Chikkamgaluru-Tirupati Train: ರಾಜ್ಯದ ವಿವಿಧ ಜಿಲ್ಲೆಗಳ ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ ಕೊಟ್ಟ ವಿ.ಸೋಮಣ್ಣ
ಬೆಂಗಳೂರು, ಜೂನ್ 28: ಮಲೆನಾಡು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳ ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ತಿರುಗಪತಿಗೆ ಹೋಗುವವರಿಗೆ ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರು ಗುಡ್ ನ್ಯೂಸ್ ನೀಡಿದ್ದಾರೆ.
ತಿರುಪತಿಯ ಶ್ರೀ ವೆಂಕಟೇಶ್ವರನ ದರ್ಶನಕ್ಕಾಗಿ ಪ್ರಯಾಣಿಸುವವರಿಗೆ ವಿಶೇಷ ರೈಲು ಸೇವೆ ಮೂಲಕ ಅನುಕೂಲ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಹೌದು, ಕರ್ನಾಟಕದ ಮಲೆನಾಡಿನಿಂದ ತಿರುಪತಿಗೆ ವಿಶೇಷ ರೈಲು ಕಾರ್ಯಾಚರಣೆ ಆರಂಭವಾಗಲಿದೆ ಎಂದು ಖುದ್ದು ರಾಜ್ಯ ರೈಲ್ವೆ ಸಚಿವರೇ ಅಧಿಕೃತ ಮಾಹಿತಿ ನೀಡಿದ್ದಾರೆ. ರಾಜ್ಯದ ಮಲೆನಾಡು, ತುಮಕೂರು, ಬೆಂಗಳೂರು ಹಾಗೂ ಕೋಲಾರ ಭಾಗದ ಭಕ್ತರಿಗೆ ಸೌಲಭ್ಯ ಕಲ್ಪಿಸಲು ಚಿಕ್ಕಮಗಳೂರಿನಿಂದ ತಿರುಪತಿಗೆ ನೂತನ ವಾರದ ರೈಲಿನ (Tirupati Weekly Train 17423/17424) ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ. ವಾರದ ಯಾವ ದಿನ ಸಂಚರಿಸುತ್ತದೆ. ಸಮಯ, ನಿಲುಗಡೆ ವಿವರ ಇಲ್ಲಿದೆ.

ಚಿಕ್ಕಮಗಳೂರಿನಿಂದ ತಿರುಪತಿಗೆ ಪ್ರತಿ ಗುರುವಾರ ಮತ್ತು ಶುಕ್ರವಾರ ಸಂಚರಿಸುತ್ತಿದೆ. ಗುರುವಾರ ತಿರುಪತಿಯಿಂದ ಹಾಗೂ ಪ್ರತಿ ಶುಕ್ರವಾರ ಚಿಕ್ಕಮಗಳೂರಿನಿಂದ ಈ ರೈಲು ಹೊರಡಲಿದೆ. ಈ ಭಾಗದ ಜನರು ಈ ವಿಶೇಷ ರೈಲಿನ ಸೌಲಭ್ಯ ಪಡೆದುಕೊಳ್ಳಬೇಕೆಂದು ಸಚಿವ ವಿ.ಸೋಮಣ್ಣ ಅವರು ಮನವಿ ಮಾಡಿದ್ದಾರೆ. ಈ ಮೂಲಕ ಮಲೆನಾಡಿನ ಭಾಗದ ಅನೇಕರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.
ರೈಲು ವೇಳಾಪಟ್ಟಿ ಸಮಯ, ವಿವರ
* ತಿರುಪತಿ-ಚಿಕ್ಕಮಗಳೂರು ಸಾಪ್ತಾಹಿಕ ವಿಶೇಷ ರೈಲು (ಸಂಖ್ಯೆ 17423) ಪ್ರತಿ ಗುರುವಾರ ರಾತ್ರಿ 09 ಗಂಟೆಗೆ ತಿರುಪತಿ ನಿಲ್ದಾಣದಿಂದ ಹೊರಡಲಿದೆ. ಮರುದಿನ ಬೆಳಗ್ಗೆ 10.30ಕ್ಕೆ ಚಿಕ್ಕಮಗಳೂರು ಬಂದು ಸೇರಲಿದೆ.
* ಚಿಕ್ಕಮಗಳೂರು-ತಿರುಪತಿ ಸಾಪ್ತಾಹಿಕ ವಿಶೇಷ ರೈಲು ( ಸಂಖ್ಯೆ 17424) ಚಿಕ್ಕಮಗಳೂರು ನಿಲ್ದಾಣದಿಂದ ಸಂಜೆ 5.30ಕ್ಕೆ ಹೊರಡಲಿದ್ದು, ಶನಿವಾರ ಬೆಳಗ್ಗೆ 7.40ಕ್ಕೆ ತಿರುಪು ತಲುಪುತ್ತದೆ.
ರೈಲು ನಿಲುಗಡೆ ನಿಲ್ದಾಣಗಳು ಯಾವುವು?
ಚಿತ್ತೂರು, ಕಟ್ಟಾಡಿ, ಕುಪ್ಪಂ, ಬಂಗಾರಪೇಟೆ, ವೈಟ್ಫಿಲ್ಡ್, ಕೆ.ಆರ್.ಪುರಂ, ಎಸ್ಎಂವಿಟಿ ಬೆಂಗಳೂರು, ಚಿನ್ನಬಾಣಾವರ, ತುಮಕೂರು, ತಿಪಟೂರು, ಅರಸೀಕರೆ, ದೇವನೂರು, ಬೀರೂರು, ಕಡೂರು, ಬಿಸಲೇಹಳ್ಳಿ ಮತ್ತು ಸಹರಾಯಪಟ್ಟಣ ರೈಲು ನಿಲ್ದಾಣಗಳಲ್ಲಿ ಎರಡು ಬದಿ ಸಂಚಾರ ವೇಳೆ ನಿಲುಗಡೆ ನೀಡುತ್ತದೆ. ಎಸಿ ಟೈರ್, ಸಾಮಾನ್ಯ ದರ್ಜೆ, ದ್ವಿತಿಯ ದರ್ಜೆ, ಜನರಲ್ ಕೋಚ್ ಸೇರಿದಂತೆ ಎಲ್ಲ ಬಗೆಯ ಕೋಚ್ಗಳು ಇದರಲ್ಲಿರಲಿವೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications