ಸರ್ಕಾರ ಕುರಿ ಕಾಯಲು ತೋಳವನ್ನು ಬಿಟ್ಟಂತೆ ಆಗಿದೆ
ಬೆಂಗಳೂರು, ಫೆಬ್ರವರಿ 24 : "ಬಿಜೆಪಿ ಸರ್ಕಾರ ಕಥೆಗಳನ್ನು, ಕಾರಣಗಳನ್ನು ಹೇಳುವುದನ್ನು ಬಿಟ್ಟು ಆನಂದ್ ಸಿಂಗ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು" ಎಂದು ಮಾಜಿ ಸಂಸದ, ಕಾಂಗ್ರೆಸ್ ನಾಯಕ ವಿ. ಎಸ್. ಉಗ್ರಪ್ಪ ಒತ್ತಾಯಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ವಿ. ಎಸ್. ಉಗ್ರಪ್ಪ ಪತ್ರಿಕಾಗೋಷ್ಠಿ ನಡೆಸಿದರು. ಅರಣ್ಯ ಸಂಪತ್ತು ದೋಚುವುದು ಸೇರಿದಂತೆ ವಿವಿಧ ಆರೋಪಗಳಿರುವ ಅರಣ್ಯ ಸಚಿವ ಆನಂದ್ ಸಿಂಗ್ ಅವರ ವಿರುದ್ಧದ ಪ್ರಕರಣಗಳು, ಅವರ ವಿರುದ್ಧ ಸಲ್ಲಿಸಲಾದ ಆರೋಪ ಪಟ್ಟಿಗಳ ದಾಖಲೆಗಳನ್ನು ಬಿಡುಗಡೆ ಮಾಡಿದರು.
"ಅರಣ್ಯ ಸಚಿವ ಆನಂದ್ ಸಿಂಗ್ ವಿರುದ್ಧ 14 ಪ್ರಕರಣಗಳು ದಾಖಲಾಗಿದ್ದು, ಇವುಗಳಲ್ಲಿ 7 ಪ್ರಕರಣದಲ್ಲಿ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಎಲ್ಲಾ ಪ್ರಕರಣಗಳು ಅರಣ್ಯ ಇಲಾಖೆಗೆ ಸಂಬಂಧಿಸಿದ್ದರೂ ಅವರಿಗೆ ಅರಣ್ಯ ಇಲಾಖೆ ನೀಡುವ ಮೂಲಕ ಯಡಿಯೂರಪ್ಪ ಸರ್ಕಾರ ತೋಳವನ್ನೇ ಕುರಿ ಕಾಯಲು ಬಿಟ್ಟಂತೆ ಆಗಿದೆ" ಎಂದು ದೂರಿದರು.
"ಭ್ರಷ್ಟಾಚಾರ ರಹಿತ, ಪಾರದರ್ಶಕ ಆಡಳಿತದ ಭರವಸೆ ನೀಡುವ ಪ್ರಧಾನಿ ನರೇಂದ್ರ ಮೋದಿ ಅವರು, ಈ ಕೂಡಲೇ ಆನಂದ್ ಸಿಂಗ್ ವಿರುದ್ಧ ಕ್ರಮಕೈಗೊಳ್ಳುವಂತೆ ಯಡಿಯೂರಪ್ಪ ಸರ್ಕಾರಕ್ಕೆ ನಿರ್ದೇಶನ ನೀಡಬೇಕು" ಎಂದು ಒತ್ತಾಯಿಸಿದರು.

ಸಿದ್ದರಾಮಯ್ಯ ಸಹ ಒತ್ತಾಯ ಮಾಡಿದ್ದರು
ಆನಂದ್ ಸಿಂಗ್ಗೆ ಅರಣ್ಯ ಖಾತೆ ನೀಡಿದ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಹ ಆಕ್ಷೇಪ ವ್ಯಕ್ತಪಡಿಸಿದ್ದರು. "ಅವರು ಎಲ್ಲಿ ಪ್ರಕರಣ ಎದುರಿಸುತ್ತಿದ್ದಾರೆ ಅಂತಹವರಿಗೆ ಅದೇ ಖಾತೆಯನ್ನು ಈ ಸರ್ಕಾರ ನೀಡಿದೆ. ಇದು ಭ್ರಷ್ಟಾಚಾರ ಪೋಷಕ ಸರ್ಕಾರವಾಗುತ್ತದೆ" ಎಂದು ಹೇಳಿದ್ದರು.

ಖಾತೆ ಬದಲಾವಣೆ ಮಾಡಿದ್ದ ಸಿಎಂ
ಸಂಪುಟ ವಿಸ್ತರಣೆ ಮಾಡಿದಾಗ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆನಂದ್ ಸಿಂಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯನ್ನು ನೀಡಿದ್ದರು. ಅರಣ್ಯ ಖಾತೆ ಹೊಣೆಯನ್ನು ಬಿ. ಸಿ. ಪಾಟೀಲ್ಗೆ ನೀಡಲಾಗಿತ್ತು. ಬಳಿಕ ಖಾತೆ ಬದಲಾವಣೆ ಮಾಡಿ ಆನಂದ್ ಸಿಂಗ್ಗೆ ಅರಣ್ಯ ಖಾತೆ ನೀಡಿ, ಬಿ. ಸಿ. ಪಾಟೀಲ್ಗೆ ಕೃಷಿ ಖಾತೆ ಹೊಣೆ ನೀಡಲಾಗಿತ್ತು.

ಆನಂದ್ ಸಿಂಗ್ ಹೇಳುವುದೇನು?
ಖಾತೆ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸಚಿವ ಆನಂದ್ ಸಿಂಗ್, "ನಮ್ಮದು ಗಣಿ ಕುಟುಂಬ. ಗಣಿ ಅಂದ ಮೇಲೆ ಅರಣ್ಯ ಉಲ್ಲಂಘನೆ ಪ್ರಕರಗಳು ಸಹಜ. ವಾಹನ ಇದ್ದ ಮೇಲೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ಇದ್ದಂತೆ, ನಮ್ಮ ಗಣಿ ಕಂಪನಿ ವಿರುದ್ಧ ಕೇಸ್ ದಾಖಲಾಗಿದೆ" ಎಂದು ಹೇಳಿದ್ದರು.

ವರದಿ ಕೇಳಿದ್ದ ಹೈಕಮಾಂಡ್
ಆನಂದ್ ಸಿಂಗ್ ಖಾತೆ ಬಗ್ಗೆ ವಿವಾದ ಉಂಟಾಗುತ್ತಿದ್ದಂತೆ ಬಿಜೆಪಿ ಹೈಕಮಾಂಡ್ ವರದಿ ಕೇಳಿತ್ತು. ಪ್ರತಿಪಕ್ಷಗಳು ಅರಣ್ಯ ಖಾತೆಯನ್ನು ಬದಲಾವಣೆ ಮಾಡಬೇಕು ಎಂದು ಪಟ್ಟು ಹಿಡಿದಿವೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಮಾರ್ಚ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications