SWR: ಹುಬ್ಬಳ್ಳಿಯಿಂದ ದೀಪಾವಳಿಗೆ ವಿಶೇಷ ರೈಲುಗಳ ಕಾರ್ಯಾಚರಣೆ, ವೇಳಾಪಟ್ಟಿ ಹೀಗಿದೆ
ಬೆಂಗಳೂರು, ಸೆಪ್ಟಂಬರ್ 01: ಗಣೇಶ ಹಬ್ಬದ ಈಗಷ್ಟೇ ಕೊನೆಗೊಂಡಿದೆ. ಜನರು ಛತ್, ದಸರಾ ಹಬ್ಬ ಹಾಗೂ ಬೆಳಕಿನ ಹಬ್ಬ ದೀಪಾವಳಿ 2025 ಸಡಗರಕ್ಕೆ ಸಜ್ಜಾಗುತ್ತಿದ್ದಾರೆ. ಈ ಹಬ್ಬಗಳ ಸಮಯದಲ್ಲಿ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ನೈಋತ್ಯ ರೈಲ್ವೆಯು (South Western Railway) ಎಸ್ಎಸ್ಎಸ್ ಹುಬ್ಬಳ್ಳಿಯಿಂದ ವಿಶೇಷ ರೈಲುಗಳ ಕಾರ್ಯಾಚರಣೆ ಮಾಡುವುದಾಗಿ ತಿಳಿಸಿದೆ. ಹಾಗಾದರೆ ಎಲ್ಲಿಗೆ ರೈಲು ಸಂಚಾರ, ಸಮಯ, ವೇಳಾಪಟ್ಟಿ ಪೂರ್ಣ ಮಾಹಿತಿ ಇಲ್ಲಿದೆ.
ಸೋಮವಾರ ನೈಋತ್ಯ ರೈಲ್ವೆ ನೀಡಿರುವ ಮಾಹಿತಿ ಪ್ರಕಾರ, ಎಸ್ಎಸ್ಎಸ್ ಹುಬ್ಬಳ್ಳಿ ಜಂಕ್ಷನ್ನಿಂದ-ರಕ್ಸೌಲ್ (ಬಿಹಾರ) ನಡುವೆ ವಿಶೇಷ ರೈಲುಗಳನ್ನು ಓಡಿಸಲಿದೆ. ಈ ರೈಲು ಬೆಂಗಳೂರಿನ ಮಾರ್ಗವಾಗಿ ಸಾಗುವುದರಿಂದ ಇದರಿಂದ ಕರ್ನಾಟಕದ ವಿವಿಧ ಜಿಲ್ಲೆಗಳ ಪ್ರಯಾಣಿಕರಿಗೂ ಹೆಚ್ಚುವರಿ ರೈಲು ಸಾರಿಗೆ ಸಿಕ್ಕಂತಾಗುತ್ತದೆ. ಈ ರೈಲಿನ ಸಂಖ್ಯೆ, ಕಾರ್ಯಾಚರಣೆ, ಮಾರ್ಗಗಳ ವಿವರ ಇಲ್ಲಿದೆ.

SSS ಹುಬ್ಬಳ್ಳಿ-ರಕ್ಸೌಲ್ ಎಕ್ಸ್ಪ್ರೆಸ್ ರೈಲು (ಸಂಖ್ಯೆ 07357) ಸೆಪ್ಟಂಬರ್ 06 ರಿಂದ 27.12.2025 ರವರೆಗೆ ಕಾರ್ಯಾಚರಣೆ ಮಾಡಲಿದೆ. ಪ್ರತಿ ಶನಿವಾರ ಬೆಳಗ್ಗೆ 9:00 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು ಸೋಮವಾರ ಮಧ್ಯಾಹ್ನ 22:05 ಗಂಟೆಗೆ ರಕ್ಸೌಲ್ ತಲುಪುತ್ತದೆ. ಮರಳಿ ಅದೇ ದಿಕಿನಲ್ಲಿ ರಕ್ಸೌಲ್-SSS ಹುಬ್ಬಳ್ಳಿ ಎಕ್ಸ್ಪ್ರೆಸ್ ರೈಲು (07358) 09.09.2025 ರಿಂದ 30.12.2025 ರವರೆಗೆ ಸಂಚಾರ ಮಾಡಲಿದೆ. ಪ್ರತಿ ಮಂಗಳವಾರ ಸಂಜೆ 4:55 ಗಂಟೆಗೆ ರಕ್ಸೌಲ್ನಿಂದ ಹೊರಟು ಶುಕ್ರವಾರ ಬೆಳಗ್ಗೆ 05:25 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಗೆ ಬಂದು ಸೇರುತ್ತದೆ.
ನಿಲುಗಡೆಯ ನಿಲ್ದಾಣಗಳು ಯಾವುವು?
ಹಬ್ಬದ ಋತುವಿನ ಈ ವಿಶೇಷ ರೈಲುಗಳು ಎರಡು ಬದಿ ಸಂಚಾರದ ವೇಳೆ ಎಸ್ಎಂಎಂ ಹಾವೇರಿ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಲಹಂಕ, ಧರ್ಮಾವರಂ, ಗುಂತಕಲ್, ಕೃಷ್ಣಾ, ಸಿಕಂದರಾಬಾದ್, ಕಾಜಿಪೇಟ್, ಬಲ್ಹರ್ಷಾ, ಚಂದ್ರಾಪುರ, ನಾಗ್ಪುರ, ಆಮ್ಲಾ, ಬೇತುಲ್, ಇಟಾರ್ಸಿ, ಪಿಪಾರಿಯಾ, ಮದನ್ಸಿಂಗ್, ಮಹಾನ್ಪುರ, ನರಸಿಂಗ್, ಪ್ರಯಾಗರಾಜ್ ಛೇಕಿ, ಮಿರ್ಜಾಪುರ್, ಪಂ.ದೀನ್ ದಯಾಳ್ ಉಪಾಧ್ಯಾಯ ಜೂ., ಬಕ್ಸರ್, ಅರಾ, ದಾನಪುರ್, ಪಾಟ್ಲಿಪುತ್ರ, ಸೋನ್ಪುರ್, ಹಾಜಿಪುರ್, ಮುಜಾಫರ್ಪುರ್, ಸಿತಾಮರ್ಹಿ ಮತ್ತು ಬೈರ್ಗಾನಿಯಾ ನಿಲ್ದಾಣಗಳಲ್ಲಿ ನಿಲುಗಡೆ ನೀಡುತ್ತದೆ.
ಒಟ್ಟು 23 ಕೋಚ್ಗಳನ್ನು ಹೊಂದಿರುವ ಈ ರೈಲುಗಳಲ್ಲಿ 02 ಎಸಿ 2-ಟೈರ್, 05 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 04 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 02 ಎಸ್ಎಲ್ಆರ್/ಡಿ ಕೋಚ್ಗಳು ಇವೆ. ಛತ್, ದಸರಾ ಹಾಗೂ ದೀಪಾವಳಿ ಹಬ್ಬಕ್ಕೆ ತೆರಳುವ ಲಕ್ಷಾಂತರ ಪ್ರಯಾಣಿಕರು ಈ ಸೌಲಭ್ಯ ಪಡೆದುಕೊಳ್ಳುವಂತೆ ನೈಋತ್ಯ ರೈಲ್ವೆ ಅಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications