Karnataka Rails: ಗುಡ್ನ್ಯೂಸ್: ದಸರಾ, ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ರೈಲು ಸಂಚಾರ...SWR
South Western Railway: ಜನರು ದಸರಾ ಹಬ್ಬ ನಂತರ ದೀಪಾವಳಿ ಆಚರಣೆಗೆ ಸಜ್ಜಾಗುತ್ತಿದ್ದಾರೆ. ಈ ಹಬ್ಬಗಳ ಪ್ರಯುಕ್ತ ತಮ್ಮ ಊರುಗಳಿಗೆ ತೆರಳುವ ಹಿನ್ನೆಲೆಯಲ್ಲಿ ಜನದಟ್ಟಣೆ ಹೆಚ್ಚಾಗುತ್ತದೆ. ಈ ಪ್ರಯುಕ್ತ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ದಕ್ಷಿಣ ಪಶ್ಚಿಮ ರೈಲು ಮಂಡಳಿ ಹಲವು ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ. ಈ ರೈಲುಗಳು ಮೈಸೂರು-ರಾಮೇಶ್ವರಂ, ಮೈಸೂರು-ತಿರುನಲ್ವೇಲಿ ಹಾಗೂ ಮೈಸೂರು-ಕಟ್ಪಾಡಿ ಮಾರ್ಗಗಳಲ್ಲಿ ಸಂಚರಿಸಲಿವೆ. ಯಾವುವು ರೈಲುಗಳು, ಸಂಖ್ಯೆ ಸಂಚಾರದ ಸಮಯ, ವೇಳಾಪಟ್ಟಿ ಇಲ್ಲಿದೆ.
* ಮೈಸೂರು-ರಾಮೇಶ್ವರಂ ಮಾರ್ಗದಲ್ಲಿ ಸೆಪ್ಟೆಂಬರ್ 15 ರಿಂದ ಅಕ್ಟೋಬರ್ 27 ರವರೆಗೆ ಪ್ರತೀ ಸೋಮವಾರ (06237) ಮೈಸೂರು-ರಾಮೇಶ್ವರಂ ವಿಶೇಷ ರೈಲು ಸಂಜೆ 6.35ಕ್ಕೆ ಹೊರಡುತ್ತದೆ. ಮರುದಿನ ಮಂಗಳವಾರ ಬೆಳಗ್ಗೆ 10.00ಕ್ಕೆ ತಲುಪಲಿದೆ. ಹಿಂತಿರುಗುವ ರೈಲು (06238) ರಾಮೇಶ್ವರಂ-ಮೈಸೂರು ರೈಲು ಸೆಪ್ಟೆಂಬರ್ 16 ರಿಂದ ಅಕ್ಟೋಬರ್ 28 ರವರೆಗೆ ಪ್ರತೀ ಮಂಗಳವಾರ ಮಧ್ಯಾಹ್ನ 3.10ಕ್ಕೆ ಹೊರಟು, ಬುಧವಾರ ಬೆಳಿಗ್ಗೆ 7.45ಕ್ಕೆ ಮೈಸೂರಿಗೆ ತಲುಪಲಿದೆ.

* ಮೈಸೂರು-ತಿರುನಲ್ವೇಲಿ ಮಾರ್ಗದಲ್ಲಿ ಸೆಪ್ಟೆಂಬರ್ 15ರಿಂದ ನವೆಂಬರ್ 24ರವರೆಗೆ ಪ್ರತೀ ಸೋಮವಾರ (06239) ಮೈಸೂರು-ತಿರುನಲ್ವೇಲಿ ರೈಲು ರಾತ್ರಿ 8.15ಕ್ಕೆ ಹೊರಟು, ಮಂಗಳವಾರ ಬೆಳಿಗ್ಗೆ 10.50ಕ್ಕೆ ತಲುಪಲಿದೆ. ಹಿಂತಿರುಗುವ ರೈಲು (06240) ತಿರುನಲ್ವೇಲಿ-ಮೈಸೂರು ರೈಲು ಸೆಪ್ಟೆಂಬರ್ 16 ರಿಂದ ನವೆಂಬರ್ 25 ರವರೆಗೆ ಪ್ರತೀದಿನ ಮಂಗಳವಾರ ಬೆಳಿಗ್ಗೆ 5.40ಕ್ಕೆ ಹೊರಟು, ಬುಧವಾರ ಬೆಳಿಗ್ಗೆ 11.50ಕ್ಕೆ ಮೈಸೂರಿಗೆ ಬಂದು ಸೇರಲಿದೆ.
* ಇದೇ ರೀತಿಯಲ್ಲಿ, ಮೈಸೂರು-ಕಟ್ಪಾಡಿ ಮಾರ್ಗದಲ್ಲಿ ಸೆಪ್ಟೆಂಬರ್ 18ರಿಂದ ನವೆಂಬರ್ 29ರವರೆಗೆ ಪ್ರತೀ ಗುರುವಾರ (06243) ಮೈಸೂರು-ಕಟ್ಪಾಡಿ ರೈಲು ರಾತ್ರಿ 9.20ಕ್ಕೆ ಹೊರಟು, ಶುಕ್ರವಾರ ಬೆಳಗ್ಗೆ 11.00ಕ್ಕೆ ತಲುಪಲಿದೆ. ಹಿಂತಿರುಗುವ (06244) ಕಟ್ಪಾಡಿ-ಮೈಸೂರು ರೈಲು ಸೆಪ್ಟೆಂಬರ್ 19 ರಿಂದ ನವೆಂಬರ್ 29 ರವರೆಗೆ ಪ್ರತೀ ಶುಕ್ರವಾರ ಸಂಜೆ 6.45ಕ್ಕೆ ಹೊರಟು, ಶನಿವಾರ ಬೆಳಿಗ್ಗೆ 7.45ಕ್ಕೆ ಮೈಸೂರಿಗೆ ತಲುಪಲಿದೆ.
* ಈ ವಿಶೇಷ ರೈಲುಗಳ ಮೂಲಕ ಪ್ರಯಾಣಿಕರಿಗೆ ಹಬ್ಬದ ದಿನಗಳಲ್ಲಿ ಹೆಚ್ಚುವರಿ ಸೌಲಭ್ಯ ದೊರೆಯಲಿದೆ. ರೈಲು ಮತ್ತು ಆಸನ ಲಭ್ಯತೆ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ www.enquiry.indianrail.gov.in , http://www.enquiry.indianrail.gov.in ಅಥವಾ NTES ಮೊಬೈಲ್ ಆಪ್ ಮೂಲಕ ಮಾಹಿತಿ ತಿಳಿದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್












Click it and Unblock the Notifications