷ ರೂ. ಮೃತರ ಕುಟುಂಬಗಳಿಗೆ ಹೆಚ್ಚುವರಿ ಪರಿಹಾರ (ಒಟ್ಟು 25 ಲಕ್ಷ ರೂಗಳನ್ನು) ನೀಡುವಂತೆ ತಿಳಿಸಿದೆ.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ











Click it and Unblock the Notifications