Railway Good News: ಬೆಂಗಳೂರು-ಕಲಬುರಗಿ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್
Bengaluru-Kalaburagi Train: ಕರ್ನಾಟಕದಿಂದ ಹಬ್ಬಗಳ ಪ್ರಯುಕ್ತ ವಿಶೇಷ ರೈಲುಗಳ ಬಿಡುಗಡೆ ಮಾಡಲಾಗುತ್ತದೆ. ಈಗಾಗಲೇ ಕರ್ನಾಟಕದ ವಿವಿಧ ಮೂಲಗಳವರೆಗೂ ರೈಲು ಸಾರಿಗೆ ಸಂಪರ್ಕ ಸಾಧಿಸಲಾಗಿದೆ. ಇದರ ಮುಂದುವರಿದ ಭಾಗವಾಗಿ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ನೈಋತ್ಯ ರೈಲ್ವೆ (SWR) ಬೆಂಗಳೂರು-ಕಲಬುರಗಿ ಮಾರ್ಗದಲ್ಲಿ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಸೇವೆ ಆರಂಭಿಸಿದೆ.
ಬೆಂಗಳೂರು-ಕಲಬುರಗಿ ಮಾರ್ಗದಲ್ಲಿ 6 ವಿಶೇಷ ಎಕ್ಸ್ಪ್ರೆಸ್ ರೈಲುಗಳು ಸೇವೆ ಇದೇ ನವೆಂಬರ್ 22ರ ಶನಿವಾರದಿಂದ ಆರಂಭವಾಗಿದ್ದು ಡಿಸೆಂಬರ್ 28ರವರೆಗೆ ಸೇವೆ ಇರಲಿದೆ. ಈ ರೈಲುಗಳು ಕಲಬುರಗಿ-ಬೆಂಗಳೂರು-ಕಲಬುರಗಿವರೆಗೆ ಸಂಚಾರ ಮಾಡಲಿವೆ. ಒಟ್ಟು ಆರು ಟ್ರಿಪ್ಗಳ ಸೇವೆ ಇದಾಗಿದೆ. ಪ್ರಯಾಣಿಕರ ಹೆಚ್ಚಿದ ಬೇಡಿಕೆ ಗಮನದಲ್ಲಿಟ್ಟುಕೊಂಡು ಈ ವಿಶೇಷ ಸೇವೆಗೆ ಅನುಮೋದನೆ ನೀಡಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಬೆಂಗಳೂರು ಕಂಟೋನ್ಮೆಂಟ್ ವಿಶೇಷ ರೈಲು (06207) ನವೆಂಬರ್ 22ರಿಂದ ಡಿಸೆಂಬರ್ 27ರವರೆಗೆ ಪ್ರತೀ ಶನಿವಾರ ರಾತ್ರಿ 7:20 ಕ್ಕೆ ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣದಿಂದ ಹೊರಡುತ್ತದೆ. ಮರುದಿನ ದಿನ ಬೆಳಗ್ಗೆ 7:30ಕ್ಕೆ ಕಲಬುರಗಿಗೆ ತಲುಪುತ್ತದೆ. ಅದೇ ರೀತಿ ಕಲಬುರಗಿ-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ರೈಲು (06208) ನವೆಂಬರ್ 23ರಿಂದ ಡಿಸೆಂಬರ್ 28ರವರೆಗೆ ಪ್ರತೀ ಭಾನುವಾರ ಬೆಳಗ್ಗೆ 9:35 ಕ್ಕೆ ಕಲಬುರಗಿಯಿಂದ ಹೊರಡುತ್ತದೆ. ಅದೇ ದಿನ ರಾತ್ರಿ 8:30 ಕ್ಕೆ ಬೆಂಗಳೂರು ನಿಲ್ದಾಣ ಬಂದು ತಲುಪುತ್ತದೆ.
ಈ ರೈಲುಗಳು ಮಾರ್ಗ ಮಧ್ಯ ಎರಡು ಬದಿಯಲ್ಲಿ ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುತ್ತಾಕಲ್, ಯಾದಗಿರಿ, ರೈಚೂರು, ರಾಯಚೂರು ಈಸ್ಟ್ ಆದೆಂತಹ ಪ್ರಮುಖ ನಿಲ್ದಾಣಗಳಲ್ಲಿ ನಿಲ್ಲಲಿವೆ. ಪ್ರಯಾಣಿಕರಿಗೆ ಸುಗಮ ಸಂಚಾರ ಒದಗಿಸುವ ಉದ್ದೇಶದಿಂದ 22 ಕೋಚ್ಗಳನ್ನು ಹೊಂದಿರುವ ಈ ವಿಶೇಷ ರೈಲುಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.
ರೈಲುಗಳ ಪ್ರಯಾಣಿಕರು ನಿಖರ ಸಮಯ ಮತ್ತು ನಿಲ್ದಾಣ ಮಾಹಿತಿ ಪಡೆಯಲು NTES ಆಪ್, 139 ಸೇವೆ, ಅಥವಾ www.enquiry.indianrail.gov.in ವೆಬ್ಸೈಟ್ ಬಳಕೆ ಮಾಡುವಂತೆ ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
-
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications