ನೈಋತ್ಯ ರೈಲ್ವೆ: ₹85,000 ಕೋಟಿ ಯೋಜನೆಗಳಿಗೆ ಇಂದು ಪ್ರಧಾನಿ ಚಾಲನೆ
ಹುಬ್ಬಳ್ಳಿ, ಮಾರ್ಚ್ 12: ಕರ್ನಾಟಕದ ನೈಋತ್ಯ ರೈಲ್ವೆ ವಲಯ ವ್ಯಾಪ್ತಿಯಲ್ಲಿ ಹಾಗೂ ದೇಶದ ವಿವಿಧ ಹೊಸ ವಂದೇ ಭಾರತ್ ರೈಲುಗಳು, ಅಭಿವೃದ್ಧಿ ಯೋಜನೆಗಳ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಂಗಳವಾರ (ಮಾ.12) ಚಾಲನೆ ನೀಡಲಿದ್ದಾರೆ.
ಈ ಪೈಕಿ ನೈಋತ್ಯ ರೈಲ್ವೆ ವಲಯ (SWR) ವ್ಯಾಪ್ತಿಯಲ್ಲಿ 85,000 ಕೋಟಿ ರೂಪಾಯಿ ಯೋಜನೆಗಳ ಅನುಷ್ಠಾನಕ್ಕೆ ಆನ್ ಲೈನ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಲಿದ್ದಾರೆ. ಈ ಮೂಲಕ ಯೋಜನೆಗಳನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ನೀಡಿದರು.

ರೂ.5,142 ಕೋಟಿ ಯೋಜನೆಗಳು ಜಾರಿ
ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ, ಈ ಪೈಕಿ ಕೆಲವು ಉದ್ಘಾಟನೆ ಹಾಗೂ ಇನ್ನುಳಿದ ಹಲವು ಯೋಜನೆಗಳು ಶಂಕುಸ್ಥಾಪನೆಗೊಳ್ಳಲಿವೆ. ನೈಋತ್ಯ ರೈಲ್ವೆ ವಲಯದಲ್ಲಿ ಒಟ್ಟು 5,142 ಕೋಟಿ ಮೊತ್ತದ ಯೋಜನೆಗಳು ಜಾರಿಯಾಗುತ್ತಿವೆ ಎಂದು ತಿಳಿಸಿದ್ದಾರೆ.
27.79 ಕೋಟಿ ರೂ.ಗಳ ವೆಚ್ಚದಲ್ಲಿ ಹುಬ್ಬಳ್ಳಿ ಮತ್ತು ಥಣಿಸಂದ್ರ ರೈಲ್ವೆ ವರ್ಕ್ಶಾಪ್ನಲ್ಲಿ ಡೆಮು/ಮೆಮು ಶೆಡ್ ನಿರ್ಮಾಣಕ್ಕೆ ಪ್ರಧಾನಿಯವರು ಶಂಕುಸ್ಥಾಪನೆ ನೆರವೇರಿಸುವರು. ಇದೇ ಸಂದರ್ಭದಲ್ಲಿ ದೇಶದ 10 ವಂದೇ ಭಾರತ್ ರೈಲು ಸಂಚಾರ ಸೇವೆಗೆ ಚಾಲನೆ ನೀಡಲಿದ್ದಾರೆ.
ಗುಡಗೇರಿ ರೈಲು ನಿಲ್ದಾಣ: ಮಳಿಗೆಗೆ ಚಾಲನೆ
ಗುಜರಾತ್ನಲ್ಲಿ ಮಂಗಳವಾರ ಬೆಳಗ್ಗೆ 9.30ಕ್ಕೆ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪ್ರಾಲ್ಗೊಳ್ಳಲಿದ್ದಾರೆ. ಆನ್ ಲೈನ್ ವೇದಿಕೆ ಮೂಲಕ ಹುಬ್ಬಳ್ಳಿ ವಿಭಾಗೀಯ ರೈಲ್ವೆ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಅವರು ತಿಳಿಸಿದರು.

ಹುಬ್ಬಳ್ಳಿ, ಧಾರವಾಡ ಗುಡಗೇರಿ ರೈಲು ನಿಲ್ದಾಣಗಳಲ್ಲಿ 'ಒಂದು ನಿಲ್ದಾಣ-ಒಂದು ಉತ್ಪನ್ನ' ಯೋಜನೆಯಡಿ ಮಳಿಗೆಗಳನ್ನು ತೆರೆಯಲಾಗಿದೆ. ಈ ಸ್ಥಳೀಯ ಸಣ್ಣ ವ್ಯಾಪಾರಿಗಳಿಗೆ ಅನುಕೂಲ ಮಾಡಿಕೊಡಲಾಗುವ ಯೋಜನೆಗಳಿಗೂ ಇಂದು ಚಾಲನೆ ಸಿಗಲಿವೆ. ಒಟ್ಟಾರೆ ಈ ಎಲ್ಲ ಯೋಜನೆಗಳ ಅನುಷ್ಠಾನನಗಳು ದೇಶದ ರೈಲ್ವೆ ಅಭಿವೃದ್ಧಿಯಲ್ಲಿ ಹೊಸ ಮೈಲಿಗಲ್ಲಾಗಲಿವೆ ಎಂದು ಪ್ರಹ್ಲಾದ್ ಜೋಶಿಯವರು ಬಣ್ಣಿಸಿದರು.
ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಎಲ್ಲ ಪ್ರಯಾಣಿಕರಿಗೂ ಕೈಗೆಟಕುವ ದರದಲ್ಲಿ ಗುಣಮಟ್ಟದ ಔಷಧಿ ದೊರೆಯಲು ಪ್ರಧಾನ ಮಂತ್ರಿ ಜನೌಷಧಿ ಮಳಿಗೆ ಕೂಡ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಲೋಕಾರ್ಪಣೆಗೊಳ್ಳಲಿದೆ ಎಂದು ಅವರು ವಿವರಿಸಿದರು.
-
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
2000 ರೈಲು ನಿಲ್ದಾಣಗಳಲ್ಲಿ ಸ್ಥಳೀಯ ಕಲೆಯ ಸೊಬಗು: 1.32 ಲಕ್ಷ ಕುಶಲಕರ್ಮಿಗಳಿಗೆ ಮಾರುಕಟ್ಟೆ ಭಾಗ್ಯ -
Indian Railway: ಬಣ್ಣದಿಂದಲೇ ರೈಲುಗಳ ವ್ಯತ್ಯಾಸ ಗುರುತಿಸುವುದು ಹೇಗೆ? -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ












Click it and Unblock the Notifications