ಕರ್ನಾಟಕ ಬಂದ್ಗೆ ಬೆಂಬಲ ನೀಡಿದ ಟಿ.ಎ.ನಾರಾಯಣ ಗೌಡ
ಬೆಂಗಳೂರು, ಜನವರಿ 24 : ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಜ.25ರ ಕರ್ನಾಟಕ ಬಂದ್ಗೆ ಬೆಂಬಲ ನೀಡಿದ್ದಾರೆ. ಕನ್ನಡ ಒಕ್ಕೂಟ ಗುರುವಾರ ಕರ್ನಾಟಕ ಬಂದ್ ಕರೆ ನೀಡಿದೆ.
ಟಿ.ಎ.ನಾರಾಯಣ ಗೌಡ ಅವರು ಬುಧವಾರ ಈ ಕುರಿತು ಮಾಹಿತಿ ನೀಡಿದ್ದಾರೆ. 'ಎಲ್ಲಾ ಜಿಲ್ಲೆಗಳಲ್ಲಿ ಬಂದ್ಗೆ ಬೆಂಬಲ ನೀಡಲಾಗುತ್ತದೆ' ಎಂದು ಅವರು ಸ್ಪಷ್ಟಪಡಿಸಿದ್ದಾರೆ.

'ರಕ್ಷಣಾ ವೇದಿಕೆಯ ಕಾರ್ಯಕರ್ತರು ಎಲ್ಲಾ ಜಿಲ್ಲೆಗಳಲ್ಲಿ ರೈಲುಗಳನ್ನು ತಡೆದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಮಹದಾಯಿ ವಿವಾದ ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶ ಮಾಡಬೇಕು ಎಂದು ಒತ್ತಾಯಿಸಲಿದ್ದಾರೆ' ಎಂದರು.
ಮಹದಾಯಿ ಯೋಜನೆ ಜಾರಿಗೊಳಿಸಬೇಕು, ವಿವಾದ ಬಗೆಹರಿಸಲು ಪ್ರಧಾನಿ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿ ಕನ್ನಡ ಒಕ್ಕೂಟ ಜ.25ರ ಗುರುವಾರ ಕರ್ನಾಟಕ ಬಂದ್ಗೆ ಕರೆ ನೀಡಿದೆ.
ಗುರುವಾರ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ತನಕ ಬಂದ್ ನಡೆಯಲಿದೆ. ಅಗತ್ಯ ಸೇವೆಗಳಿಗೆ ಬಂದ್ ನಿಂದ ವಿನಾಯಿತಿ ನೀಡಲಾಗಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಗುರುವಾರ ಮೈಸೂರಿಗೆ ಆಗಮಿಸಲಿದ್ದಾರೆ, ಪರಿವರ್ತನಾ ಯಾತ್ರೆಯ ಸಮಾವೇಶ ನಡೆಯಲಿದೆಯೇ?, ಇಲ್ಲವೇ ಎಂಬುದು ಇನ್ನೂ ಅಂತಿಮವಾಗಿಲ್ಲ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications