ಹೆಚ್ಚಿದ ಅಸಮಾಧಾನ: ಹೈಕಮಾಂಡ್ನಿಂದ ಬಂತು ಖಡಕ್ ಆದೇಶ
Recommended Video
ಬೆಂಗಳೂರು, ಆಗಸ್ಟ್ 28: ಸಚಿವ ಸಂಪುಟ ವಿಸ್ತರಣೆ ಬಳಿಕ ಬಿಜೆಪಿಯಲ್ಲಿ ಎದ್ದಿದ್ದ ಅತೃಪ್ತಿ ಖಾತೆ ಹಂಚಿಕೆ ಬಳಿಕ ಇನ್ನಷ್ಟು ಹೆಚ್ಚಾಗಿದೆ. ಅತೃಪ್ತಿಯನ್ನು ಶಮನ ಮಾಡಲು 'ದಂಡ'ದ ಪ್ರಯೋಗ ಮಾಡಲು ಹೈಕಮಾಂಡ್ ಮುಂದಾಗಿದೆ.
ಯಡಿಯೂರಪ್ಪ ಅವರಿಗೆ ಖಡಕ್ ಆದೇಶವನ್ನು ಬಿಜೆಪಿ ಹೈಕಮಾಂಡ್ ರವಾನಿಸಿದ್ದು, ಅತೃಪ್ತಿ ಹೆಚ್ಚಾದರೆ ಶಿಸ್ತು ಉಲ್ಲಂಘಿಸುವ ಶಾಸಕರಿಗೆ ಅನಾಮತ್ತು ರಾಜೀನಾಮೆ ಪಡೆಯಿರಿ ಎಂದು ಹೇಳಲಾಗಿದೆ..
ಅತೃಪ್ತಿಯನ್ನು ಹೊರಹಾಕುವ ಮೂಲಕ ಪಕ್ಷಕ್ಕೆ ಮುಜುಗರ ಉಂಟು ಮಾಡುವ ಶಾಸಕರು, ಹೈಕಮಾಂಡ್ ನಿರ್ಧಾರವನ್ನು ಪ್ರಶ್ನೆ ಮಾಡುವ ಶಾಸಕರು, ಖಾತೆ ಹಂಚಿಕೆ ಬಗ್ಗೆ ಅಸಮಾಧಾನಿತ ಶಾಸಕರಿಗೆ ಎಚ್ಚರಿಕೆ ನೀಡಿ ಅತೃಪ್ತಿ ಮತ್ತು ಅಶಿಸ್ತು ಮುಂದುವರೆಸಿದರೆ ರಾಜೀನಾಮೆ ಪಡೆಯಿರೆಂದು ಹೈಕಮಾಂಡ್ ಸೂಚನೆ ರವಾನಿಸಿದೆ.

ಕೆಲವು ದಿನಗಳ ಹಿಂದೆ ಯಡಿಯೂರಪ್ಪ ದೆಹಲಿಗೆ ತೆರಳಿದ್ದಾಗ ಯಡಿಯೂರಪ್ಪ ಅವರಿಗೆ . 'ಅತೃಪ್ತರನ್ನು ನಿಭಾಯಿಸುವ ಜವಾಬ್ದಾರಿ ನಿಮ್ಮದೆ, ಅದರಲ್ಲಿ ಹೈಕಮಾಂಡ್ ಮಧ್ಯಪ್ರವೇಶ ಮಾಡುವುದಿಲ್ಲ, ಅನರ್ಹ ಶಾಸಕರ ಜವಾಬ್ದಾರಿಯೂ ನಿಮ್ಮದೇ' ಎಂದು ಯಡಿಯೂರಪ್ಪ ಮೇಲೆ ಎಲ್ಲ ಜವಾಬ್ದಾರಿಯನ್ನು ಹೊರಿಸಿತ್ತು.
ಸಂಪುಟ ವಿಸ್ತರಣೆ ಬಳಿಕ ಸಣ್ಣದಾಗಿ ಪ್ರಾರಂಭವಾಗಿದ್ದ ಅಸಮಾಧಾನ, ಖಾತೆ ಹಂಚಿಕೆ ನಂತರ ದೊಡ್ಡದಾಗಿದ್ದು, ಹಿರಿಯ ಶಾಸಕರು, ಸಚಿವರುಗಳೇ ಅತೃಪ್ತಿ ಹೊರಹಾಕಿದ್ದಾರೆ. ಮೈತ್ರಿ ಸರ್ಕಾರದಲ್ಲಿ ರಾಜ್ಯದ ಜನ ನೋಡಿದ್ದ ಕಚ್ಚಾಟ ನಿಧಾನಕ್ಕೆ ಬಿಜೆಪಿ ಸರ್ಕಾರದಲ್ಲೂ ಪ್ರಾರಂಭವಾಗುವ ಲಕ್ಷಣಗಳು ಕಾಣುತ್ತಿವೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications