SWR: ಯಶವಂತಪುರ-ತಾಳಗುಪ್ಪ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್..
ಬೆಂಗಳೂರು, ಜುಲೈ 19: ನೈಋತ್ಯ ರೈಲ್ವೆ ವ್ಯಾಪ್ತಿಯಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ, ಹಬ್ಬಗಳ ವಿಶೇಷ ಸಂದರ್ಭಗಳಲ್ಲಿ ರೈಲುಗಳ ವಿಸ್ತರಣೆ, ಹೊಸ ರೈಲು ಕಾರ್ಯಾಚರಣೆ ಮಾಡಲಾಗುತ್ತಿದೆ. ಇದೀಗ ಮಲೆನಾಡು ಭಾಗದ ಜನರಿಗೆ ರೈಲ್ವೆ ಅಧಿಕಾರಿಗಳು ಸಿಹಿ ಸುದ್ದಿ ನೀಡಿದ್ದಾರೆ. ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ಶಿವಮೊಗ್ಗ ಮಾರ್ಗವಾಗಿ ತಾಳಗುಪ್ಪ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲು ಕಾರ್ಯಾಚರಣೆ ಕಲ್ಪಿಸಲಾಗಿದೆ.
ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಯಶವಂತಪುರ- ತಾಳಗುಪ್ಪ ಮಧ್ಯ ಈ ವಿಶೇಷ ಎಕ್ಸ್ಪ್ರೆಸ್ ರೈಲು (06587/06588) ಓಡಿಸಲಾಗುತ್ತದೆ. ಯಶವಂತಪುರ-ತಾಳಗುಪ್ಪ ಎಕ್ಸ್ಪ್ರೆಸ್ ವಿಶೇಷ ರೈಲು (ಸಂಖ್ಯೆ 06587) ಇದೇ ಜುಲೈ 25 ರಂದು ರಾತ್ರಿ 10:30 ಗಂಟೆಗೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗ್ಗೆ 04:15 ಗಂಟೆಗೆ ತಾಳಗುಪ್ಪ ತಲುಪುತ್ತದೆ ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಶೇಷ ರೈಲಿನ ನಿಲುಗಡೆ
ಈ ರೈಲು ತುಮಕೂರನ್ನು 11:18 ಗಂಟೆಗೆ ತಲುಪಿ ಅಲ್ಲಿಂದ 11:20ಕ್ಕೆ ಹೊರಡುತ್ತದೆ. ಇದೇ ರೀತಿ ಮುಂದೆ ತಿಪಟೂರಿಗೆ (00:13/00:15 AM), ಬೀರೂರು, (00:33/00:38 AM), ತರೀಕೆರೆ (01:13/01:15), ಭದ್ರಾವತಿ (01:43/01:45), ಶಿವಮೊಗ್ಗ ಟೌನ್ (02:00/02:02), ಆನಂದಪುರಂ (03:10/03:12) ಮತ್ತು ಸಾಗರ ಜಂಬಗಾರು (03:35/03:37) ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ. ಈ ಮಾರ್ಗದ ರೈಲ್ವೆ ಪ್ರಯಾಣಿಕರಿಗೆ ಈ ವಿಶೇಷ ರೈಲು ಸಾರಿಗೆ ಅನುಕೂಲ ಒದಗಿಸಲಿದೆ.
ಮರಳಿ ತಾಳಗುಪ್ಪದಿಂದ ತಾಳಗುಪ್ಪ-ಯಶವಂತಪುರ ಎಕ್ಸ್ಪ್ರೆಸ್ ವಿಶೇಷ ರೈಲು (06588) ಜುಲೈ 26ರಂದು ಬೆಳಗ್ಗೆ 08:15 ಗಂಟೆಗೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 04:50 ಗಂಟೆಗೆ ಯಶವಂತಪುರ ನಿಲ್ದಾಣಕ್ಕೆ ಬಂದು ಸೇರಲಿದೆ. ಈ ರೈಲು ಮಾರ್ಗ ಮರ್ಧಯೆ ಸಾಗರ ಜಂಬಗಾರು, ಆನಂದಪುರ, ಶಿವಮೊಗ್ಗ ಟೌನ್, ಭದ್ರಾವತಿ, ತರೀಕೆರೆ, ಬೀರೂರು, ತಿಪಟೂರು, ತುಮಕೂರು ಮೂಲಕ ಬೆಂಗಳೂರಿನ ಯಶವಂತಪುರ ನಿಲ್ದಣಾಕ್ಕೆ ಆಗಮಿಸಲಿದೆ.
20 ಬೋಗಿಗಳು
ಈ ರೈಲು ಒಟ್ಟು 20 ಬೋಗಿಗಳನ್ನು ಹೊಂದಿದೆ. ಇದರಲ್ಲಿ 01 ಎಸಿ ಟೈರ್ ಟು, 02 ಎಸಿ ತ್ರಿ ಟೈರ್, 10 ಸ್ಲೀಪರ್ ಕ್ಲಾಸ್, 05 ಜನರಲ್ ಸೆಕೆಂಡ್ ಕ್ಲಾಸ್ ಮತ್ತು ಎರಡು ಕ್ಲಾಸ್ ಲಗೇಜ್ ಬೋಗಿಗಳನ್ನು ಹೊಂದಿರಲಿದೆ. ಪ್ರಯಾಣಿಕರು ಈ ರೈಲು ಸೇವೆ ಸದುಪಯೋಗ ಮಾಡಿಕೊಳ್ಳುವಂತೆ ನೈಋತ್ಯ ರೈಲ್ವೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications